Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...