Homeಅಂತರಾಷ್ಟ್ರೀಯದೋಣಿ ಮುಳುಗಿ ಕನಿಷ್ಠ 27 ಸಾವು, 100 ನಾಪತ್ತೆ

ದೋಣಿ ಮುಳುಗಿ ಕನಿಷ್ಠ 27 ಸಾವು, 100 ನಾಪತ್ತೆ

- Advertisement -
- Advertisement -

ನೈಜೀರಿಯಾ: ದೋಣಿ ಮುಳುಗಿ ಕನಿಷ್ಠ 27 ಸಾವು, 100 ಮಂದಿ ನಾಪತ್ತೆಯಾಗಿರುವ ದುರ್ಘಟನೆ ನೈಜೀರಿಯಾದಲ್ಲಿ ನಡೆದಿದೆ.

ಇಲ್ಲಿಯವರೆಗೆ ರಕ್ಷಣಾ ತಂಡವು 27 ಶವಗಳನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಸ್ಥಳೀಯ ಮುಳುಗುದಾರರು ಇನ್ನೂ ಶೋಧನಾ ಕಾರ್ಯವನ್ನು ಮುಂದುವರಿಸಿದ್ದಾರೆ ಎಂದು ಕೋಗಿ ರಾಜ್ಯ ತುರ್ತು ಸೇವೆಗಳ ವಕ್ತಾರ ಸಾಂಡ್ರಾ ಮೂಸಾ ತಿಳಿಸಿದ್ದಾರೆ.

ಈ ದುರ್ಘಟನೆ  ನಡೆದು 12 ಗಂಟೆಗಳು ಕಳೆದರೂ ಇಲ್ಲಿಯವರೆಗೆ ಬದುಕುಳಿದವರು ಯಾರೊಬ್ಬರು ಪತ್ತೆಯಾಗಿಲ್ಲವೆಂದು ಅವರು ಹೇಳಿದ್ದಾರೆ.

ಅಲ್ಲಿನ ಆಡಳಿತವು ಈ ಘಟನೆಗೆ ಯಾವುದೇ ಕಾರಣವನ್ನು ದೃಢಪಡಿಸಿಲ್ಲ. ಅಲ್ಲಿನ ಮಾಧ್ಯಮಗಳು ಧೋಣಿಯಲ್ಲಿ ಹೆಚ್ಚಿನ ಜನದಟ್ಟನೆಯೇ ಕಾರಣವೆಂದು ಹೇಳಿವೆ. ನೈಜೀಯಾದ ಕಡಿದಾದ ಪ್ರದೇಶಗಳಲ್ಲಿ ಉತ್ತಮ ರಸ್ತೆಗಳು ಲಭ್ಯವಿಲ್ಲದೇ ಇರುವ ಕಾರಣ ದೋಣಿಗಳಲ್ಲಿ ಹೆಚ್ಚಿನ ಜನ ಪ್ರಯಾಣಿಸುವುದು ಸರ್ವೆಸಾಮಾನ್ಯವೆಂದು ಹೇಳಲಾಗಿದೆ.

ದೋಣಿಯು ಮುಳುಗಿದ ನಂತರ ರಕ್ಷಣಾ ತಂಡವು ಅದರ ದಿಕ್ಕನ್ನು ಪತ್ತೆ ಹಚ್ಚುವಲ್ಲಿ ಮೊದಲು ಸಾಕಷ್ಟು ಸಮಸ್ಯೆಯನ್ನೇದುರಿಸಿದರು ಎಂದು ನೈಜೀರಿಯಾದ ರಾಷ್ಟ್ರೀಯ ತುರ್ತು ನಿಯಂತ್ರಣ ಮಂಡಳಿಯ ಮೇಲ್ವಿಚಾರಕ ಜಸ್ಟೀನ್ ಉವಾಜುರುಯೋನಿ ಮಾಹಿತಿ ನೀಡಿದ್ದಾರೆ.

ಜಲಸಾರಿಗೆಗಾಗಿ ಸುರಕ್ಷತಾ ಕ್ರಮಗಳು ಮತ್ತು ನಿಬಂಧನೆಗಳನ್ನು ಜಾರಿಗೊಳಿಸಲು ಇಲ್ಲಿನ ಅಧಿಕಾರಿಗಳು ಹೆಣಗಾಡುತ್ತಿರುವ ಮಧ್ಯೆ, ಆಫ್ರಿಕಾದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ನೈಜೀರಿಯಾದಲ್ಲಿ ಇಂತಹ ಮಾರಣಾಂತಿಕ ಘಟನೆ ಹೆಚ್ಚು ಕಳವಳಕ್ಕೆ ಕಾರಣವಾಗಿದೆ ಎಂದು ಜಸ್ಟೀನ್‌ ಹೇಳಿದ್ದಾರೆ.

ಬಹುತೇಕ ಇಂತಹ ಘಟನೆಗಳಿಗೆ  ಪ್ರಯಾಣದಲ್ಲಿ ಹೆಚ್ಚಿನ ಜನದಟ್ಟನೆ ಮತ್ತು ದೋಣಿಗಳನ್ನು ಸರಿಯಾಗಿ ನಿಭಾಯಿಸುವಲ್ಲಿನ ಕೊರತೆಯೇ ಪ್ರಮುಖ ಕಾರಣವಾಗಿದೆ. ಜಲ ಸಾರಿಗೆಗಾಗಿ ಅಲ್ಲಿನ ಆಡಳಿತವು ಪ್ರಯಾಣಿಕರಿಗೆ ಜೀವ ರಕ್ಷಾ ಜಾಕೆಟ್‌ ಗಳನ್ನು ಒದಗಿಸುವಲ್ಲಿ ಸಫಲವಾಗಿಲ್ಲ. ಈ ಜೀವ ರಕ್ಷಾ ಕವಚಗಳ ಲಭ್ಯತೆಯ ಕೊರತೆ ಒಂದೆಡೆಯಾದರೆ, ಲಭ್ಯವಿರುವ  ಕವಚಗಳಿಗೆ ದುಬಾರಿ ಬೆಲೆ ಮತ್ತೊಂದು ಕಾರಣವಾಗಿದೆ.

ಇದನ್ನೂ ಓದಿ...ಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...