Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...