Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...