Homeಕರ್ನಾಟಕಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಕೊರೊನಾ ಸೋಂಕಿತರಿಗೆ ಬೆಡ್‌ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ.- ಎಚ್.ಡಿ..ಕುಮಾರಸ್ವಾಮಿ

- Advertisement -
- Advertisement -

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನಾದರೂ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೆಟರ್‌ ವ್ಯವಸ್ಥೆ ಮಾಡುವಲ್ಲಿ ಸರ್ಕಾರರ ಸೋತಿದೆ. ಕನಿಷ್ಠ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ವ್ಯವಸ್ಥೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ
ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಂಗಾರಾಮ್ ಆಸ್ಪತ್ರೆ ಸ್ಥಿತಿ: 25 ಕೋವಿಡ್‌ ರೋಗಿಗಳ ಸಾವು, 60 ಜನರ ಪರಿಸ್ಥಿತಿ ಚಿಂತಾಜನಕ

ಚಿತಾಗಾರಗಳಲ್ಲಿ ಮೃತರ ಶವಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದಿದ್ದಾರೆ.

’ಕೊರೊನಾ ಸೋಂಕಿತರಿಗೆ ಬೆಡ್‌ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯ ಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕನಿಷ್ಠ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ವ್ಯವಸ್ಥೆ ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗುರುವಾರ ಕಂದಾಯ ಸಚಿವ ಆರ್‌.ಅಶೋಕ್, ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಸಾಂಪ್ರದಾಯಿಕವಾಗ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...