Homeಅಂತರಾಷ್ಟ್ರೀಯದೋಣಿ ಮುಳುಗಿ ಕನಿಷ್ಠ 27 ಸಾವು, 100 ನಾಪತ್ತೆ

ದೋಣಿ ಮುಳುಗಿ ಕನಿಷ್ಠ 27 ಸಾವು, 100 ನಾಪತ್ತೆ

- Advertisement -
- Advertisement -

ನೈಜೀರಿಯಾ: ದೋಣಿ ಮುಳುಗಿ ಕನಿಷ್ಠ 27 ಸಾವು, 100 ಮಂದಿ ನಾಪತ್ತೆಯಾಗಿರುವ ದುರ್ಘಟನೆ ನೈಜೀರಿಯಾದಲ್ಲಿ ನಡೆದಿದೆ.

ಇಲ್ಲಿಯವರೆಗೆ ರಕ್ಷಣಾ ತಂಡವು 27 ಶವಗಳನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಸ್ಥಳೀಯ ಮುಳುಗುದಾರರು ಇನ್ನೂ ಶೋಧನಾ ಕಾರ್ಯವನ್ನು ಮುಂದುವರಿಸಿದ್ದಾರೆ ಎಂದು ಕೋಗಿ ರಾಜ್ಯ ತುರ್ತು ಸೇವೆಗಳ ವಕ್ತಾರ ಸಾಂಡ್ರಾ ಮೂಸಾ ತಿಳಿಸಿದ್ದಾರೆ.

ಈ ದುರ್ಘಟನೆ  ನಡೆದು 12 ಗಂಟೆಗಳು ಕಳೆದರೂ ಇಲ್ಲಿಯವರೆಗೆ ಬದುಕುಳಿದವರು ಯಾರೊಬ್ಬರು ಪತ್ತೆಯಾಗಿಲ್ಲವೆಂದು ಅವರು ಹೇಳಿದ್ದಾರೆ.

ಅಲ್ಲಿನ ಆಡಳಿತವು ಈ ಘಟನೆಗೆ ಯಾವುದೇ ಕಾರಣವನ್ನು ದೃಢಪಡಿಸಿಲ್ಲ. ಅಲ್ಲಿನ ಮಾಧ್ಯಮಗಳು ಧೋಣಿಯಲ್ಲಿ ಹೆಚ್ಚಿನ ಜನದಟ್ಟನೆಯೇ ಕಾರಣವೆಂದು ಹೇಳಿವೆ. ನೈಜೀಯಾದ ಕಡಿದಾದ ಪ್ರದೇಶಗಳಲ್ಲಿ ಉತ್ತಮ ರಸ್ತೆಗಳು ಲಭ್ಯವಿಲ್ಲದೇ ಇರುವ ಕಾರಣ ದೋಣಿಗಳಲ್ಲಿ ಹೆಚ್ಚಿನ ಜನ ಪ್ರಯಾಣಿಸುವುದು ಸರ್ವೆಸಾಮಾನ್ಯವೆಂದು ಹೇಳಲಾಗಿದೆ.

ದೋಣಿಯು ಮುಳುಗಿದ ನಂತರ ರಕ್ಷಣಾ ತಂಡವು ಅದರ ದಿಕ್ಕನ್ನು ಪತ್ತೆ ಹಚ್ಚುವಲ್ಲಿ ಮೊದಲು ಸಾಕಷ್ಟು ಸಮಸ್ಯೆಯನ್ನೇದುರಿಸಿದರು ಎಂದು ನೈಜೀರಿಯಾದ ರಾಷ್ಟ್ರೀಯ ತುರ್ತು ನಿಯಂತ್ರಣ ಮಂಡಳಿಯ ಮೇಲ್ವಿಚಾರಕ ಜಸ್ಟೀನ್ ಉವಾಜುರುಯೋನಿ ಮಾಹಿತಿ ನೀಡಿದ್ದಾರೆ.

ಜಲಸಾರಿಗೆಗಾಗಿ ಸುರಕ್ಷತಾ ಕ್ರಮಗಳು ಮತ್ತು ನಿಬಂಧನೆಗಳನ್ನು ಜಾರಿಗೊಳಿಸಲು ಇಲ್ಲಿನ ಅಧಿಕಾರಿಗಳು ಹೆಣಗಾಡುತ್ತಿರುವ ಮಧ್ಯೆ, ಆಫ್ರಿಕಾದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ನೈಜೀರಿಯಾದಲ್ಲಿ ಇಂತಹ ಮಾರಣಾಂತಿಕ ಘಟನೆ ಹೆಚ್ಚು ಕಳವಳಕ್ಕೆ ಕಾರಣವಾಗಿದೆ ಎಂದು ಜಸ್ಟೀನ್‌ ಹೇಳಿದ್ದಾರೆ.

ಬಹುತೇಕ ಇಂತಹ ಘಟನೆಗಳಿಗೆ  ಪ್ರಯಾಣದಲ್ಲಿ ಹೆಚ್ಚಿನ ಜನದಟ್ಟನೆ ಮತ್ತು ದೋಣಿಗಳನ್ನು ಸರಿಯಾಗಿ ನಿಭಾಯಿಸುವಲ್ಲಿನ ಕೊರತೆಯೇ ಪ್ರಮುಖ ಕಾರಣವಾಗಿದೆ. ಜಲ ಸಾರಿಗೆಗಾಗಿ ಅಲ್ಲಿನ ಆಡಳಿತವು ಪ್ರಯಾಣಿಕರಿಗೆ ಜೀವ ರಕ್ಷಾ ಜಾಕೆಟ್‌ ಗಳನ್ನು ಒದಗಿಸುವಲ್ಲಿ ಸಫಲವಾಗಿಲ್ಲ. ಈ ಜೀವ ರಕ್ಷಾ ಕವಚಗಳ ಲಭ್ಯತೆಯ ಕೊರತೆ ಒಂದೆಡೆಯಾದರೆ, ಲಭ್ಯವಿರುವ  ಕವಚಗಳಿಗೆ ದುಬಾರಿ ಬೆಲೆ ಮತ್ತೊಂದು ಕಾರಣವಾಗಿದೆ.

ಇದನ್ನೂ ಓದಿ...ಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...