Homeಕರ್ನಾಟಕಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಕೊರೊನಾ ಸೋಂಕಿತರಿಗೆ ಬೆಡ್‌ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ.- ಎಚ್.ಡಿ..ಕುಮಾರಸ್ವಾಮಿ

- Advertisement -
- Advertisement -

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನಾದರೂ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೆಟರ್‌ ವ್ಯವಸ್ಥೆ ಮಾಡುವಲ್ಲಿ ಸರ್ಕಾರರ ಸೋತಿದೆ. ಕನಿಷ್ಠ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ವ್ಯವಸ್ಥೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ
ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಂಗಾರಾಮ್ ಆಸ್ಪತ್ರೆ ಸ್ಥಿತಿ: 25 ಕೋವಿಡ್‌ ರೋಗಿಗಳ ಸಾವು, 60 ಜನರ ಪರಿಸ್ಥಿತಿ ಚಿಂತಾಜನಕ

ಚಿತಾಗಾರಗಳಲ್ಲಿ ಮೃತರ ಶವಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದಿದ್ದಾರೆ.

’ಕೊರೊನಾ ಸೋಂಕಿತರಿಗೆ ಬೆಡ್‌ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯ ಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕನಿಷ್ಠ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ವ್ಯವಸ್ಥೆ ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗುರುವಾರ ಕಂದಾಯ ಸಚಿವ ಆರ್‌.ಅಶೋಕ್, ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಸಾಂಪ್ರದಾಯಿಕವಾಗ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...