Homeಮುಖಪುಟವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ

- Advertisement -
- Advertisement -

“ಲಕ್ಷ ವರ್ಷಗಳ ಹಿಂದೆಯೇ ಪರಮಾಣು ವಿಜ್ಞಾನದ ಬಗ್ಗೆ ಭಾರತಕ್ಕೆ ಗೊತ್ತಿತ್ತು.” ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ. ಹಾಗಾಗಿ ನಾವದನ್ನು ಹೆಚ್ಚು ಪ್ರಚಾರ ಮಾಡಲೇಬೇಕು.

ಈ ಮಾತುಗಳನ್ನು ಕೇಳಿದರೆ ನಿಮಗೆ ಏನನಿಸುತ್ತದೆ? ಯಾರೋ ಜೋಕರ್ ಹೇಳಿದ್ದಾನೆಂದು ನಗಬೇಡಿ. ಇದನ್ನು ಹೇಳಿದವರು ನಮ್ಮ ಮಕ್ಕಳ ಭವಿಷ್ಯವನ್ನು ತೀರ್ಮಾನಿಸುವ, ಭಾರತದ ಶಿಕ್ಷಣದ ನೀತಿಗಳನ್ನು ರೂಪಿಸುವ ನಮ್ಮ ನೂತನ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್.

ಹೌದು ಸಂದೇಹವೇ ಬೇಡ. ಉತ್ತರಖಂಡದ ಮಾಜಿ ಮುಖ್ಯಮಂತ್ರಿ, ಹಾಲಿ ಹರಿದ್ವಾರದಿಂದ ಸಂಸದರಾಗಿ ಆಯ್ಕೆಯಾಗಿ ನೂತನ ಮಾನವ ಸಂಪನ್ಮೂಲ ಸಚಿರಾಗಿ ಆಯ್ಕೆಯಾಗಿರುವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟಿವಿ ವಾಹಿನಿಗೆ ಹೇಳಿದ ಮಾತಿದು. 2014ರ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (ಎಸ್.ಪಿ.ಎ) ಬಿಲ್ ಕುರಿತ ಚರ್ಚೆಯಲ್ಲಿ ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಅವರು “ನಾವಿಂದು ಪರಮಾಣು ವಿಜ್ಞಾನದ ಕುರಿತು ಮಾತಾಡುತ್ತೇವೆ. ಆದರೆ ಒಂದು ಲಕ್ಷ ವರ್ಷಗಳ ಹಿಂದೆಯೇ ಋಷಿ ಕಾನದ್ ರವರು ಪರಮಾಣು ಪರೀಕ್ಷೆ ನಡೆಸಿದ್ದರು” ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ಅಷ್ಟೆ ಅಲ್ಲದೇ ಆ ಕಾಲದಲ್ಲಿಯೇ ನಾವು ಕಸಿ ವಿಜ್ಞಾನವನ್ನು ಸಹ ಕಲಿತಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಗಣೇಶನಿಗೆ ವೇದಗಳ ಕಾಲದಲ್ಲಿಯೇ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು ಎಂಬ ಮಾತನ್ನು ಪುನರುಚ್ಚರಿಸಿದ್ದರು.

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ. ಅವರು ಮುಂದೆ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

“ಪ್ರಾಥಮಿಕ, ಪ್ರೌಢಶಾಲೆಯಿಂದ ಹಿಡಿದು ವಿಶ್ವವಿದ್ಯಾಲಯದವರೆಗೂ ವ್ಯವಹರಿಸುವ, ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವ ಈ ವ್ಯಕ್ತಿ ಈಗ ನಮ್ಮ ನೂತನ ಎಚ್‍ಆರ್‍ಡಿ ಸಚಿವರಾಗಿದ್ದಾರೆ. ನಿಮಗೆ ಸ್ವಾಗತ. #ನ್ಯೂಇಂಡಿಯಾ” ಎಂದು ಮಾರ್ಮಿಕವಾಗಿ ಪೋಸ್ಟ್ ಹಾಕುವ ಮೂಲಕ ಯುವ ಚಿಂತಕ ಧೃವ್ ರಾಠೀ ಫೇಸ್‍ಬುಕ್ ರಮೇಶ್ ಪೋಖ್ರಿಯಾಲ್‍ರವರ ಮೇಲಿನ ಹೇಳಿಕೆಗಳ ಕುರಿತು ‘ದಿ ಹಿಂದೂ’ ಪತ್ರಿಕೆಯಲ್ಲಿ ಬಂದಿರುವ ಲೇಖನವನ್ನು ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...