Homeಮುಖಪುಟಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸಿದ 'ಲೋಕತಂತ್ರ ಬಚಾವೋ' ರ್‍ಯಾಲಿ: ಯಾವ್ಯಾವ ನಾಯಕರು ಏನೇನು ಹೇಳಿದ್ರು?

ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸಿದ ‘ಲೋಕತಂತ್ರ ಬಚಾವೋ’ ರ್‍ಯಾಲಿ: ಯಾವ್ಯಾವ ನಾಯಕರು ಏನೇನು ಹೇಳಿದ್ರು?

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ, ಜಾರಿ ನಿರ್ದೇಶನಾಲಯ, ಐಟಿ ಇಲಾಖೆಗಳ ದುರ್ಬಳಕೆ ವಿರೋಧಿಸಿ ಪ್ರತಿಪಕ್ಷಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ‘ಲೋಕತಂತ್ರ ಬಚಾವೋ’ ಅಥವಾ ‘ಪ್ರಜಾಪ್ರಭುತ್ವ ಉಳಿಸಿ’ ರ್ಯಾಲಿಯು ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ  ಸಾಕ್ಷಿಯಾಗಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಜಂಟಿ ಪ್ರಚಾರಕ್ಕೆ ಹೊಸ ಹಾದಿಯನ್ನು ತೋರಿಸಿದೆ.

ಇಂಡಿಯಾ ಮೈತ್ರಿಕೂಟದ ಪ್ರತಿಯೊಬ್ಬ ನಾಯಕರು ಪರಸ್ಪರ ಭಿನ್ನಾಭಿಪ್ರಾಯಗಳ ನಡುವೆಯೂ ಒಗ್ಗೂಡುವ ಅಗತ್ಯವನ್ನು ಒತ್ತಿಹೇಳಿದರು, ಅವರು ಭಾರತದಲ್ಲಿ ಪ್ರಜಾಪ್ರಭುತ್ವದ ಹಿನ್ನೆಡೆ ಮತ್ತು ಭಾರತದ ಬಹುಕಾಲದ ಸ್ವಾಯತ್ತ ಸಂಸ್ಥೆಗಳ ಬಲಪಂಥೀಯ ಸ್ವಾಧೀನದ ಬಗ್ಗೆ ಮಾತನಾಡಲು ರಾಜಕೀಯ ಒಗ್ಗಟ್ಟಿನ ಅಗತ್ಯತೆ ಬಗ್ಗೆ ಹೇಳಿದ್ದಾರೆ.

ಶಿವಸೇನಾ ಬಣದ ನಾಯಕ ಉದ್ಧವ್ ಠಾಕ್ರೆ ಮಾತನಾಡಿ, ದೇಶದಲ್ಲಿ ಸಮ್ಮಿಶ್ರ ಸರ್ಕಾರದ ಅಗತ್ಯದ ಬಗ್ಗೆ ಮಾತನಾಡಿದರು ಮತ್ತು ದೇಶದಲ್ಲಿ ಒಂದು ಪಕ್ಷ, ಒಬ್ಬ ವ್ಯಕ್ತಿ ಆಡಳಿತವನ್ನು ನಡೆಸಿದ್ದು ಭಾರತ ದುರ್ಬಲಗೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ನಾಯಕಿ ಮೆಹಬೂಬಾ ಮುಫ್ತಿ ಮಾತನಾಡಿ, ವಿರೋಧ ಪಕ್ಷದ ನಾಯಕರನ್ನು ಹೇಗೆ ಲೀಗಲ್‌ ಸ್ಕ್ಯಾನರ್ ಅಡಿಯಲ್ಲಿ ಇರಿಸಲಾಗುತ್ತಿದೆ ಎಂಬುದರ ಕುರಿತು ಮಾತನಾಡಿದ್ದಾರೆ. ಬಿಜೆಪಿ ಭ್ರಷ್ಟರೆಂದು ಕರೆದಿದ್ದವರು ಈಗ ಬಿಜೆಪಿಯಲ್ಲಿದ್ದಾರೆ. ನಾವು ಎಲ್ಲವನ್ನೂ ನೋಡಿದ್ದೇವೆ. ನಾವೂ ಸಹ ಎಲ್ಲವನ್ನೂ ಅನುಭವಿಸಿದ್ದೇವೆ. ಈ ಸರ್ಕಾರವನ್ನು ಟೀಕಿಸುವುದರಲ್ಲಿ ಎಷ್ಟು ದಿನ ಕಳೆಯುತ್ತೇವೆ? ಅದಕ್ಕಾಗಿಯೇ ನನ್ನ ಕರೆ ಅಬ್ಕಿ ಬಾರ್, ಬಿಜೆಪಿ ತಡಿಪಾರ್ ಎಂದು ಠಾಕ್ರೆ ಹರ್ಷೋದ್ಗಾರದ ನಡುವೆ ಹೇಳಿದರು.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಮಾತನಾಡಿ, ನಾವು ನಿಜವಾಗಿಯೂ ರಾಮನ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು. ಅವರು ನೀತಿ, ನಿಯಮ, ತಾಳ್ಮೆಯನ್ನು ಗೌರವಿಸಿದರು. ‘ಜಾರ್ಖಂಡ್ ತಲೆಬಾಗುವುದಿಲ್ಲ, ಇಂಡಿಯಾ ತಲೆಬಾಗುವುದಿಲ್ಲ, ಇಂಡಿಯಾ ಮೈತ್ರಿಕೂಟವನ್ನು ತಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಮಾತನಾಡಿ, ಕೇಜ್ರಿವಾಲ್ ಭ್ರಷ್ಟ ಎಂದು ಅವರು ನಿಜವಾಗಿಯೂ ನಂಬುತ್ತೀರಾ ಎಂದು ಸಭೆಯನ್ನು ಕೇಳಿದರು. ನಾನೂ ಕೇಜ್ರಿವಾಲ್ ಎಂದು ಪ್ರೇಕ್ಷಕರು ಈ ವೇಳೆ ಪ್ರತಿಕ್ರಿಯಿಸಿದರು. ಅವರು ಜೈಲಿನಿಂದ ಕೇಜ್ರಿವಾಲ್ ಕಳುಹಿಸಿದ ಸಂದೇಶವನ್ನು ಓದಿದ್ದಾರೆ. ನಾನು ಭಾರತದ ಜನರಿಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ ಮತ್ತು ಬಡವರು ಮತ್ತು ಶ್ರೀಮಂತರು ಎಲ್ಲರೂ ಅತ್ಯುತ್ತಮ ಶಿಕ್ಷಣ ಮತ್ತು ಆರೋಗ್ಯವನ್ನು ಪಡೆಯುವ ಭಾರತದ ಬಗ್ಗೆ ಕನಸು ಕಾಣುತ್ತೇನೆ ಎಂದು ಸುನೀತಾ ಓದಿದರು.

ಇಂಡಿಯಾ ಮೈತ್ರಿಕೂಟದ ಗುಂಪಿನ ಯುವ ನಾಯಕರಾದ ಅಖಿಲೇಶ್ ಯಾದವ್ ಮತ್ತು ತೇಜಸ್ವಿ ಯಾದವ್ ಪ್ರೇಕ್ಷಕರಿಂದ ದೊಡ್ಡ ಚಪ್ಪಾಳೆ ಗಿಟ್ಟಿಸಿದರು. ಮೋದಿ ಜಿ ಅವರಿಗೆ ಪ್ರಿಯಾಂಕಾ ಚೋಪ್ರಾ ಅವರನ್ನು ಭೇಟಿ ಮಾಡಲು ಸಮಯವಿದೆ ಆದರೆ ರೈತರನ್ನು, ಬಡವರನ್ನು ಭೇಟಿ ಮಾಡಲು ಸಮಯವಿಲ್ಲ ಎಂದು ರಾಷ್ಟ್ರೀಯ ಜನತಾ ದಳದ ತೇಜಸ್ವಿ ಹೇಳಿದರು. ಮೋದಿಯವರ ಭರವಸೆಗಳು ಆ ಅಗ್ಗದ ಚೀನೀ ಸರಕುಗಳಂತಿವೆ, ವಾರಂಟಿ ಅವಧಿಗಳು ಕೇವಲ ಎರಡು ಅಥವಾ ಮೂರು ತಿಂಗಳುಗಳವರೆಗೆ ಇರುತ್ತದೆ. ಕೇವಲ 17 ತಿಂಗಳಲ್ಲಿ ಬಿಹಾರದಲ್ಲಿ ಯುವಕರಿಗೆ ಐದು ಲಕ್ಷ ಉದ್ಯೋಗ ನೀಡಿದ್ದೇವೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳ ಮೋದಿಯವರ ಭರವಸೆ ಏನಾಯಿತು? ಎಂದು ಅವರು ಕೇಳಿದ್ದು, ಭಾರತೀಯರು ಅಘೋಷಿತ ತುರ್ತುಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮಾತನಾಡಿ, ಭಾರತದಲ್ಲಿ ಚುನಾಯಿತ ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಲಾಗುತ್ತದೆ. ಸರ್ಕಾರ ಮತ್ತು ಬಿಜೆಪಿ ಎಷ್ಟು ಸುಳ್ಳು ಹೇಳುತ್ತದೆ ಎಂದರೆ ನಾವು ಅವರನ್ನು ಬ್ರಹ್ಮಾಂಡದ ದೊಡ್ಡ ಸುಳ್ಳುಗಾರರು ಎಂದು ಕರೆಯಬಹುದು. ಬಿಜೆಪಿ ಮತ್ತು ಅದರ ಸರ್ಕಾರವು ಭಾರತದ ಬಹುಕಾಲದ ಜಾಗತಿಕ ಪ್ರತಿಷ್ಠೆಯನ್ನು ಹಾಳು ಮಾಡಿದೆ. ಹಿಂದುಳಿದ, ದಲಿತರು ಮತ್ತು ಆದಿವಾಸಿಗಳು ಈ ಬಾರಿ ಅವರನ್ನು ಸೋಲಿಸುತ್ತಾರೆ. ನಾವೆಲ್ಲರೂ ಪೂರ್ಣ ಬಲದಿಂದ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಹೇಳಿದ್ದಾರೆ.

ಸಿಪಿಐಎಂ(ಎಲ್)ನ ದೀಪಂಕರ್ ಭಟ್ಟಾಚಾರ್ಯ ಅವರು ಮಾತನಾಡಿ, ಉನ್ನತ ನಾಯಕರು ಮಾತ್ರವಲ್ಲದೆ, ತಮ್ಮ ಪಕ್ಷದ ಶಾಸಕ ಮನೋಜ್ ಮಂಜಿಲ್ ಅವರಂತೆ ವಿರೋಧ ಪಕ್ಷದ ತಳಮಟ್ಟದ ನಾಯಕರನ್ನು ಕೂಡ ತಪ್ಪಾಗಿ ಶಿಕ್ಷೆಗೆ ಗುರಿ ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಸಿಪಿಐ(ಎಂ)ನ ಸೀತಾರಾಂ ಯೆಚೂರಿ ಅವರು ಮಾತನಾಡಿ, ನಿರಂಕುಶ ಪ್ರಭುತ್ವವನ್ನು ಕಿತ್ತೊಗೆಯಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಸಮಾಜವಾದಿ ನಾಯಕ ‘ಸಂಪೂರ್ಣ ಕ್ರಾಂತಿ’ಗೆ ಕರೆ ನೀಡಿದ್ದ ಜಯಪ್ರಕಾಶ ನಾರಾಯಣ ಚಳವಳಿಯ ಬಗ್ಗೆ ಜನಸಮೂಹವನ್ನು ನೆನಪಿಸಿದರು. ಮಹಾರಾಷ್ಟ್ರದ ಹಿರಿಯ ನಾಯಕ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಾತನಾಡಿ, ಸರಕಾರಿ ಸಂಸ್ಥೆಗಳು ಮತ್ತು ವಿರೋಧ ಪಕ್ಷದ ನಾಯಕರು ಹೇಗೆ ದಾಳಿಗೆ ಒಳಗಾಗಿದ್ದಾರೆ ಎಂಬುದರ ಕುರಿತು ಮಾತನಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರೇನ್ ಮಾತನಾಡಿ, ಟಿಎಂಸಿ ಇಂಡಿಯಾ ಮೈತ್ರಿಕೂಟದ ಭಾಗವಾಗಿತ್ತು, ಇದೆ ಮತ್ತು ಇರುತ್ತದೆ ಎಂದು ಹೇಳಲು ನಾನು ಇಲ್ಲಿದ್ದೇನೆ. ಇದು ಬಿಜೆಪಿ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟವಾಗಿದೆ ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಮ್ಯಾಚ್ ಫಿಕ್ಸಿಂಗ್” ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ಅಂಪೈರ್‌ಗಳನ್ನು ಆಯ್ಕೆ ಮಾಡಿದ್ದಾರೆ; ಅವರು ಈ ಬಾರಿ, ನಾವು 400 ದಾಟುತ್ತೇವೆ ಎಂದು ಕರೆಗಳನ್ನು ನೀಡುತ್ತಿದ್ದಾರೆ, ಇದು ಮ್ಯಾಚ್‌ಫಿಕ್ಸಿಂಗ್‌ ಮಾಡ್ತಾರ ಎಂಬ ಬಗ್ಗೆ ಆಶ್ಚರ್ಯ ಉಂಟು ಮಾಡಿದೆ. ಏಕೆಂದರೆ ನಾನು ಅರ್ಥಮಾಡಿಕೊಂಡಂತೆ ಈ ಬಾರಿ ಬಿಜೆಪಿ 180 ದಾಟುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಚುನಾವಣೆಗೆ ಕೇವಲ ಎರಡು ತಿಂಗಳ ಮೊದಲು  ಬಂಧಿಸಲಾಗಿದೆ, ಆರು ತಿಂಗಳ ಹಿಂದೆ ಬಂದಿಸಿಲ್ಲ, ಏಕೆಂದರೆ ಬಿಜೆಪಿ ನಮ್ಮನ್ನು ಪ್ರಚಾರ ಮಾಡದಂತೆ ತಡೆಯಲು ಬಯಸುತ್ತದೆ. ಇವೆಲ್ಲವೂ ನಮ್ಮ ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಕಿತ್ತುಕೊಳ್ಳುವ ತಂತ್ರವಾಗಿದೆ. ಸಂವಿಧಾನವು ಭಾರತೀಯ ಜನರ ಹೃದಯ ಬಡಿತವಾಗಿದೆ ಎಂದು ಹೇಳಿದ್ದಾರೆ.

ನಾನು ಈ ಹಂತದಿಂದ ಹೇಳಲು ಬಯಸುತ್ತೇನೆ, ಅವರು ಮಾದ್ಯಮದ ಧ್ವನಿಯನ್ನು ಕಸಿದುಕೊಳ್ಳಬಹುದು ಆದರೆ ಭಾರತೀಯ ಜನರನ್ನು ಮಾತನಾಡದಂತೆ ತಡೆಯಲು ಅವರಿಗೆ ಸಾಧ್ಯವಾಗುವುದಿಲ್ಲ. ಈ ಮ್ಯಾಚ್ ಫಿಕ್ಸಿಂಗ್‌ನ್ನು ನಿಲ್ಲಿಸಬೇಕಾದರೆ, ನಾವು ಅವರ ವಿರುದ್ಧ ಪೂರ್ಣ ಶಕ್ತಿಯಿಂದ ಹೊರಬಂದು ಮತ ಚಲಾಯಿಸಬೇಕು. ಅವರ ತಂತ್ರಗಳಲ್ಲಿ ಅವರನ್ನು ಯಶಸ್ವಿಯಾಗಲು ಬಿಡಬೇಡಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸೋನಿಯಾ ಗಾಂಧಿ, ನಾಯಕರು ಮಾತನಾಡುತ್ತಿದ್ದಂತೆ ವೇದಿಕೆಯ ಮೇಲೆ ತೆರಳಿ ಕಲ್ಪನಾ ಸೊರೆನ್ ಮತ್ತು ಸುನೀತಾ ಕೇಜ್ರಿವಾಲ್ ನಡುವೆ ಒಗ್ಗಟ್ಟಿನ ಸಂಕೇತವಾಗಿ ಕುಳಿತುಕೊಂಡರು. ಹಿರಿಯ ನಾಯಕರುಗಳಾದ ಫಾರೂಕ್ ಅಬ್ದುಲ್ಲಾ, ಡಿ. ರಾಜಾ, ತಿರುಚಿ ಶಿವ, ತೋಲ್ ತಿರುಮಾವಲನ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ಇತರರು ಮೋದಿ ಆಡಳಿತವನ್ನು ಮೋದಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿ “ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಿ” ಎಂದು ಜನರಿಗೆ ಕರೆ ನೀಡಿದ್ದಾರೆ. ನಮ್ಮ ದೇಶವು ಯಾರೊಬ್ಬರ ಸ್ವತ್ತಲ್ಲ ಎಂದು ನಾನು ಈ ನಿರಂಕುಶಾಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಭಗವಂತ್‌ ಮಾನ್ ಹೇಳಿದ್ದಾರೆ.

ಜಾರ್ಖಂಡ್ ಜನಮುಕ್ತಿ ಮೋರ್ಚಾದ ಚಂಪೈ ಸೊರೆನ್ ಮಾತನಾಡಿ, ಆದಿವಾಸಿ ಸಮುದಾಯಗಳಲ್ಲಿ ಅವರ ಪೂರ್ವಜರು ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡಿದ ಇತಿಹಾಸವನ್ನು ಹೊಂದಿದ್ದಾರೆ. ನಾವು ಮತ್ತೆ ಅದೇ ಹೊರಾಟವನ್ನು ಮಾಡುತ್ತೇವೆ ಆದರೆ ಇದು ನಮ್ಮ ಮತಗಳ ಮಾಧ್ಯಮದ ಮೂಲಕ ಆಗುತ್ತದೆ. ಇದು ನಮ್ಮ ನ್ಯಾಯಕ್ಕಾಗಿ ಹೋರಾಟವಾಗಿದೆ ಎಂದು ಸೋರೆನ್ ಹೇಳಿದ್ದಾರೆ.

ಹಿಂದೂ ದೇವರಾದ ರಾಮನು, ರಾವಣನ ವಿರುದ್ಧ ಹೋರಾಡಿದಾಗ ಅವನಿಗೆ ಶಕ್ತಿ ಇರಲಿಲ್ಲ, ಆದರೆ ರಾವಣನಿಗೆ ಚಿನ್ನದ ಲಂಕಾ ಇತ್ತು.  ರಾಮನು ಸತ್ಯ ಮತ್ತು ನ್ಯಾಯಕ್ಕಾಗಿ ನಿಂತಿದ್ದಾನೆ. ನಾವು ಅದೇ ಮಾದರಿಯನ್ನು ಅನುಸರಿಸುತ್ತೇವೆ, ಎಂದು  ಪ್ರಿಯಾಂಕಾ ಗಾಂಧಿ ಹೇಳಿದರು.

ಕೊನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,  ಭಗವಂತ್‌ ಮಾನ್ ಮತ್ತು ಓ’ಬ್ರೇನ್ ಅವರನ್ನು ನೋಡುತ್ತಾ, ಈ ಸರ್ವಾಧಿಕಾರಿ ಆಡಳಿತದ ವಿರುದ್ಧ ಇಂಡಿಯಾ ಮೈತ್ರಿ ಪಕ್ಷಗಳು ಮೊದಲು ಒಟ್ಟಾಗಿ ನಿಲ್ಲುವ ಅಗತ್ಯವಿದೆ. ನಮ್ಮ ಪರಸ್ಪರ ಭಿನ್ನಾಭಿಪ್ರಾಯಗಳು ನಮ್ಮ ಮೈತ್ರಿಯನ್ನು ಹಾಳುಗೆಡವಲು ನಾವು ಬಿಡುವುದಿಲ್ಲ ಏಕೆಂದರೆ ಈ ಹೋರಾಟವು ಕೇವಲ ಒಂದು ಚುನಾವಣೆಗೆ ಮಾತ್ರವಲ್ಲ, ದೊಡ್ಡ ಕಾರಣಕ್ಕಾಗಿದೆ ಎಂದು ಹೇಳಿದ್ದಾರೆ.

ಪ್ರತಿಪಕ್ಷಗಳು ಒಂದಾಗಬೇಕು. ಭಾರತದಲ್ಲಿ ಕಾಣುವ ವಿವಿಧತೆಯಲ್ಲಿ ಏಕತೆಯನ್ನು ನಮ್ಮ ಮೈತ್ರಿಯಲ್ಲೂ ಕಾಣಬೇಕಿದೆ. ಆರೆಸ್ಸೆಸ್-ಬಿಜೆಪಿ ವಿಷ ಎಂಬುವುದು ನೆನಪಿರಲಿ. ನೀವು ಅದನ್ನು ಒಮ್ಮೆಯೂ ನೆಕ್ಕಲು ಸಾಧ್ಯವಿಲ್ಲ. ಅದು ಕೂಡ ನಿನಗೆ ಸಾವನ್ನು ತರುತ್ತದೆ. ನಮ್ಮ ಭಿನ್ನಾಭಿಪ್ರಾಯಗಳು ಏನೇ ಇರಲಿ, ನಾವು ಮೊದಲು ಹೇಗೆ ಒಗ್ಗಟ್ಟಿನ ಶಕ್ತಿಯಾಗಬೇಕೆಂದು ಕಲಿಯಬೇಕು. ಒಬ್ಬರನ್ನೊಬ್ಬರು ಮೆಟ್ಟಿ ನಿಲ್ಲುವುದರಿಂದ ನಾವು ಏನನ್ನೂ ಪಡೆಯುವುದಿಲ್ಲ. ನಮ್ಮ ಹೋರಾಟ ಒಬ್ಬ ವ್ಯಕ್ತಿಯ ಬಗ್ಗೆ ಇರಬಾರದು. ಇದು ನಮ್ಮ ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ನೀರಿನ ಬಕೆಟ್‌ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...