Homeಕರ್ನಾಟಕಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ” ಎಂದು ಕರೆ ಕೊಟ್ಟಿದ್ದಾರೆ. ಇದು ಇದೀಗ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ.

”ಮನಸ್ಸು ಮಾಡಿದ್ರೆ ಏನ ಬೇಕಾದ್ರೂ ಸಾಧಸ್ತಾರೆ.. ರಾಜಕೀಯ ದಿಕ್ಸೂಚಿ ಮಂಡ್ಯದಿಂದಲೇ ಕಾಣಬೇಕು. ಇಲ್ಲದಿದ್ರೆ, ಟಿಪ್ಪು ಜಾಗಕ್ಕೆ ಸಿದ್ದರಾಮಯ್ಯ ಬಂದಬಿಡ್ತಾರೆ. ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಹುರಿಗೌಡ ನಂಜೇಗೌಡ ಟಿಪ್ಪುವನ್ನು ಹೊಡದಾಕಿದ ಹಾಗೆ ಸಿದ್ದರಾಮಯ್ಯರನ್ನು ನೀವು ಹೊಡದಾಕಬೇಕು” ಎಂದು ಸಿಎನ್ ಅಶ್ವತ್ಥ ನಾರಾಯಣ ಕಾರ್ಯಕರ್ತರಿಗೆ ಕರೆ ಕೊಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.

ಇದನ್ನೂ ಓದಿ: ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ”ಟಿಪ್ಪು ಸುಲ್ತಾನನ್ನು ಹೊಡದಾಕಿದಂತೆ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೊಡದಾಕಬೇಕು ಎಂದು ಅಶ್ವತ್ಥ ನಾರಾಯಣ ಹೇಳತಾರೆ.. ಅಂದ್ರೆ ಅವರು ಮನುಷ್ಯರೋ.., ರಾಕ್ಷಸರೋ.. ಅಂತ ತಿಳ್ಕೊಳಿ ನೀವು… ನನ್ನನ್ನ ಹೊಡದಾಕೋಕೆ ಬಂದ್ರೆ ನೀವು ಬಿಡ್ತೀರಾ ಎಂದು ಕಾರ್ಯಕರ್ತರನ್ನು ಕೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ಅಧಿಕಾರಕ್ಕೆ ಬಂದ ಹಾಗೆ ಎನ್ನುತ್ತಾರೆ, ನಾನು ಟಿಪ್ಪು, ಸೇವಾಲಾಲ್, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೀನಿ.. ನಾನು ಮನುಷ್ಯತ್ವ ಇರೋನು ಹಿಂದೂಗಳನ್ನು, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಎಲ್ಲರನ್ನೂ ಪ್ರೀತಸ್ತೀನಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ”ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ (ಬಂದೂಕು) ಹಿಡಿದುಕೊಂಡು ಬಂದು ಬಿಡಿ” ಎಂದಿದ್ದಾರೆ.

”ನನ್ನ ಹತ್ಯೆಗೆ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ” ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಟ್ಟು ಹೊರಹಾಕಿದ್ದಾರೆ.

”ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...