ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್ಗಳನ್ನು ಬಳಸಿದರು. ಯುವಜನರ ಮೇಲೆ ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್ ಮಾಡಿದ್ದಾರೆ.
ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾದ ನೀಟ್ನಲ್ಲಿ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂದು ಸಿಜೆಪಿ “ಸಂಸತ್ ಚಲೋ”ಗೆ ಕರೆ ನೀಡುತ್ತು. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದ ಸಾವಿರಾರು ಕಾಕ್ರೋಚ್ಗಳನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು.
ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುವಾಗ ಬ್ಯಾರಿಕೇಡ್ಗಳನ್ನು ಮುರಿಯಲು ಪ್ರಯತ್ನಿಸಿದಾಗ ಕೆಲವು ಪ್ರತಿಭಟನಾಕಾರರು ಮತ್ತು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸಹ ಸ್ಥಗಿತಗೊಳಿಸಲಾಗಿತ್ತು.

ಶಾಂತಿಯುತ ಪ್ರತಿಭಟನೆಗೆ ಸಿಜೆಪಿ ಕರೆ
“ಕೆಲವು ಕಡೆಗಳಲ್ಲಿ ನಿಮ್ಮನ್ನು ತಡೆಯಲಾಗಿದೆ; ಆದರೂ ನೀವಯ ಶಾಂತವಾಗಿರಿ. ನಾವು ಶಾಂತಿ ಮತ್ತು ಪ್ರೀತಿಯಿಂದ ಮಾತ್ರ ಇದನ್ನು ಗೆಲ್ಲುತ್ತೇವೆ” ಎಂದು ಪಕ್ಷ ಹೇಳಿದೆ.
ಸಂಸತ್ ಮೆರವಣಿಗೆಗೆ ಪೊಲೀಸರು ಅನುಮತಿ ನಿರಾಕರಿಸಿ ದೊಡ್ಡ ಸಭೆಗಳನ್ನು ನಿಷೇಧಿಸಿದ್ದರು. ನಿಷೇಧಾಜ್ಞೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದರು.
“ಜಂತರ್ ಮಂತರ್ನಲ್ಲಿ ನಿಗದಿಪಿಡಿದ ಪ್ರತಿಭಟನಾ ಸ್ಥಳವನ್ನು ಹೊರತುಪಡಿಸಿ, ಪೂರ್ವಾನುಮತಿಯೊಂದಿಗೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಪ್ರತಿಭಟನಾ ಮೆರವಣಿಗೆಗಳು, ಹೋರಾಟಗಳು ಮತ್ತು ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಪೊಲೀಸರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಕೇಂದ್ರ ಸಚಿವಾಲಯ ಮತ್ತು ಸೇವಾ ತೀರ್ಥ ಎಂಬ ಐದು ಮೆಟ್ರೋ ನಿಲ್ದಾಣಗಳನ್ನು ಭದ್ರತಾ ಕಾರಣಗಳಿಗಾಗಿ ಮುಂದಿನ ಸೂಚನೆಗಳವರೆಗೆ ಮುಚ್ಚಿದ ನಂತರ ದೆಹಲಿಯ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿಯೂ ಅವ್ಯವಸ್ಥೆ ಉಂಟಾಯಿತು.
ನೂರಾರು ಪ್ರಯಾಣಿಕರು ಮಾರ್ಗಮಧ್ಯೆ ಸಿಕ್ಕಿಹಾಕಿಕೊಂಡರು, ತಮ್ಮ ನಿಲ್ದಾಣಗಳಿಗೆ ತಲುಪಲು ದೀರ್ಘ ಮಾರ್ಗಗಳನ್ನು ತೆಗೆದುಕೊಳ್ಳಬೇಕಾಯಿತು.
ದೆಹಲಿಯ ಅತ್ಯಂತ ಜನನಿಬಿಡ ಇಂಟರ್ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಒಂದಾದ ರಾಜೀವ್ ಚೌಕ್ನಲ್ಲಿ, ಮುಚ್ಚಿದ ನಿರ್ಗಮನ ದ್ವಾರಗಳ ಬಳಿ ಪ್ರಯಾಣಿಕರು ಕಿಕ್ಕಿರಿದು ತುಂಬಿರುವುದು ಕಂಡುಬಂದಿದೆ.
ಸಿಜೆಪಿ ಹುಟ್ಟಿದ್ದು ಹೇಗೆ?
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಯುವಕರನ್ನು “ಪರಾವಲಂಬಿಗಳು” ಮತ್ತು “ಜಿರಳೆಗಳು” ಎಂಬ ಹೇಳಿಕೆಯ ವಿವಾದದ ನಂತರ, ಮೇ ತಿಂಗಳಲ್ಲಿ ಅಭಿಜೀತ್ ದಿಪ್ಕೆ ಅವರು ವಿಡಂಬನಾತ್ಮಕ ಡಿಜಿಟಲ್ ಸಂಘಟನೆಯಾಗಿ ಜಿರಳೆ ಜನತಾ ಪಕ್ಷವನ್ನು ಪ್ರಾರಂಭಿಸಿದರು.
ಕೆಲವೇ ದಿನಗಳಲ್ಲಿ, ಇದು ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸಿತು. ಇದು ವಿವಿಧ ವಿರೋಧ ಪಕ್ಷದ ರಾಜಕಾರಣಿಗಳು, ಕಾರ್ಯಕರ್ತರು, ಕಲಾವಿದರು ಮತ್ತು ಕ್ರೀಡಾಪಟುಗಳಿಂದ ಬೆಂಬಲವನ್ನು ಗಳಿಸಿತು.
ಕಳೆದ ಎರಡು ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿರುವ 30 ವರ್ಷದ ದಿಪ್ಕೆ, ನಂತರ ಜೂನ್ನಲ್ಲಿ ಭಾರತಕ್ಕೆ ಮರಳಿದರು. ಪತ್ರಿಕೆ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳಿಗೆ ಕರೆ ನೀಡಿದರು.
ನಂತರ ಜೂನ್ 28 ರಂದು ಜಂತರ್ ಮಂತರ್ನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಿದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರೊಂದಿಗೆ ಸೇರಿಕೊಂಡರು.
ಜುಲೈ 15 ರಂದು ಜಿರಳೆ ಜನತಾ ಪಕ್ಷಗಳ (ಸಿಜೆಪಿ) ಪ್ರತಿಭಟನೆಯ ಸಂದರ್ಭದಲ್ಲಿ ಸೋನಮ್ ವಾಂಗ್ಚುಕ್ ಅವರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹದ 18 ನೇ ದಿನದಂದು ವೈದ್ಯಕೀಯ ವೃತ್ತಿಪರರು ಹಾಜರಿದ್ದರು.
59 ವರ್ಷದ ವಾಂಗ್ಚುಕ್ ಅವರನ್ನು ಕಳೆದ ಶನಿವಾರ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದರು.


