Homeಮುಖಪುಟಕನಿಷ್ಠ 20 ಸಾವಿರ 'ಕಾಕ್ರೋಚ್‌'ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ - ಅಶ್ರುವಾಯು

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಯುವಜನರ ಮೇಲೆ ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್‌ ಮಾಡಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾದ ನೀಟ್‌ನಲ್ಲಿ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂದು ಸಿಜೆಪಿ “ಸಂಸತ್ ಚಲೋ”ಗೆ ಕರೆ ನೀಡುತ್ತು. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದ ಸಾವಿರಾರು ಕಾಕ್ರೋಚ್‌ಗಳನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು.

ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುವಾಗ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ ಕೆಲವು ಪ್ರತಿಭಟನಾಕಾರರು ಮತ್ತು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸಹ ಸ್ಥಗಿತಗೊಳಿಸಲಾಗಿತ್ತು.

ಶಾಂತಿಯುತ ಪ್ರತಿಭಟನೆಗೆ ಸಿಜೆಪಿ ಕರೆ

“ಕೆಲವು ಕಡೆಗಳಲ್ಲಿ ನಿಮ್ಮನ್ನು ತಡೆಯಲಾಗಿದೆ; ಆದರೂ ನೀವಯ ಶಾಂತವಾಗಿರಿ. ನಾವು ಶಾಂತಿ ಮತ್ತು ಪ್ರೀತಿಯಿಂದ ಮಾತ್ರ ಇದನ್ನು ಗೆಲ್ಲುತ್ತೇವೆ” ಎಂದು ಪಕ್ಷ ಹೇಳಿದೆ.

ಸಂಸತ್ ಮೆರವಣಿಗೆಗೆ ಪೊಲೀಸರು ಅನುಮತಿ ನಿರಾಕರಿಸಿ ದೊಡ್ಡ ಸಭೆಗಳನ್ನು ನಿಷೇಧಿಸಿದ್ದರು. ನಿಷೇಧಾಜ್ಞೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದರು.

“ಜಂತರ್ ಮಂತರ್‌ನಲ್ಲಿ ನಿಗದಿಪಿಡಿದ ಪ್ರತಿಭಟನಾ ಸ್ಥಳವನ್ನು ಹೊರತುಪಡಿಸಿ, ಪೂರ್ವಾನುಮತಿಯೊಂದಿಗೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಪ್ರತಿಭಟನಾ ಮೆರವಣಿಗೆಗಳು, ಹೋರಾಟಗಳು ಮತ್ತು ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಕೇಂದ್ರ ಸಚಿವಾಲಯ ಮತ್ತು ಸೇವಾ ತೀರ್ಥ ಎಂಬ ಐದು ಮೆಟ್ರೋ ನಿಲ್ದಾಣಗಳನ್ನು ಭದ್ರತಾ ಕಾರಣಗಳಿಗಾಗಿ ಮುಂದಿನ ಸೂಚನೆಗಳವರೆಗೆ ಮುಚ್ಚಿದ ನಂತರ ದೆಹಲಿಯ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿಯೂ ಅವ್ಯವಸ್ಥೆ ಉಂಟಾಯಿತು.

ನೂರಾರು ಪ್ರಯಾಣಿಕರು ಮಾರ್ಗಮಧ್ಯೆ ಸಿಕ್ಕಿಹಾಕಿಕೊಂಡರು, ತಮ್ಮ ನಿಲ್ದಾಣಗಳಿಗೆ ತಲುಪಲು ದೀರ್ಘ ಮಾರ್ಗಗಳನ್ನು ತೆಗೆದುಕೊಳ್ಳಬೇಕಾಯಿತು.

ದೆಹಲಿಯ ಅತ್ಯಂತ ಜನನಿಬಿಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಒಂದಾದ ರಾಜೀವ್ ಚೌಕ್‌ನಲ್ಲಿ, ಮುಚ್ಚಿದ ನಿರ್ಗಮನ ದ್ವಾರಗಳ ಬಳಿ ಪ್ರಯಾಣಿಕರು ಕಿಕ್ಕಿರಿದು ತುಂಬಿರುವುದು ಕಂಡುಬಂದಿದೆ.

ಸಿಜೆಪಿ ಹುಟ್ಟಿದ್ದು ಹೇಗೆ?

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಯುವಕರನ್ನು “ಪರಾವಲಂಬಿಗಳು” ಮತ್ತು “ಜಿರಳೆಗಳು” ಎಂಬ ಹೇಳಿಕೆಯ ವಿವಾದದ ನಂತರ, ಮೇ ತಿಂಗಳಲ್ಲಿ ಅಭಿಜೀತ್ ದಿಪ್ಕೆ ಅವರು ವಿಡಂಬನಾತ್ಮಕ ಡಿಜಿಟಲ್ ಸಂಘಟನೆಯಾಗಿ ಜಿರಳೆ ಜನತಾ ಪಕ್ಷವನ್ನು ಪ್ರಾರಂಭಿಸಿದರು.

ಕೆಲವೇ ದಿನಗಳಲ್ಲಿ, ಇದು ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸಿತು. ಇದು ವಿವಿಧ ವಿರೋಧ ಪಕ್ಷದ ರಾಜಕಾರಣಿಗಳು, ಕಾರ್ಯಕರ್ತರು, ಕಲಾವಿದರು ಮತ್ತು ಕ್ರೀಡಾಪಟುಗಳಿಂದ ಬೆಂಬಲವನ್ನು ಗಳಿಸಿತು.

ಕಳೆದ ಎರಡು ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿರುವ 30 ವರ್ಷದ ದಿಪ್ಕೆ, ನಂತರ ಜೂನ್‌ನಲ್ಲಿ ಭಾರತಕ್ಕೆ ಮರಳಿದರು. ಪತ್ರಿಕೆ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳಿಗೆ ಕರೆ ನೀಡಿದರು.

ನಂತರ ಜೂನ್ 28 ರಂದು ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಿದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರೊಂದಿಗೆ ಸೇರಿಕೊಂಡರು.

ಜುಲೈ 15 ರಂದು ಜಿರಳೆ ಜನತಾ ಪಕ್ಷಗಳ (ಸಿಜೆಪಿ) ಪ್ರತಿಭಟನೆಯ ಸಂದರ್ಭದಲ್ಲಿ ಸೋನಮ್ ವಾಂಗ್‌ಚುಕ್ ಅವರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹದ 18 ನೇ ದಿನದಂದು ವೈದ್ಯಕೀಯ ವೃತ್ತಿಪರರು ಹಾಜರಿದ್ದರು.

59 ವರ್ಷದ ವಾಂಗ್‌ಚುಕ್ ಅವರನ್ನು ಕಳೆದ ಶನಿವಾರ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...