Homeಮುಖಪುಟಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

ಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

- Advertisement -
- Advertisement -

ಭಯೋತ್ಪಾದನೆ ನಿರ್ಮೂಲನೆಯ ನೆಪದಲ್ಲಿ ಮುಗ್ದ ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣಕ್ಕೆ ಸೋಮವಾರ 67 ಜನರು ಬಲಿಯಾಗಿದ್ದಾರೆ.

ಗಾಝಾದ ಅತ್ಯಂತ ಜನ ನಿಬಿಡ ನಗರವಾದ ರಫಾದಲ್ಲಿ ಇಸ್ರೇಲ್ ಅಟ್ಟಹಾಸ ಮೆರೆದಿದ್ದು, ಕಂದಮ್ಮಗಳು ಸೇರಿದಂತೆ 67 ಜನರು ಕೊನೆಯುಸಿರೆಳೆದಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳು ಪ್ರಕಟಿಸಿರುವ ಫೋಟೋಗಳು ಕಣ್ಣೀರು ತರಿಸುತ್ತಿವೆ.

ಸೋಮವಾರ ಗಾಝಾದ ದಕ್ಷಿಣದ ನಗರವಾದ ರಫಾದ ವಿವಿಧ ಭಾಗಗಳಲ್ಲಿ 14 ಮನೆಗಳು ಮತ್ತು ಮೂರು ಮಸೀದಿಗಳನ್ನು ಇಸ್ರೇಲ್ ಸೇನೆ ಹೊಡೆದುರುಳಿಸಿವೆ ಎಂದು ಹಮಾಸ್ ಸರ್ಕಾರ ವರದಿ ಮಾಡಿದೆ.

“ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಶಬೌರಾ ಪ್ರದೇಶದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಲಾಗಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೊಂಡಿದೆ.

ಯುಎಸ್‌ನ ಎಬಿಸಿ ನ್ಯೂಸ್‌ ಜೊತೆ ಮಾತನಾಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ಹಮಾಸ್ ಅನ್ನು ನಿರ್ಮೂಲನೆ ಮಾಡುವವರೆಗೆ ರಫಾದಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ. ಅಲ್ಲಿಂದ ಹೊರ ಬರಲು ಬಯಸುವ ನಾಗರಿಕರಿಗೆ ನಾವು ವ್ಯವಸ್ಥೆಗಳನ್ನು ಮಾಡಿ ಕೊಡುತ್ತೇವೆ” ಎಂದಿದ್ದಾರೆ.

ಸುಮಾರು 130 ದಿನಗಳ ಕಾಲ ರಫಾದಲ್ಲಿ ಹಮಾಸ್ ವಶದಲ್ಲಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಸೋಮವಾರ ಮುಂಜಾನೆ ಘೋಷಿಸಿದೆ. ಫೆರ್ನಾಂಡೋ ಸೈಮನ್ ಮರ್ಮನ್ ಮತ್ತು ಲೂಯಿಸ್ ಹರ್ ಎಂಬ ಇಬ್ಬರನ್ನುಅಕ್ಟೋಬರ್ 7ರಂದು ಹಮಾಸ್ ಕಿಬ್ಬುಟ್ಜ್ ನಿರ್ ಯಿಟ್ಜಾಕ್‌ನಿಂದ ಅಪಹರಿಸಿತ್ತು. ಅವರನ್ನು ರಕ್ಷಿಸಿದ್ದೇವೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದೆ.

ಅಲ್‌ ಜಝೀರಾ ವರದಿಯ ಪ್ರಕಾರ, ಪ್ರಸ್ತುತ ಸುಮಾರು 1.4 ಮಿಲಿಯನ್ ಪ್ಯಾಲೆಸ್ತೀನಿಯನ್ನರು ರಫಾದಲ್ಲಿ ಆಶ್ರಯ ಪಡೆದಿದ್ದಾರೆ. ಅನೇಕರು ಡೇರೆಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಆಹಾರ, ನೀರು ಮತ್ತು ಔಷಧ ಆಹಾಕಾರ ಉಂಟಾಗಿದೆ.

ಇಸ್ರೇಲ್ ಮತ್ತು ಯುಎಸ್‌ ಜಂಟಿಯಾಗಿ ರಫಾದ ಜನರಿಗೆ ಅಗತ್ಯ ಸಾಮಾಗ್ರಿ ಒದಗಿಸುವ ಜವಬ್ದಾರಿ ವಹಿಸಿಕೊಂಡಿದೆ. ಜನರಿಗೆ ಪುನರ್ವಸತಿ ಕಲ್ಪಿಸಿರುವ ರಫಾ ನಗರದಲ್ಲೂ ಇಸ್ರೇಲ್ ಆಕ್ರಮಣ ಪ್ರಾರಂಭಿಸಿರುವುದಕ್ಕೆ ಮಾನವ ಹಕ್ಕುಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಮಾಧ್ಯಮ ವರದಿಗಳ ಪ್ರಕಾರ, ಇಸ್ರೇಲ್ ದಾಳಿಯಿಂದ ಮೃತಪಟ್ಟ ಗಾಝಾ ನಾಗರಿಕರ ಸಂಖ್ಯೆ 28 ಸಾವಿರ ದಾಟಿದೆ.

ಇದನ್ನೂ ಓದಿ: ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...