Homeಮುಖಪುಟಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

ಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

- Advertisement -
- Advertisement -

ಭಯೋತ್ಪಾದನೆ ನಿರ್ಮೂಲನೆಯ ನೆಪದಲ್ಲಿ ಮುಗ್ದ ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣಕ್ಕೆ ಸೋಮವಾರ 67 ಜನರು ಬಲಿಯಾಗಿದ್ದಾರೆ.

ಗಾಝಾದ ಅತ್ಯಂತ ಜನ ನಿಬಿಡ ನಗರವಾದ ರಫಾದಲ್ಲಿ ಇಸ್ರೇಲ್ ಅಟ್ಟಹಾಸ ಮೆರೆದಿದ್ದು, ಕಂದಮ್ಮಗಳು ಸೇರಿದಂತೆ 67 ಜನರು ಕೊನೆಯುಸಿರೆಳೆದಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳು ಪ್ರಕಟಿಸಿರುವ ಫೋಟೋಗಳು ಕಣ್ಣೀರು ತರಿಸುತ್ತಿವೆ.

ಸೋಮವಾರ ಗಾಝಾದ ದಕ್ಷಿಣದ ನಗರವಾದ ರಫಾದ ವಿವಿಧ ಭಾಗಗಳಲ್ಲಿ 14 ಮನೆಗಳು ಮತ್ತು ಮೂರು ಮಸೀದಿಗಳನ್ನು ಇಸ್ರೇಲ್ ಸೇನೆ ಹೊಡೆದುರುಳಿಸಿವೆ ಎಂದು ಹಮಾಸ್ ಸರ್ಕಾರ ವರದಿ ಮಾಡಿದೆ.

“ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಶಬೌರಾ ಪ್ರದೇಶದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಲಾಗಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೊಂಡಿದೆ.

ಯುಎಸ್‌ನ ಎಬಿಸಿ ನ್ಯೂಸ್‌ ಜೊತೆ ಮಾತನಾಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ಹಮಾಸ್ ಅನ್ನು ನಿರ್ಮೂಲನೆ ಮಾಡುವವರೆಗೆ ರಫಾದಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ. ಅಲ್ಲಿಂದ ಹೊರ ಬರಲು ಬಯಸುವ ನಾಗರಿಕರಿಗೆ ನಾವು ವ್ಯವಸ್ಥೆಗಳನ್ನು ಮಾಡಿ ಕೊಡುತ್ತೇವೆ” ಎಂದಿದ್ದಾರೆ.

ಸುಮಾರು 130 ದಿನಗಳ ಕಾಲ ರಫಾದಲ್ಲಿ ಹಮಾಸ್ ವಶದಲ್ಲಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಸೋಮವಾರ ಮುಂಜಾನೆ ಘೋಷಿಸಿದೆ. ಫೆರ್ನಾಂಡೋ ಸೈಮನ್ ಮರ್ಮನ್ ಮತ್ತು ಲೂಯಿಸ್ ಹರ್ ಎಂಬ ಇಬ್ಬರನ್ನುಅಕ್ಟೋಬರ್ 7ರಂದು ಹಮಾಸ್ ಕಿಬ್ಬುಟ್ಜ್ ನಿರ್ ಯಿಟ್ಜಾಕ್‌ನಿಂದ ಅಪಹರಿಸಿತ್ತು. ಅವರನ್ನು ರಕ್ಷಿಸಿದ್ದೇವೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದೆ.

ಅಲ್‌ ಜಝೀರಾ ವರದಿಯ ಪ್ರಕಾರ, ಪ್ರಸ್ತುತ ಸುಮಾರು 1.4 ಮಿಲಿಯನ್ ಪ್ಯಾಲೆಸ್ತೀನಿಯನ್ನರು ರಫಾದಲ್ಲಿ ಆಶ್ರಯ ಪಡೆದಿದ್ದಾರೆ. ಅನೇಕರು ಡೇರೆಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಆಹಾರ, ನೀರು ಮತ್ತು ಔಷಧ ಆಹಾಕಾರ ಉಂಟಾಗಿದೆ.

ಇಸ್ರೇಲ್ ಮತ್ತು ಯುಎಸ್‌ ಜಂಟಿಯಾಗಿ ರಫಾದ ಜನರಿಗೆ ಅಗತ್ಯ ಸಾಮಾಗ್ರಿ ಒದಗಿಸುವ ಜವಬ್ದಾರಿ ವಹಿಸಿಕೊಂಡಿದೆ. ಜನರಿಗೆ ಪುನರ್ವಸತಿ ಕಲ್ಪಿಸಿರುವ ರಫಾ ನಗರದಲ್ಲೂ ಇಸ್ರೇಲ್ ಆಕ್ರಮಣ ಪ್ರಾರಂಭಿಸಿರುವುದಕ್ಕೆ ಮಾನವ ಹಕ್ಕುಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಮಾಧ್ಯಮ ವರದಿಗಳ ಪ್ರಕಾರ, ಇಸ್ರೇಲ್ ದಾಳಿಯಿಂದ ಮೃತಪಟ್ಟ ಗಾಝಾ ನಾಗರಿಕರ ಸಂಖ್ಯೆ 28 ಸಾವಿರ ದಾಟಿದೆ.

ಇದನ್ನೂ ಓದಿ: ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...