Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....