Homeಮುಖಪುಟವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ

- Advertisement -
- Advertisement -

“ಲಕ್ಷ ವರ್ಷಗಳ ಹಿಂದೆಯೇ ಪರಮಾಣು ವಿಜ್ಞಾನದ ಬಗ್ಗೆ ಭಾರತಕ್ಕೆ ಗೊತ್ತಿತ್ತು.” ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ. ಹಾಗಾಗಿ ನಾವದನ್ನು ಹೆಚ್ಚು ಪ್ರಚಾರ ಮಾಡಲೇಬೇಕು.

ಈ ಮಾತುಗಳನ್ನು ಕೇಳಿದರೆ ನಿಮಗೆ ಏನನಿಸುತ್ತದೆ? ಯಾರೋ ಜೋಕರ್ ಹೇಳಿದ್ದಾನೆಂದು ನಗಬೇಡಿ. ಇದನ್ನು ಹೇಳಿದವರು ನಮ್ಮ ಮಕ್ಕಳ ಭವಿಷ್ಯವನ್ನು ತೀರ್ಮಾನಿಸುವ, ಭಾರತದ ಶಿಕ್ಷಣದ ನೀತಿಗಳನ್ನು ರೂಪಿಸುವ ನಮ್ಮ ನೂತನ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್.

ಹೌದು ಸಂದೇಹವೇ ಬೇಡ. ಉತ್ತರಖಂಡದ ಮಾಜಿ ಮುಖ್ಯಮಂತ್ರಿ, ಹಾಲಿ ಹರಿದ್ವಾರದಿಂದ ಸಂಸದರಾಗಿ ಆಯ್ಕೆಯಾಗಿ ನೂತನ ಮಾನವ ಸಂಪನ್ಮೂಲ ಸಚಿರಾಗಿ ಆಯ್ಕೆಯಾಗಿರುವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟಿವಿ ವಾಹಿನಿಗೆ ಹೇಳಿದ ಮಾತಿದು. 2014ರ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (ಎಸ್.ಪಿ.ಎ) ಬಿಲ್ ಕುರಿತ ಚರ್ಚೆಯಲ್ಲಿ ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಅವರು “ನಾವಿಂದು ಪರಮಾಣು ವಿಜ್ಞಾನದ ಕುರಿತು ಮಾತಾಡುತ್ತೇವೆ. ಆದರೆ ಒಂದು ಲಕ್ಷ ವರ್ಷಗಳ ಹಿಂದೆಯೇ ಋಷಿ ಕಾನದ್ ರವರು ಪರಮಾಣು ಪರೀಕ್ಷೆ ನಡೆಸಿದ್ದರು” ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ಅಷ್ಟೆ ಅಲ್ಲದೇ ಆ ಕಾಲದಲ್ಲಿಯೇ ನಾವು ಕಸಿ ವಿಜ್ಞಾನವನ್ನು ಸಹ ಕಲಿತಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಗಣೇಶನಿಗೆ ವೇದಗಳ ಕಾಲದಲ್ಲಿಯೇ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು ಎಂಬ ಮಾತನ್ನು ಪುನರುಚ್ಚರಿಸಿದ್ದರು.

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ. ಅವರು ಮುಂದೆ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

“ಪ್ರಾಥಮಿಕ, ಪ್ರೌಢಶಾಲೆಯಿಂದ ಹಿಡಿದು ವಿಶ್ವವಿದ್ಯಾಲಯದವರೆಗೂ ವ್ಯವಹರಿಸುವ, ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವ ಈ ವ್ಯಕ್ತಿ ಈಗ ನಮ್ಮ ನೂತನ ಎಚ್‍ಆರ್‍ಡಿ ಸಚಿವರಾಗಿದ್ದಾರೆ. ನಿಮಗೆ ಸ್ವಾಗತ. #ನ್ಯೂಇಂಡಿಯಾ” ಎಂದು ಮಾರ್ಮಿಕವಾಗಿ ಪೋಸ್ಟ್ ಹಾಕುವ ಮೂಲಕ ಯುವ ಚಿಂತಕ ಧೃವ್ ರಾಠೀ ಫೇಸ್‍ಬುಕ್ ರಮೇಶ್ ಪೋಖ್ರಿಯಾಲ್‍ರವರ ಮೇಲಿನ ಹೇಳಿಕೆಗಳ ಕುರಿತು ‘ದಿ ಹಿಂದೂ’ ಪತ್ರಿಕೆಯಲ್ಲಿ ಬಂದಿರುವ ಲೇಖನವನ್ನು ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...