Homeಮುಖಪುಟ'ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ': ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

‘ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ’: ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಗುರುವಾರ (ಏ.24) ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದಾಗಿ ಮೂಲಗಳು ಹೇಳಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ಎಲ್ಲೋ ಕೆಲವು ಕಡೆ ಲೋಪಗಳಾಗಿವೆ, ಅದನ್ನು ನಾವು ಕಂಡುಹಿಡಿಯಬೇಕು” ಎಂದು ಆಡಳಿತ ಪಕ್ಷದ ನಾಯಕರೊಬ್ಬರು ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದಾಗಿ ವರದಿ ತಿಳಿಸಿದೆ.

ವಿವಿಧ ರಾಜ್ಯಗಳ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ಕುರಿತು ವಿರೋಧ ಪಕ್ಷದ ನಾಯಕರಿಗೆ ಮಾಹಿತಿ ನೀಡಲು ಸರ್ಕಾರ ಸರ್ವಪಕ್ಷ ಸಭೆ ಕರೆದಿತ್ತು.

ಸಭೆಯಲ್ಲಿ, ಹಲವು ಪ್ರತಿಪಕ್ಷ ನಾಯಕರು ಭದ್ರತಾ ಶಿಷ್ಟಾಚಾರಗಳ ಸ್ಪಷ್ಟ ವೈಫಲ್ಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ, ಭದ್ರತಾ ಪಡೆಗಳು ಎಲ್ಲಿದ್ದವು? ಕೇಂದ್ರ ಮೀಸಲು ಪೊಲೀಸ್ ಪಡೆ ಎಲ್ಲಿತ್ತು? ಎಂದು ಹಲವರು ಪ್ರಶ್ನಿಸಿದ್ದಾರೆ ಎಂದು ಮೂಲಗಳು ಹೇಳಿದ್ದಾಗಿ ಇಂಡಿಯಾ ಟುಡೇ ವರದಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ, ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲು ಪ್ರದೇಶವನ್ನು ಪ್ರವಾಸಿಗರ ಭೇಟಿಗೆ ಮುಕ್ತವಾಗಿಸುವ ಮೊದಲು ಸ್ಥಳೀಯ ಅಧಿಕಾರಿಗಳು ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿರಲಿಲ್ಲ ಎಂದಿದೆ. ಸಾಂಪ್ರದಾಯಿಕವಾಗಿ ಜೂನ್‌ನಲ್ಲಿ ಅಮರನಾಥ ಯಾತ್ರೆಯವರೆಗೆ ಈ ಪ್ರದೇಶ ಪ್ರವಾಸಿಗರ ಭೇಟಿಗರ ನಿರ್ಬಂಧಿತವಾಗಿರುತ್ತದೆ ಎಂದು ವರದಿ ಹೇಳಿದೆ.

ಘಟನೆಗೆ ತಡವಾಗಿ ಪ್ರತಿಕ್ರಿಯಿಸಿದ ಬಗ್ಗೆಯೂ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ. ಮೂಲಗಳ ಪ್ರಕಾರ, ಸರ್ಕಾರಿ ಅಧಿಕಾರಿಗಳು ಈ ಸ್ಥಳವು 45 ನಿಮಿಷಗಳ ಬೆಟ್ಟದ ನಡಿಗೆಯ ದೂರದಲ್ಲಿದೆ ಮತ್ತು ಅಂತಹ ತುರ್ತು ಪರಿಸ್ಥಿತಿಗಳನ್ನು ತ್ವರಿತವಾಗಿ ನಿರ್ವಹಿಸಲು ಯಾವುದೇ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (ಎಸ್‌ಒಪಿ) ಜಾರಿಯಲ್ಲಿಲ್ಲ ಎಂದು ವಿವರಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಭಾರತ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

“ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ಎಲ್ಲಾ ಪಕ್ಷಗಳು ಸರ್ಕಾರದ ಜೊತೆಗಿದ್ದೇವೆ ಎಂದು ಹೇಳಿವೆ. ಎಲ್ಲಾ ರಾಜಕೀಯ ಪಕ್ಷಗಳು ಈ ಸಂದೇಶವನ್ನು ನೀಡಿವೆ ಮತ್ತು ಎಲ್ಲಾ ಪಕ್ಷಗಳ ನಾಯಕರು ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಅದನ್ನು ಬೆಂಬಲಿಸುತ್ತೇವೆ ಎಂದು ಒಂದೇ ಧ್ವನಿಯಲ್ಲಿ ಹೇಳಿದ್ದಾರೆ. ಸಭೆ ಸಕಾರಾತ್ಮಕವಾಗಿ ಕೊನೆಗೊಂಡಿದೆ” ಎಂದು ರಿಜಿಜು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ವಿರೋಧ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಯಾರೆಲ್ಲ ಭಾಗವಹಿಸಿದ್ದರು

ಸರ್ವಪಕ್ಷ ಸಭೆಯಲ್ಲಿ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇದ್ದರು.

ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖ ಸಂಸದೀಯ ನಾಯಕರು, ರಾಜ್ಯಸಭೆಯ ಸದನದ ನಾಯಕ ಜೆ.ಪಿ. ನಡ್ಡಾ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು.

ಸುಪ್ರಿಯಾ ಸುಳೆ (ಎನ್‌ಸಿಪಿ-ಎಸ್‌ಪಿ), ಪ್ರಫುಲ್ ಪಟೇಲ್ (ಎನ್‌ಸಿಪಿ), ಅಸಾದುದ್ದೀನ್ ಓವೈಸಿ (ಎಐಎಂಐಎಂ), ಸಸ್ಮಿತ್ ಪಾತ್ರ (ಬಿಜೆಡಿ), ಲವು ಶ್ರೀ ಕೃಷ್ಣ ದೇವರಾಯಲು (ಟಿಡಿಪಿ), ಶ್ರೀಕಾಂತ್ ಶಿಂಧೆ (ಶಿವಸೇನೆ), ಸಂಜಯ್ ಸಿಂಗ್ (ಎಎಪಿ), ಸುದೀಪ್ ಬಂಡೋಪಾಧ್ಯಾಯ (ಟಿಎಂಸಿ), ಪ್ರೇಮಚಂದ್ ಗುಪ್ತಾ (ಆರ್‌ಜೆಡಿಕೆ), ಶಿವಪಾಲ್ (ಆರ್‌ಜೆಡಿ) ಸಭೆಯಲ್ಲಿ ಉಪಸ್ಥಿತರಿದ್ದರು.

ಪಹಲ್ಗಾಮ್ ದಾಳಿಕೋರರಿಗೆ ‘ಊಹೆಗೂ ಮೀರಿದ’ ಶಿಕ್ಷೆ: ಚುನಾವಣೆಗೆ ಸಜ್ಜಾದ ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...