Homeಅಂತರಾಷ್ಟ್ರೀಯಅಮೆರಿಕಾದಲ್ಲಿ ಅಬ್ಬರಿಸಲಿರುವ 'ಅಸುರನ್' - 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

"ಅತ್ಯುತ್ತಮ ವಿದೇಶಿ ಚಿತ್ರ ವಿಭಾಗದಲ್ಲಿ ಪ್ರದರ್ಶನಗೊಳ್ಳುವ ಭಾರತೀಯ ಚಿತ್ರಗಳ ಪಟ್ಟಿ ಇಲ್ಲಿದೆ"

- Advertisement -
- Advertisement -

2021 ರ ಫೆಬ್ರವರಿಯಲ್ಲಿ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ 72ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಮಾರಂಭದಲ್ಲಿ ಧನುಶ್ ನಟನೆಯ ‘ಅಸುರನ್’ ತಮಿಳು ಚಿತ್ರ ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಲ್ಲಿ ಇನ್ನೂ ಹಲವು ಭಾರತೀಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಧನುಷ್ ಮತ್ತು ಮಂಜು ವಾರಿಯರ್ ಅಭಿನಯದ, ವೆಟ್ರಿ ಮಾರನ್ ನಿರ್ದೇಶನದ, ಕಾದಂಬರಿ ಆಧಾರಿತ ಚಿತ್ರ ಅಸುರನ್. 2019 ರಲ್ಲಿ ಬಿಡುಗಡೆಯಾಗಿ ಭಾರತದಲ್ಲಿ ಅಬ್ಬರಿಸಿತ್ತು. ಕಥೆ, ಚಿತ್ರಕಥೆ, ನಟನೆ, ಸಂಗೀತ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಉತ್ತಮ ಪ್ರತಿಕ್ರಿಯೆ ಗಳಿಸಿ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಅಮೆರಿಕಾದ ಸಮಾರಂಭದಲ್ಲಿ ಪ್ರದರ್ಶನಗೊಳ್ಳುವ ಮೂಲಕ ತನ್ನ ಛಾಪನ್ನು ವಿದೇಶದಲ್ಲಿಯೂ ಮೂಡಿಸಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸುಧಾ ಕೊಂಗರಾ ನಿರ್ದೇಶಿಸಿದ, ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ತಮಿಳು ಚಿತ್ರವೂ ಪ್ರದರ್ಶನಗೊಳ್ಳಲಿದೆ. ಈ ಚಿತ್ರವು 1990 ರ ದಶಕದಲ್ಲಿ ಕಡಿಮೆ ಬೆಲೆಯಲ್ಲಿ ವಿಮಾನಯಾನವನ್ನು ಪ್ರಾರಂಭಿಸುವ ದೊಡ್ಡ ಕನಸು ಹೊತ್ತ ಸಾಮಾನ್ಯ ವ್ಯಕ್ತಿಯೊಬ್ಬನ ಜೀವನ ಚರಿತ್ರೆಯನ್ನು ಆಧರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗಿ ಅತ್ಯುತ್ತಮ ಪ್ರತಿಕ್ರಿಯೆ ಗಳಿಸಿತ್ತು.

ಇನ್ನು ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಕೂಡ ಇಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಮೇಲಿನ ಚಿತ್ರಗಳೂ ಸೇರಿದಂತೆ ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಡಿ ಗೋಲ್ಡನ್ ಗ್ಲೋಬ್ಸ್ 2021 ರಲ್ಲಿ ಪ್ರದರ್ಶನಗೊಳ್ಳಲಿರುವ ಭಾರತೀಯ ಚಿತ್ರಗಳ ಪೂರ್ಣ ಪಟ್ಟಿಯನ್ನು ಸಿನಿಮಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

  1. ಸೂರರೈ ಪೊಟ್ರು
  2. ಅಸುರನ್
  3. ಜಲ್ಲಿಕಟ್ಟು
  4. ತನ್ಹಾಜಿ
  5. ದಿ ಡಿಸಿಪಲ್
  6. ಲುಡೋ
  7. ಈಬ್ ಅಲ್ಲೆ ಓ
  8. ಹರಾಮಿ
  9. ಜಸ್ಟ್‌ ಲೈಕ್ ದಟ್
  10. ಟ್ರೀಸ್ ಅಂಡರ್‌ ದಿ ಸನ್

ಇದನ್ನೂ ಓದಿ: ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...