Homeಮುಖಪುಟವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ

- Advertisement -
- Advertisement -

“ಲಕ್ಷ ವರ್ಷಗಳ ಹಿಂದೆಯೇ ಪರಮಾಣು ವಿಜ್ಞಾನದ ಬಗ್ಗೆ ಭಾರತಕ್ಕೆ ಗೊತ್ತಿತ್ತು.” ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ. ಹಾಗಾಗಿ ನಾವದನ್ನು ಹೆಚ್ಚು ಪ್ರಚಾರ ಮಾಡಲೇಬೇಕು.

ಈ ಮಾತುಗಳನ್ನು ಕೇಳಿದರೆ ನಿಮಗೆ ಏನನಿಸುತ್ತದೆ? ಯಾರೋ ಜೋಕರ್ ಹೇಳಿದ್ದಾನೆಂದು ನಗಬೇಡಿ. ಇದನ್ನು ಹೇಳಿದವರು ನಮ್ಮ ಮಕ್ಕಳ ಭವಿಷ್ಯವನ್ನು ತೀರ್ಮಾನಿಸುವ, ಭಾರತದ ಶಿಕ್ಷಣದ ನೀತಿಗಳನ್ನು ರೂಪಿಸುವ ನಮ್ಮ ನೂತನ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್.

ಹೌದು ಸಂದೇಹವೇ ಬೇಡ. ಉತ್ತರಖಂಡದ ಮಾಜಿ ಮುಖ್ಯಮಂತ್ರಿ, ಹಾಲಿ ಹರಿದ್ವಾರದಿಂದ ಸಂಸದರಾಗಿ ಆಯ್ಕೆಯಾಗಿ ನೂತನ ಮಾನವ ಸಂಪನ್ಮೂಲ ಸಚಿರಾಗಿ ಆಯ್ಕೆಯಾಗಿರುವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟಿವಿ ವಾಹಿನಿಗೆ ಹೇಳಿದ ಮಾತಿದು. 2014ರ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (ಎಸ್.ಪಿ.ಎ) ಬಿಲ್ ಕುರಿತ ಚರ್ಚೆಯಲ್ಲಿ ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಅವರು “ನಾವಿಂದು ಪರಮಾಣು ವಿಜ್ಞಾನದ ಕುರಿತು ಮಾತಾಡುತ್ತೇವೆ. ಆದರೆ ಒಂದು ಲಕ್ಷ ವರ್ಷಗಳ ಹಿಂದೆಯೇ ಋಷಿ ಕಾನದ್ ರವರು ಪರಮಾಣು ಪರೀಕ್ಷೆ ನಡೆಸಿದ್ದರು” ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ಅಷ್ಟೆ ಅಲ್ಲದೇ ಆ ಕಾಲದಲ್ಲಿಯೇ ನಾವು ಕಸಿ ವಿಜ್ಞಾನವನ್ನು ಸಹ ಕಲಿತಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಗಣೇಶನಿಗೆ ವೇದಗಳ ಕಾಲದಲ್ಲಿಯೇ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು ಎಂಬ ಮಾತನ್ನು ಪುನರುಚ್ಚರಿಸಿದ್ದರು.

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ. ಅವರು ಮುಂದೆ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

“ಪ್ರಾಥಮಿಕ, ಪ್ರೌಢಶಾಲೆಯಿಂದ ಹಿಡಿದು ವಿಶ್ವವಿದ್ಯಾಲಯದವರೆಗೂ ವ್ಯವಹರಿಸುವ, ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವ ಈ ವ್ಯಕ್ತಿ ಈಗ ನಮ್ಮ ನೂತನ ಎಚ್‍ಆರ್‍ಡಿ ಸಚಿವರಾಗಿದ್ದಾರೆ. ನಿಮಗೆ ಸ್ವಾಗತ. #ನ್ಯೂಇಂಡಿಯಾ” ಎಂದು ಮಾರ್ಮಿಕವಾಗಿ ಪೋಸ್ಟ್ ಹಾಕುವ ಮೂಲಕ ಯುವ ಚಿಂತಕ ಧೃವ್ ರಾಠೀ ಫೇಸ್‍ಬುಕ್ ರಮೇಶ್ ಪೋಖ್ರಿಯಾಲ್‍ರವರ ಮೇಲಿನ ಹೇಳಿಕೆಗಳ ಕುರಿತು ‘ದಿ ಹಿಂದೂ’ ಪತ್ರಿಕೆಯಲ್ಲಿ ಬಂದಿರುವ ಲೇಖನವನ್ನು ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...