Homeಅಂತರಾಷ್ಟ್ರೀಯಅಮೆರಿಕಾದಲ್ಲಿ ಅಬ್ಬರಿಸಲಿರುವ 'ಅಸುರನ್' - 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

"ಅತ್ಯುತ್ತಮ ವಿದೇಶಿ ಚಿತ್ರ ವಿಭಾಗದಲ್ಲಿ ಪ್ರದರ್ಶನಗೊಳ್ಳುವ ಭಾರತೀಯ ಚಿತ್ರಗಳ ಪಟ್ಟಿ ಇಲ್ಲಿದೆ"

- Advertisement -
- Advertisement -

2021 ರ ಫೆಬ್ರವರಿಯಲ್ಲಿ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ 72ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಮಾರಂಭದಲ್ಲಿ ಧನುಶ್ ನಟನೆಯ ‘ಅಸುರನ್’ ತಮಿಳು ಚಿತ್ರ ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಲ್ಲಿ ಇನ್ನೂ ಹಲವು ಭಾರತೀಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಧನುಷ್ ಮತ್ತು ಮಂಜು ವಾರಿಯರ್ ಅಭಿನಯದ, ವೆಟ್ರಿ ಮಾರನ್ ನಿರ್ದೇಶನದ, ಕಾದಂಬರಿ ಆಧಾರಿತ ಚಿತ್ರ ಅಸುರನ್. 2019 ರಲ್ಲಿ ಬಿಡುಗಡೆಯಾಗಿ ಭಾರತದಲ್ಲಿ ಅಬ್ಬರಿಸಿತ್ತು. ಕಥೆ, ಚಿತ್ರಕಥೆ, ನಟನೆ, ಸಂಗೀತ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಉತ್ತಮ ಪ್ರತಿಕ್ರಿಯೆ ಗಳಿಸಿ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಅಮೆರಿಕಾದ ಸಮಾರಂಭದಲ್ಲಿ ಪ್ರದರ್ಶನಗೊಳ್ಳುವ ಮೂಲಕ ತನ್ನ ಛಾಪನ್ನು ವಿದೇಶದಲ್ಲಿಯೂ ಮೂಡಿಸಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸುಧಾ ಕೊಂಗರಾ ನಿರ್ದೇಶಿಸಿದ, ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ತಮಿಳು ಚಿತ್ರವೂ ಪ್ರದರ್ಶನಗೊಳ್ಳಲಿದೆ. ಈ ಚಿತ್ರವು 1990 ರ ದಶಕದಲ್ಲಿ ಕಡಿಮೆ ಬೆಲೆಯಲ್ಲಿ ವಿಮಾನಯಾನವನ್ನು ಪ್ರಾರಂಭಿಸುವ ದೊಡ್ಡ ಕನಸು ಹೊತ್ತ ಸಾಮಾನ್ಯ ವ್ಯಕ್ತಿಯೊಬ್ಬನ ಜೀವನ ಚರಿತ್ರೆಯನ್ನು ಆಧರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗಿ ಅತ್ಯುತ್ತಮ ಪ್ರತಿಕ್ರಿಯೆ ಗಳಿಸಿತ್ತು.

ಇನ್ನು ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಕೂಡ ಇಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಮೇಲಿನ ಚಿತ್ರಗಳೂ ಸೇರಿದಂತೆ ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಡಿ ಗೋಲ್ಡನ್ ಗ್ಲೋಬ್ಸ್ 2021 ರಲ್ಲಿ ಪ್ರದರ್ಶನಗೊಳ್ಳಲಿರುವ ಭಾರತೀಯ ಚಿತ್ರಗಳ ಪೂರ್ಣ ಪಟ್ಟಿಯನ್ನು ಸಿನಿಮಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

  1. ಸೂರರೈ ಪೊಟ್ರು
  2. ಅಸುರನ್
  3. ಜಲ್ಲಿಕಟ್ಟು
  4. ತನ್ಹಾಜಿ
  5. ದಿ ಡಿಸಿಪಲ್
  6. ಲುಡೋ
  7. ಈಬ್ ಅಲ್ಲೆ ಓ
  8. ಹರಾಮಿ
  9. ಜಸ್ಟ್‌ ಲೈಕ್ ದಟ್
  10. ಟ್ರೀಸ್ ಅಂಡರ್‌ ದಿ ಸನ್

ಇದನ್ನೂ ಓದಿ: ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...