Homeಅಂತರಾಷ್ಟ್ರೀಯಅಮೆರಿಕಾದಲ್ಲಿ ಅಬ್ಬರಿಸಲಿರುವ 'ಅಸುರನ್' - 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

"ಅತ್ಯುತ್ತಮ ವಿದೇಶಿ ಚಿತ್ರ ವಿಭಾಗದಲ್ಲಿ ಪ್ರದರ್ಶನಗೊಳ್ಳುವ ಭಾರತೀಯ ಚಿತ್ರಗಳ ಪಟ್ಟಿ ಇಲ್ಲಿದೆ"

- Advertisement -
- Advertisement -

2021 ರ ಫೆಬ್ರವರಿಯಲ್ಲಿ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ 72ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಮಾರಂಭದಲ್ಲಿ ಧನುಶ್ ನಟನೆಯ ‘ಅಸುರನ್’ ತಮಿಳು ಚಿತ್ರ ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಲ್ಲಿ ಇನ್ನೂ ಹಲವು ಭಾರತೀಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಧನುಷ್ ಮತ್ತು ಮಂಜು ವಾರಿಯರ್ ಅಭಿನಯದ, ವೆಟ್ರಿ ಮಾರನ್ ನಿರ್ದೇಶನದ, ಕಾದಂಬರಿ ಆಧಾರಿತ ಚಿತ್ರ ಅಸುರನ್. 2019 ರಲ್ಲಿ ಬಿಡುಗಡೆಯಾಗಿ ಭಾರತದಲ್ಲಿ ಅಬ್ಬರಿಸಿತ್ತು. ಕಥೆ, ಚಿತ್ರಕಥೆ, ನಟನೆ, ಸಂಗೀತ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಉತ್ತಮ ಪ್ರತಿಕ್ರಿಯೆ ಗಳಿಸಿ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಅಮೆರಿಕಾದ ಸಮಾರಂಭದಲ್ಲಿ ಪ್ರದರ್ಶನಗೊಳ್ಳುವ ಮೂಲಕ ತನ್ನ ಛಾಪನ್ನು ವಿದೇಶದಲ್ಲಿಯೂ ಮೂಡಿಸಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸುಧಾ ಕೊಂಗರಾ ನಿರ್ದೇಶಿಸಿದ, ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ತಮಿಳು ಚಿತ್ರವೂ ಪ್ರದರ್ಶನಗೊಳ್ಳಲಿದೆ. ಈ ಚಿತ್ರವು 1990 ರ ದಶಕದಲ್ಲಿ ಕಡಿಮೆ ಬೆಲೆಯಲ್ಲಿ ವಿಮಾನಯಾನವನ್ನು ಪ್ರಾರಂಭಿಸುವ ದೊಡ್ಡ ಕನಸು ಹೊತ್ತ ಸಾಮಾನ್ಯ ವ್ಯಕ್ತಿಯೊಬ್ಬನ ಜೀವನ ಚರಿತ್ರೆಯನ್ನು ಆಧರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗಿ ಅತ್ಯುತ್ತಮ ಪ್ರತಿಕ್ರಿಯೆ ಗಳಿಸಿತ್ತು.

ಇನ್ನು ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಕೂಡ ಇಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಮೇಲಿನ ಚಿತ್ರಗಳೂ ಸೇರಿದಂತೆ ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಡಿ ಗೋಲ್ಡನ್ ಗ್ಲೋಬ್ಸ್ 2021 ರಲ್ಲಿ ಪ್ರದರ್ಶನಗೊಳ್ಳಲಿರುವ ಭಾರತೀಯ ಚಿತ್ರಗಳ ಪೂರ್ಣ ಪಟ್ಟಿಯನ್ನು ಸಿನಿಮಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

  1. ಸೂರರೈ ಪೊಟ್ರು
  2. ಅಸುರನ್
  3. ಜಲ್ಲಿಕಟ್ಟು
  4. ತನ್ಹಾಜಿ
  5. ದಿ ಡಿಸಿಪಲ್
  6. ಲುಡೋ
  7. ಈಬ್ ಅಲ್ಲೆ ಓ
  8. ಹರಾಮಿ
  9. ಜಸ್ಟ್‌ ಲೈಕ್ ದಟ್
  10. ಟ್ರೀಸ್ ಅಂಡರ್‌ ದಿ ಸನ್

ಇದನ್ನೂ ಓದಿ: ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...