Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....