Homeಮುಖಪುಟಜಾತೀಯತೆ ಮತ್ತದರ ನೆರಳಿನ ಭಯಾನಕ ಪ್ರತಿಫಲವನ್ನು ಹೊಂದಿದ ಚಿತ್ರ ಅಸುರನ್‌...

ಜಾತೀಯತೆ ಮತ್ತದರ ನೆರಳಿನ ಭಯಾನಕ ಪ್ರತಿಫಲವನ್ನು ಹೊಂದಿದ ಚಿತ್ರ ಅಸುರನ್‌…

- Advertisement -
- Advertisement -

ಅಕಿರ ಕುರುಸೊವಾ ಒಬ್ಬ ಜಪಾನ್ ದೇಶದ ನಿರ್ದೇಶಕ, ತನ್ನ ಕೊನೆ ಕಾಲಘಟ್ಟದಲ್ಲಿ ಆತನ ಆತ್ಮತೃಪ್ತಿಗೆಂದು “ದ ಡ್ರೀಮ್ಸ್” ಅನ್ನೋ ಹಲವು ಚಾಪ್ಟರ್‌ಗಳುಳ್ಳ ಸಿನೆಮಾ ಮಾಡುತ್ತಾನೆ.

ಇದನ್ನ ಯಾವ ಪ್ರೇಕ್ಷಕ ನೋಡದಿದ್ದರೂ ಪರವಾಗಿಲ್ಲ ಅನ್ನುವುದು ಅವನ ಪೂರ್ವನಿಯೋಜಿತ ಗಟ್ಟಿತನವಾಗಿದ್ದರೂ ದ ಡ್ರೀಮ್ಸ್ ಗೆಲ್ಲುತ್ತದೆ.

ಧನಂಜಯ್‌ ಎನ್

ಕಾರಣ ಇಷ್ಟೇ ಡ್ರೀಮ್ಸ್‍ನಲ್ಲಿ ಬರುವ ಸರಿಸುಮಾರು ಎಂಟು ಚಾಪ್ಟರ್‍ಗಳೂ ಸಹ ಎಲ್ಲಾ ಕಾಲಕ್ಕೂ ಸಲ್ಲುವಂಥವು. ಉದಾಹರಣೆಗೆ ಒಂದು ಚಾಪ್ಟರಿನಲ್ಲಿ, ಯುದ್ಧದಲ್ಲಿ ಸತ್ತ ಸೈನಿಕರು ಕಮಾಂಡರ್ ಬಳಿ ದೆವ್ವಗಳಾಗಿ ಬಂದು ಆತನನ್ನ ಪ್ರಶ್ನೆ ಮಾಡುವಾಗ, ಕಮಾಂಡರ್ ಪಾತ್ರವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಲೇ ಕೊನೆಗೊಳ್ಳುತ್ತದೆ.

ಇದೇರೀತಿ ನಮ್ಮ ಭಾರತದ ಮಟ್ಟಿಗೆ ಎಲ್ಲಾ ಕಾಲಕ್ಕೂ ಸಲ್ಲುವ ಸಿನಿಮಾ ಮಾಡಬೇಕು ಅಂತ, ಒಂದು ಕಥಾವಸ್ತುವನ್ನ ಹುಡುಕಿದರೆ ಮೊದಲಿಗೆ ನಮ್ಮ ಕಣ್ಣ ಮುಂದೆ ಬರುವುದು ಈ “ಜಾತೀಯತೆ ಮತ್ತು ಅದರ ನೆರಳು.”

ನಮ್ಮಲ್ಲಿ ಯುದ್ಧಗಳ ಹುಟ್ಟೂ ಕೂಡ, ಈ ಜಾತಿಯ ಗರ್ಭದಲ್ಲೇ ಆಗುವುದೆಂದು ನಿಸ್ಸಂದೇಹವಾಗಿ ಹೇಳಬಹುದು.

ಬಹುಶಃ ಈ ವಸ್ತುವನ್ನ ಅತ್ಯಂತ ಪರಿಣಾಮಕಾರಿಯಾಗಿ ತೋರಿಸಿದ ಕೆಲವೇ ಕೆಲವು ಸಿನೆಮಾಗಳಿಗೆ ಹೊಸ ಸೇರ್ಪಡೆ “ಅಸುರನ್”.

ಹೌದು, ಅಸುರನ್ ಜಾತೀಯತೆ ಮತ್ತದರ ನೆರಳಿನ ಭಯಾನಕ ಪ್ರತಿಫಲವನ್ನು ಹೊಂದಿದ ಚಿತ್ರ.

ಇಲ್ಲಿ ಯುದ್ಧ ಅಂದರೆ ಕೇವಲ ಗಡಿಗಾಗಿ ನಡೆಯುವುದಷ್ಟೇ ಅಲ್ಲ, ಒಬ್ಬ ಮನುಷ್ಯ ಮನುಷ್ಯನಾಗಿಯೇ ಉಳಿದು ತನಗೆ ಸಿಗಬೇಕಾದ ಕನಿಷ್ಟ ಗೌರವ ಮತ್ತು ಬದುಕನ್ನ ಪಡೆಯಲೂ ಸಹ ಯುದ್ಧ ಮಾಡಬೇಕಿದೆ.

ಅಸಮಾನತೆಯಿಂದ ಹುಟ್ಟುವ ಹತಾಶೆ ಯಾವತ್ತಿಗೂ ಮೇಲ್ನೋಟಕ್ಕೆ ಕಾಣುವುದಿಲ್ಲ, ಅದು ನಮ್ಮೆಲ್ಲರ ರಕ್ತದಲ್ಲೇ ಒದ್ದುಗೊಂಡು ಬಂದುಬಿಟ್ಟಿದೆ.

“ನಿನ್ನಲ್ಲಿ ಅಸಮಾನತೆ ಇದೆ” ಅಂತ ನೇರವಾಗಿ ಅಥವಾ ತಮಾಷೆಯಾಗಿ ಕೇಳಿದರೂ ಸಹ, “ಇಲ್ಲವೇ ಇಲ್ಲ” ಎಂಬ ಸಿದ್ಧ ಉತ್ತರವೊಂದನ್ನ ಜತೆಯಲ್ಲಿಟ್ಟುಕೊಂಡೇ ಸಾಗುವ ನಮಗೆ ಈ ಸೂಕ್ಷ್ಮಗಳೆಲ್ಲಾ ಮೇಲ್ನೋಟಕ್ಕೆ ಕಾಣಬೇಕೆಂದು ಬಯಸುವುದು ದೊಡ್ಡ ತಪ್ಪು.

ವೆಟ್ರಿಮಾರನ್‍ರ ಈ ಹಿಂದಿನ ಎಲ್ಲಾ ಸಿನೆಮಾಗಳನ್ನು ಗಮನಿಸಿದರೆ ಆತ ಈ ರೀತಿಯಾದ ಅತೀಸೂಕ್ಷ್ಮ ವಿಚಾರಗಳನ್ನೂ ಸಹ ಪ್ರೇಕ್ಷಕನಿಗೆ ಅಚ್ಚುಕಟ್ಟಾಗಿ ತಲುಪಿಸುವುದರಲ್ಲಿ, ತನ್ನದೇ ಆದ ವಿಶೇಷ ಕೌಶಲ್ಯದಿಂದ ಗುರುತಿಸಿಕೊಂಡಿದ್ದಾನೆ.

ಅಸುರನ್ ಸಿನೆಮಾದಲ್ಲಿ ಆ ಎಲ್ಲಾ ಪ್ರಯತ್ನಗಳನ್ನೂ ಮೀರಿ ಮತ್ತೂ ಒಂದು ಮೆಟ್ಟಿಲನ್ನು ಮೆಟ್ಟಿ ನಿಂತಿರುವುದು, ವೆಟ್ರಿಮಾರನ್ ಅಭಿಮಾನಿಗಳಿಗೆ ಒಂದು ಹಬ್ಬ.

ಶೋಷಿತನಿಗೆ ಕಾಣುವ ಸಮಾಜಕ್ಕೂ, ಶೋಷಕನಿಗೆ ಕಾಣುವ ಸಮಾಜಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಇದನ್ನ ನೀವು ಒಪ್ಪೋದಾದ್ರೆ, ಧನುಷ್ ಮಾಡಿರೋ ಶಿವಸ್ವಾಮಿ ಪಾತ್ರ ಒಂದು ಕ್ಲಿಯರ್ ಪಿಚ್ಚರ್ ಕೊಡೋದ್ರಲ್ಲಿ ಅನುಮಾನವೇ ಇಲ್ಲ.
ಧನುಷ್ ಮತ್ತು ವೆಟ್ರಿಮಾರನ್

ಇಲ್ಲಿ ಎಲ್ಲರೂ ತಮ್ಮ ತಮ್ಮ ಅನುಭವಗಳಿಂದಲೇ ಪಾಠ ಕಲಿಯುವ ಹಾಗೆ ಶಿವಸ್ವಾಮಿಯೂ ಕೂಡ ಶೋಷಿತನಾಗಿ ಬಹಳ ದೊಡ್ಡ ಪಾಠ ಕಲಿತಿದ್ದಾನೆ.

ಜೊತೆಗೆ ತನ್ನ ಮುಂದಿನ ಪೀಳಿಗೆ ಕೂಡಾ ಅದೇ ತಪ್ಪನ್ನ ಮಾಡದಿರಲಿ ಅನ್ನೋ ಅಂಶದ ಜೊತೆಗೆ, ಭಾರತದಲ್ಲಿ ತುಳಸಿಕೊಂಡು ಬೇಯುತ್ತಿರುವ ಅಸಂಖ್ಯ ಶೋಷಿತರಿಗೆ ಒಂದು ಸ್ಪಷ್ಟ ದಾರಿಯನ್ನು, ತನ್ನದೇ ಕಥೆಯ ಮೂಲಕ ನಟನೆಯ ಮೂಲಕ ಕಟ್ಟಿಕೊಡುತ್ತಾನೆ.

“ಮನುಷ್ಯ ಹುಟ್ಟುತ್ತಲೇ ಕ್ರೂರಿ” ಎಂದು ಕನ್ನಡದ ಲೇಖಕ ಪಿ.ಲಂಕೇಶ್ ಅವರಿಂದ ಹಿಡಿದು, ವಿಶ್ವದ ಹಲವು ಚಿಂತಕರುಗಳೆಲ್ಲಾ ಒಂದಲ್ಲಾ ಒಂದು ರೀತಿಯಾಗಿ ನಮಗೆ ಮನವರಿಕೆ ಮಾಡಿಸಿದ್ದಾರೆ.

ಮತ್ತದು, ನಾವು ದಿನನಿತ್ಯ ಎದುರುಗೊಳ್ಳುವ ಹಲವು ಸಂದರ್ಭಗಳಲ್ಲಿ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಅನುಭವಕ್ಕೆ ಬರುತ್ತಲೇ ಇದೆ. ಕಾರಣ ಎಂಥದ್ದೇ ಇರಲಿ ತನ್ನದೇ ಆಕಾರಗಳನ್ನು ಹೊತ್ತ ಮನುಷ್ಯನನ್ನ ಸ್ವತಃ ಮನುಷ್ಯನಾಗಿದ್ದರೂ ಸಹ ಚಿತ್ರ ವಿಚಿತ್ರವಾಗಿ ಕೊಲ್ಲಬೇಕಾದರೆ ಅಥವಾ ಹಿಂಸಿಸಬೇಕಾದರೆ ನಮ್ಮಗಳ ಕ್ರೂರತ್ವ ನಿಜಕ್ಕೂ ನಮ್ಮ ಪ್ರಜ್ಞೆಗೆ ಬರುತ್ತಿದೆಯೇ ???

ಇದು ಸ್ವಗತವಾಗಿ ನಾವೇ ಹಾಕಿಕೊಳ್ಳಬೇಕಾದ ಪ್ರಶ್ನೆ !!!!

ಚಿತ್ರದಲ್ಲಿ ಬರುವ ಖಳನಾಯಕರೆಲ್ಲಾ ಶೋಷಿತ ಜಾತಿಯ ಹಿನ್ನೆಲೆಯಿಂದ ಬಂದವರಾದ್ದರಿಂದ, ಸಿನೆಮಾದಲ್ಲಿ ಈ ಕ್ರೂರತ್ವದ ಪರಿಚಯ ಚೆನ್ನಾಗಿಯೇ ಆಗುತ್ತದೆ. ಇಲ್ಲಿ ವೈರತ್ವ ಬೆಳೆಸುವ ಆ ದೊಡ್ಡಸ್ಥಿಕೆ ಯಾವುದು ಎನ್ನುವುದಕ್ಕೆ ನಮ್ಮ ನಿಮ್ಮ ಬಳಿ ಉತ್ತರವಿಲ್ಲ, ಅಷ್ಟಕ್ಕೂ… ಅದು, ಕಣ್ಣಿಗೆ ಕಂಡರೆ ತಾನೇ ವಿವರಿಸುವುದಕ್ಕೆ!!!

ಇಲ್ಲಿ ಅಸುರನ್ ಚಿತ್ರಕಥೆ ಖಂಡಿತವಾಗಿ ಆ ವಿವರಣೆಯ ರೂಪ ಪಡೆದಿರುವುದು ಪ್ರತಿಯೊಂದು ದೃಶ್ಯದಲ್ಲೂ ಅನುಭವಕ್ಕೆ ಸಿಗುತ್ತದೆ.

ಅದಕ್ಕೊಂದು ಬಲವಾದ ಉದಾಹರಣೆ, ಹೆಣ್ಣುಮಗಳೊಬ್ಬಳು ಕಾಲಿಗೆ ಚಪ್ಪಲಿ ಹಾಕಿ ಊರೊಳಗಿನ ಶಾಲೆಗೆ ಬಂದದ್ದನ್ನೂ ಸಹಿಸಲಾಗದ ಒಬ್ಬ ಅಬ್ಬೇಪಾರಿ ಜಾತಿಭೂತದವನು ಅವನಿಗೆ ಸಿಕ್ಕಿರುವ ತನ್ನದೇ ಹಿನ್ನೆಲೆಯ ಸಾಮಥ್ರ್ಯದ ಹುಚ್ಚಿನಿಂದ ಆಕೆಯ ಮೇಲೆ ಅವಮಾನಿತ ಹಲ್ಲೆಗೆ ಮುಂದಾಗುತ್ತಾನೆ !

ದೊಡ್ಡಸ್ತಿಕೆಯ ವಿವರಣೆಗೆ ಇದೊಂದು ಅತ್ಯಂತ ಪ್ರಭಾವಿ ದೃಶ್ಯ.

ಜೊತೆಗೆ ಶಿವಸ್ವಾಮಿ ಮಕ್ಕಳಾದ ಸೋಮಸುಂದರನ್ ಮತ್ತು ಚಿದಂಬರನ್, ಈ ಇಬ್ಬರ ಮೇಲೆ ಅದೇ ದೊಡ್ಡಸ್ಥಿಕೆಯ ಪ್ರಯೋಗವಾಗುವುದನ್ನು ಮತ್ತು ಆ ಪ್ರಯೋಗಗಳಿಂದ ಆತನ ಕುಟುಂಬಕ್ಕೆ ತೊಂದರೆಯಾಗುವುದು, ಶಿವಸ್ವಾಮಿಯು ತನ್ನ ಮುಂದಾಲೋಚನೆ ಮತ್ತು ತಾಳ್ಮೆಯಿಂದ ಪ್ರೇಕ್ಷಕನಿಗೆ ಉತ್ತರ ನೀಡುತ್ತಾ ಹೋಗುವುದು ಸಿನೆಮಾದ ಮುಖ್ಯ ಗ್ರಹಿಕೆಗಳಲ್ಲೊಂದು.

ಶೋಷಿತ ಜಾತಿಯಿಂದ ಬಂದವನಿಗೆ ತಾನು ಎಂತಹ ಹೀನ ಮನಸ್ಥಿತಿ ಹೊಂದಿದ್ದರೂ ತನ್ನ ಹಿನ್ನೆಲೆಯವರು ಬಿಟ್ಟುಕೊಡುವುದಿಲ್ಲ!! ಎನ್ನುವ ಸಮಾಜದ ಕೆಟ್ಟ ಮುಖವಾಡವನ್ನೂ ಸಹ ಅವನದೇ ಹಿನ್ನೆಲೆ ಕಥೆಯಲ್ಲಿ ಸೂಕ್ತವಾಗಿ ಬೆರೆಸಿದ್ದಾರೆ.

ಪ್ರಮುಖವಾಗಿ ಶೋಷಕರಿಗೆ ಕಾಣದ ಪ್ರಪಂಚವು ಕೊಂಚವಾದರೂ ಅನುಭವಕ್ಕೆ ಬರಬೇಕು ಎನ್ನುವ ಕಾರಣದಿಂದಲೇ…, ಕರುಳು ಹಿಂಡುವಂಥಾ ಉದಾಹರಣೆಗಳನ್ನ ಮುಂದಿಡುವಂತೆ ಒಂದೆರಡು ದೃಶ್ಯಗಳನ್ನ ಸೃಷ್ಟಿಸಿದ್ದಾರೆ. ನೀವು ಎಂತಹ ತಣ್ಣನೆ ಹೃದಯವನ್ನ ಹೊಂದಿದ್ದರೂ ಸಹ , ತಡೆಯಲಾಗದೆ ಕಣ್ಣು ಮುಚ್ಚಿಕೊಳ್ಳುವುದರಲ್ಲಿ ಅನುಮಾನವಿಲ್ಲ.

ಮಗನ ಸಾವನ್ನು ಒಪ್ಪಿಕೊಳ್ಳಲೂ ಸಹ ತಿಂಗಳುಗಟ್ಟಲೆ ನೋವು ತಿನ್ನುವ ತಾಯಿ, ಆ ತಾಯಿಯ ಅವಸ್ಥೆ ನೋಡಲಾಗದೇ ವ್ಯವಸ್ಥೆಯ ವಿರುದ್ಧ ತಿರುಗಿಬೀಳುವ ಮಗ, ಸಾಮಾಜಿಕ ಬಂಡವಾಳವನ್ನೆಲ್ಲಾ ತನ್ನದಾಗಿಸಿಕೊಂಡು ಅಧಿಕಾರಕ್ಕಾಗಿ ಮತ್ತಷ್ಟು ಕ್ರೂರಿಗಳಾಗುವ ವರ್ಗಗಳು, ಪಕ್ಕದ ಮನೆಯವನ ನೋವು ನನ್ನದಲ್ಲ ಎಂದು ನೋಡುತ್ತಾ ನಿಲ್ಲುವ ಸಾಮಾನ್ಯರು… !!!

ಆ ಸಾಮಾನ್ಯರಲ್ಲೂ ಅಸಮಾನ್ಯನಂತೆ ತನ್ನ ಹಿಂದುಳಿದವರಿಗೆಲ್ಲಾ ಭವಿಷ್ಯದ ನಾಳೆಯಾಗಿ ನಿಲ್ಲುವ ನಾಯಕ.

ವೆಟ್ರಿಮಾರನ್‍ರ ಸಿನೆಮಾದಲ್ಲಿ ಇಷ್ಟೆಲ್ಲವೂ ಒಂದು ತೂಕವಾದರೆ, ಛಾಯಾಗ್ರಹಣ ಮತ್ತು ಹಿನ್ನೆಲೆ ಸಂಗೀತದ್ದೇ ಮತ್ತೊಂದು ತೂಕ. ಮುಖ್ಯವಾಗಿ ರಾತ್ರಿಕತ್ತಲೆಯಲ್ಲಿ ಕಾಡಿನ ಮಧ್ಯದಲ್ಲಿ ತೆಗೆದಿರುವ ದೃಶ್ಯಗಳು, ಹಂದಿ ಬೇಟೆಯಾಡುವಾಗಿನ ಆ ರೋಚಕತೆ, ಮುಖ್ಯಪಾತ್ರಧಾರಿಗಳನ್ನು ಪರಿಚಯಿಸುವಾಗಿನ, ಊರಹೊರಗಿನ ಕೇರಿ, ಸೆಟ್‍ಗಳ ಉಪಯೋಗ, ಎಲ್ಲವನ್ನೂ ಎದುರುನಿಂತು ನೋಡುವ ಹಾಗೆ ತೋರಿಸಿದ್ದಾರೆ.

ಮೂರು ದೃಶ್ಯಗಳಲ್ಲಿ ಬಳಸಿರುವ ಅಸುರನ್ ಸಿನೆಮಾದ ವಿಷಯಾಧಾರಿತ ಸಂಗೀತವು ಪ್ರೇಕ್ಷಕನನ್ನು ಸೀಟಿನ ಮುಂಬದಿಗೆ ಕೂರಿಸಿ ಚಿಂತನೆಯ ದಿಕ್ಕು ಬದಲಾವಣೆಯಾಗದಂತೆ ನೋಡಿಕೊಳ್ಳುತ್ತದೆ.

ಪ್ರತೀ ಬಾರಿಯೂ ಹೇಳುವ ಹಾಗೆಯೇ ದೃಶ್ಯರೂಪಕ್ಕಿರುವ ಅಪಾರ ಶಕ್ತಿಯನ್ನು ಬಳಸಿಕೊಂಡು ಸಮಾಜಕ್ಕೆ ಚಿಂತನೆ ಹುಟ್ಟಿಸುವ ಸಿನೆಮಾಗಳನ್ನು ಕೊಡುತ್ತಿರುವ ಇಂಥಾ ನಿರ್ದೇಶಕರು ನಟರು ಮತ್ತು ತಂಡಕ್ಕೆ, ನಾವೆಲ್ಲರೂ ವಿಶೇಷವಾದ ಗೌರವವನ್ನು ಕೊಡಬೇಕು.

ಆ ಗೌರವ ಇಂಥಾ ಸಿನೆಮಾಗಳನ್ನ ನೋಡಿ ಚರ್ಚಿಸುವುದೇ ಆಗಿದೆಯೆಂದು ಬಿಡಿಸಿ ಹೇಳಬೇಕಿಲ್ಲ.

ಈ ದುರಿತ ಕಾಲದಲ್ಲಿ, ಕೇವಲ ಮನರಂಜನೆಗಾಗಿ ಬರುವ ಸಿನಿಮಾಗಳನ್ನ ಖಡಾಖಂಡಿತವಾಗಿ ತಿರಸ್ಕರಿಸುವಷ್ಟು ವಿರೋಧವನ್ನ ಪ್ರೇಕ್ಷಕ ಬೆಳೆಸಿಕೊಳ್ಳಲಿಲ್ಲ ಎಂದರೆ, ಅದು ನಮಗೆ ನಾವೇ ಮಾಡಿಕೊಳ್ಳುವ ಮೋಸ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...