Homeಅಂತರಾಷ್ಟ್ರೀಯಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

- Advertisement -
- Advertisement -

ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಮಧ್ಯ ಬೈರುತ್‌ ನಗರದಲ್ಲಿ ಮೊದಲ ಇಸ್ರೇಲಿ ವೈಮಾನಿಕ ದಾಳಿ ಸೋಮವಾರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡವನ್ನು ನೆಲಸಮಗೊಳಿಸಿದೆ. ಪರಿಣಾಮ, ಕನಿಷ್ಠ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇಸ್ರೇಲ್ ಲೆಬನಾನ್‌ನಾದ್ಯಂತ ಹಲವು ಪ್ರದೇಶಗಳ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಜನರನ್ನು ಕೊಂದು, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಹಿಜ್ಬುಲ್ಲಾ ತನ್ನ ಕಮಾಂಡ್ ರಚನೆಯಲ್ಲಿ ಭಾರೀ ಹೊಡೆತಗಳನ್ನು ಅನುಭವಿಸಿದೆ.

ಘಟನಾ ಸ್ಥಳದಲ್ಲಿದ್ದ ಅಸೋಸಿಯೇಟೆಡ್ ಪ್ರೆಸ್ ಪತ್ರಕರ್ತರ ಪ್ರಕಾರ, “ವೈಮಾನಿಕ ದಾಳಿಯು ಬಹುಮಹಡಿ ವಸತಿ ಕಟ್ಟಡಕ್ಕೆ ಅಪ್ಪಳಿಸಿತು” ಎಂದು ಹೇಳಿದ್ದಾರೆ.

ಪ್ರಮುಖವಾಗಿ ಸುನ್ನಿ ಜಿಲ್ಲೆಯ ಕಟ್ಟಡದ ಬಳಿ ಆಂಬ್ಯುಲೆನ್ಸ್‌ಗಳು ಮತ್ತು ಜನಸಂದಣಿಯು ಜಮಾಯಿಸಿರುವುದನ್ನು ವೀಡಿಯೊಗಳಲ್ಲಿ ಕಾಣಬಹುದು. ಆರಂಭದಲ್ಲಿ ವೈಮಾನಿಕ ದಾಳಿಯು ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿತು. 16 ಮಂದಿ ಗಾಯಗೊಂಡರು ಎಂದು ಲೆಬನಾನಿನ ಸಿವಿಲ್ ಡಿಫೆನ್ಸ್‌ನ ಅಧಿಕಾರಿಯೊಬ್ಬರು ಹೇಳಿದರು.

ಹತ್ಯೆಗೀಡಾದ ವ್ಯಕ್ತಿ ಅಲ್-ಜಮಾ ಅಲ್-ಇಸ್ಲಾಮಿಯಾ ಅಥವಾ ಇಸ್ಲಾಮಿಕ್ ಗ್ರೂಪ್, ಸುನ್ನಿ ರಾಜಕೀಯ ಮತ್ತು ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಜೊತೆ ಮೈತ್ರಿ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದರು. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಪ್ರಸ್ತುತ ಸಂಘರ್ಷದಲ್ಲಿ ಈ ಗುಂಪು ಯಾವುದೇ ಅರ್ಥಪೂರ್ಣ ಪಾತ್ರವನ್ನು ವಹಿಸಿದೆ ಎಂದು ತಿಳಿದಿಲ್ಲ.

ಲೆಬನಾನ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಎಡಪಂಥೀಯ ಬಣವು ತನ್ನ ಮೂವರು ಸದಸ್ಯರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಶನ್ ಆಫ್ ಪ್ಯಾಲೆಸ್ಟೈನ್ ಸೋಮವಾರದ ಮುಂಜಾನೆ ಹೇಳಿಕೆಯಲ್ಲಿ, ಲೆಬನಾನ್‌ನಲ್ಲಿನ ತನ್ನ ಮಿಲಿಟರಿ ಮತ್ತು ಭದ್ರತಾ ಕಮಾಂಡರ್‌ಗಳು ಮೂರನೇ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಕಳೆದ ವಾರದಲ್ಲಿ, ಇಸ್ರೇಲ್ ಆಗಾಗ್ಗೆ ಬೈರುತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡಿದೆ. ಅಲ್ಲಿಹಿಜ್ಬುಲ್ಲಾ ಪ್ರಬಲ ಉಪಸ್ಥಿತಿಯನ್ನು ಹೊಂದಿದೆ. ಶುಕ್ರವಾರದ ಪ್ರಮುಖ ದಾಳಿ ಸೇರಿದಂತೆ ಸಂಘಟನೆ ನಾಯಕ ನಸ್ರಲ್ಲಾನನ್ನು ಕೊಂದಿತು. ಆದರೆ, ನಗರ ಕೇಂದ್ರದ ಸಮೀಪವಿರುವ ಸ್ಥಳಗಳ ಮೇಲೆ ಈವರೆಗೆ ದಾಳಿ ಮಾಡಿರಲಿಲ್ಲ.

ದಾಳಿ ಬಗ್ಗೆ ಇಸ್ರೇಲಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ, ಉಗ್ರಗಾಮಿ ಗುಂಪಿನ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್ ಅವರು ಶನಿವಾರ ಕೊಲ್ಲಲ್ಪಟ್ಟರು ಎಂದು ಹಿಜ್ಬುಲ್ಲಾ ದೃಢಪಡಿಸಿದೆ. ಒಂದು ವಾರದಲ್ಲಿ ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಏಳನೇ ಹಿರಿಯ ಹಿಜ್ಬುಲ್ಲಾ ನಾಯಕನಾಗಿದ್ದಾರೆ. ಅವರು ದಶಕಗಳಿಂದ ಸಾವು ಅಥವಾ ಬಂಧನವನ್ನು ತಪ್ಪಿಸಿಕೊಂಡಿದ್ದ ಸ್ಥಾಪಕ ಸದಸ್ಯರಾಗಿದ್ದರು.

ನಸ್ರಲ್ಲಾನನ್ನು ಕೊಂದ ದಾಳಿಯಲ್ಲಿ ಇನ್ನೊಬ್ಬ ಹಿರಿಯ ಕಮಾಂಡರ್ ಅಲಿ ಕರಾಕಿ ಸಾವನ್ನಪ್ಪಿದ್ದಾನೆ ಎಂದು ಹಿಜ್ಬುಲ್ಲಾ ದೃಢಪಡಿಸಿದರು. ನಸ್ರಲ್ಲಾ ಅವರ ಭದ್ರತಾ ವಿವರಗಳ ಉಸ್ತುವಾರಿ ಸೇರಿದಂತೆ ಕನಿಷ್ಠ 20 ಇತರ ಹಿಜ್ಬುಲ್ಲಾ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿದೆ.

ಭಾನುವಾರದ ವಾಯುದಾಳಿಯಲ್ಲಿ ದೇಶದಾದ್ಯಂತ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ಹೇಳಿದೆ. ಬೈರುತ್‌ನ ದಕ್ಷಿಣಕ್ಕೆ 45 ಕಿಲೋಮೀಟರ್ (28 ಮೈಲುಗಳು) ದಕ್ಷಿಣದ ಸಿಡಾನ್ ನಗರದ ಬಳಿ ಎರಡು ದಾಳಿಗಳಲ್ಲಿ ಕನಿಷ್ಠ 32 ಜನರನ್ನು ಕೊಲ್ಲಲಾಗಿದೆ. ಪ್ರತ್ಯೇಕವಾಗಿ, ಬಾಲ್ಬೆಕ್ ಹರ್ಮೆಲ್ನ ಉತ್ತರ ಪ್ರಾಂತ್ಯದಲ್ಲಿ ಇಸ್ರೇಲಿ ದಾಳಿಗಳು 21 ಜನರನ್ನು ಕೊಂದಿದ್ದು, ಕನಿಷ್ಠ 47 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೈರುತ್‌ನಲ್ಲಿ ದಾಳಿ ಜೊತೆಗೆ, ಮಧ್ಯ, ಪೂರ್ವ ಮತ್ತು ಪಶ್ಚಿಮ ಬೆಕಾ ಮತ್ತು ದಕ್ಷಿಣದಲ್ಲಿ ಡಜನ್‌ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಲೆಬನಾನಿನ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಗಳು ನಾಗರಿಕರು ವಾಸಿಸುತ್ತಿದ್ದ ಕಟ್ಟಡಗಳನ್ನು ಗುರಿಯಾಗಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ಲೇಷಿಸಿವೆ.

ಅಸೋಸಿಯೇಟೆಡ್ ಪ್ರೆಸ್ ಪರಿಶೀಲಿಸಿದ ಸಿಡಾನ್‌ ದಾಳಿ ವೀಡಿಯೊದಲ್ಲಿ, ನಿವಾಸಿಗಳು ವಿಡಿಯೊ ಚಿತ್ರೀಕರಿಸುತ್ತಿದ್ದಂತೆ ಕಟ್ಟಡವು ಕುಸಿಯುವ ಮೊದಲು ಅಲುಗಾಡಿದೆ. ರಕ್ಷಣಾ ಪಡೆ ಕಟ್ಟಡದಲ್ಲಿ ಸಿಲುಕಿರುವವರನ್ನು ತಲುಪಲು ವಿಫಲರಾದ ಕಾರಣ, ಅವಶೇಷಗಳಡಿ ಸಿಲುಕಿರುವ ಕುಟುಂಬಗಳು ಪ್ರಾರ್ಥಿಸುತ್ತಿವೆ. ಆ ದೃಶ್ಯಗಳನ್ನು ದೂರದರ್ಶನವೊಂದು ಪೋಸ್ಟ್ ಮಾಡಿದೆ. ದಕ್ಷಿಣದಲ್ಲಿ ಎರಡು ದಿನಗಳಲ್ಲಿ ಕನಿಷ್ಠ 14 ವೈದ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ ನಾಟಕೀಯ ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ, ಹಿಜ್ಬೊಲ್ಲಾ ಕಳೆದ ವಾರದಲ್ಲಿ ತನ್ನ ದಾಳಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಪ್ರತಿದಿನ ಹಲವಾರು ಡಜನ್‌ಗಳಿಂದ ನೂರಾರು ದಾಳಿಗಳಿಗೆ ಹೆಚ್ಚಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ದಾಳಿಗಳು ಹಲವಾರು ಜನರನ್ನು ಗಾಯಗೊಳಿಸಿದವು ಮತ್ತು ಹಾನಿಯನ್ನುಂಟುಮಾಡಿದವು. ಆದರೆ, ಹೆಚ್ಚಿನ ರಾಕೆಟ್‌ಗಳು ಮತ್ತು ಡ್ರೋನ್‌ಗಳು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಡೆಹಿಡಿಯಲ್ಪಟ್ಟವು ಅಥವಾ ತೆರೆದ ಪ್ರದೇಶಗಳಲ್ಲಿ ಬಿದ್ದವು ಎಂದು ಹೇಳಿದೆ.

ಲೆಬನಾನ್‌: ಮನೆ ತೊರೆದ ಸಾವಿರಾರು ಜನ

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಲೆಬನಾನ್‌ನ ದೊಡ್ಡ ಭಾಗಗಳಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ 1,030 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲಿ 156 ಮಹಿಳೆಯರು ಮತ್ತು 87 ಮಕ್ಕಳು ಸೇರಿದ್ದಾರೆ. ದಾಳಿ ಭಯದಿಂದ ಲಕ್ಷಾಂತರ ಜನ ತಮ್ಮ ಮನೆ ತೊರೆದಿದ್ದಾರೆ. ಸುಮಾರು 250,000 ಜನರು ಪ್ರಭುತ್ವದ ಆಶ್ರಯದಲ್ಲಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚು ಜನರು ಸ್ನೇಹಿತರು ಅಥವಾ ಸಂಬಂಧಿಕರೊಂದಿಗೆ ಇದ್ದಾರೆ. ಕೆಲವರು ಬೀದಿಗಳಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನೇಪಾಳದಲ್ಲಿ ಭಾರಿ ಪ್ರವಾಹ-ಭೂಕುಸಿತ; ಸಾವಿನ ಸಂಖ್ಯೆ 200ಕ್ಕೆ ಏರಿಕೆ, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...