Homeಅಂತರಾಷ್ಟ್ರೀಯಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

- Advertisement -
- Advertisement -

ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಮಧ್ಯ ಬೈರುತ್‌ ನಗರದಲ್ಲಿ ಮೊದಲ ಇಸ್ರೇಲಿ ವೈಮಾನಿಕ ದಾಳಿ ಸೋಮವಾರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡವನ್ನು ನೆಲಸಮಗೊಳಿಸಿದೆ. ಪರಿಣಾಮ, ಕನಿಷ್ಠ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇಸ್ರೇಲ್ ಲೆಬನಾನ್‌ನಾದ್ಯಂತ ಹಲವು ಪ್ರದೇಶಗಳ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಜನರನ್ನು ಕೊಂದು, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಹಿಜ್ಬುಲ್ಲಾ ತನ್ನ ಕಮಾಂಡ್ ರಚನೆಯಲ್ಲಿ ಭಾರೀ ಹೊಡೆತಗಳನ್ನು ಅನುಭವಿಸಿದೆ.

ಘಟನಾ ಸ್ಥಳದಲ್ಲಿದ್ದ ಅಸೋಸಿಯೇಟೆಡ್ ಪ್ರೆಸ್ ಪತ್ರಕರ್ತರ ಪ್ರಕಾರ, “ವೈಮಾನಿಕ ದಾಳಿಯು ಬಹುಮಹಡಿ ವಸತಿ ಕಟ್ಟಡಕ್ಕೆ ಅಪ್ಪಳಿಸಿತು” ಎಂದು ಹೇಳಿದ್ದಾರೆ.

ಪ್ರಮುಖವಾಗಿ ಸುನ್ನಿ ಜಿಲ್ಲೆಯ ಕಟ್ಟಡದ ಬಳಿ ಆಂಬ್ಯುಲೆನ್ಸ್‌ಗಳು ಮತ್ತು ಜನಸಂದಣಿಯು ಜಮಾಯಿಸಿರುವುದನ್ನು ವೀಡಿಯೊಗಳಲ್ಲಿ ಕಾಣಬಹುದು. ಆರಂಭದಲ್ಲಿ ವೈಮಾನಿಕ ದಾಳಿಯು ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿತು. 16 ಮಂದಿ ಗಾಯಗೊಂಡರು ಎಂದು ಲೆಬನಾನಿನ ಸಿವಿಲ್ ಡಿಫೆನ್ಸ್‌ನ ಅಧಿಕಾರಿಯೊಬ್ಬರು ಹೇಳಿದರು.

ಹತ್ಯೆಗೀಡಾದ ವ್ಯಕ್ತಿ ಅಲ್-ಜಮಾ ಅಲ್-ಇಸ್ಲಾಮಿಯಾ ಅಥವಾ ಇಸ್ಲಾಮಿಕ್ ಗ್ರೂಪ್, ಸುನ್ನಿ ರಾಜಕೀಯ ಮತ್ತು ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಜೊತೆ ಮೈತ್ರಿ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದರು. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಪ್ರಸ್ತುತ ಸಂಘರ್ಷದಲ್ಲಿ ಈ ಗುಂಪು ಯಾವುದೇ ಅರ್ಥಪೂರ್ಣ ಪಾತ್ರವನ್ನು ವಹಿಸಿದೆ ಎಂದು ತಿಳಿದಿಲ್ಲ.

ಲೆಬನಾನ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಎಡಪಂಥೀಯ ಬಣವು ತನ್ನ ಮೂವರು ಸದಸ್ಯರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಶನ್ ಆಫ್ ಪ್ಯಾಲೆಸ್ಟೈನ್ ಸೋಮವಾರದ ಮುಂಜಾನೆ ಹೇಳಿಕೆಯಲ್ಲಿ, ಲೆಬನಾನ್‌ನಲ್ಲಿನ ತನ್ನ ಮಿಲಿಟರಿ ಮತ್ತು ಭದ್ರತಾ ಕಮಾಂಡರ್‌ಗಳು ಮೂರನೇ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಕಳೆದ ವಾರದಲ್ಲಿ, ಇಸ್ರೇಲ್ ಆಗಾಗ್ಗೆ ಬೈರುತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡಿದೆ. ಅಲ್ಲಿಹಿಜ್ಬುಲ್ಲಾ ಪ್ರಬಲ ಉಪಸ್ಥಿತಿಯನ್ನು ಹೊಂದಿದೆ. ಶುಕ್ರವಾರದ ಪ್ರಮುಖ ದಾಳಿ ಸೇರಿದಂತೆ ಸಂಘಟನೆ ನಾಯಕ ನಸ್ರಲ್ಲಾನನ್ನು ಕೊಂದಿತು. ಆದರೆ, ನಗರ ಕೇಂದ್ರದ ಸಮೀಪವಿರುವ ಸ್ಥಳಗಳ ಮೇಲೆ ಈವರೆಗೆ ದಾಳಿ ಮಾಡಿರಲಿಲ್ಲ.

ದಾಳಿ ಬಗ್ಗೆ ಇಸ್ರೇಲಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ, ಉಗ್ರಗಾಮಿ ಗುಂಪಿನ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್ ಅವರು ಶನಿವಾರ ಕೊಲ್ಲಲ್ಪಟ್ಟರು ಎಂದು ಹಿಜ್ಬುಲ್ಲಾ ದೃಢಪಡಿಸಿದೆ. ಒಂದು ವಾರದಲ್ಲಿ ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಏಳನೇ ಹಿರಿಯ ಹಿಜ್ಬುಲ್ಲಾ ನಾಯಕನಾಗಿದ್ದಾರೆ. ಅವರು ದಶಕಗಳಿಂದ ಸಾವು ಅಥವಾ ಬಂಧನವನ್ನು ತಪ್ಪಿಸಿಕೊಂಡಿದ್ದ ಸ್ಥಾಪಕ ಸದಸ್ಯರಾಗಿದ್ದರು.

ನಸ್ರಲ್ಲಾನನ್ನು ಕೊಂದ ದಾಳಿಯಲ್ಲಿ ಇನ್ನೊಬ್ಬ ಹಿರಿಯ ಕಮಾಂಡರ್ ಅಲಿ ಕರಾಕಿ ಸಾವನ್ನಪ್ಪಿದ್ದಾನೆ ಎಂದು ಹಿಜ್ಬುಲ್ಲಾ ದೃಢಪಡಿಸಿದರು. ನಸ್ರಲ್ಲಾ ಅವರ ಭದ್ರತಾ ವಿವರಗಳ ಉಸ್ತುವಾರಿ ಸೇರಿದಂತೆ ಕನಿಷ್ಠ 20 ಇತರ ಹಿಜ್ಬುಲ್ಲಾ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿದೆ.

ಭಾನುವಾರದ ವಾಯುದಾಳಿಯಲ್ಲಿ ದೇಶದಾದ್ಯಂತ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ಹೇಳಿದೆ. ಬೈರುತ್‌ನ ದಕ್ಷಿಣಕ್ಕೆ 45 ಕಿಲೋಮೀಟರ್ (28 ಮೈಲುಗಳು) ದಕ್ಷಿಣದ ಸಿಡಾನ್ ನಗರದ ಬಳಿ ಎರಡು ದಾಳಿಗಳಲ್ಲಿ ಕನಿಷ್ಠ 32 ಜನರನ್ನು ಕೊಲ್ಲಲಾಗಿದೆ. ಪ್ರತ್ಯೇಕವಾಗಿ, ಬಾಲ್ಬೆಕ್ ಹರ್ಮೆಲ್ನ ಉತ್ತರ ಪ್ರಾಂತ್ಯದಲ್ಲಿ ಇಸ್ರೇಲಿ ದಾಳಿಗಳು 21 ಜನರನ್ನು ಕೊಂದಿದ್ದು, ಕನಿಷ್ಠ 47 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೈರುತ್‌ನಲ್ಲಿ ದಾಳಿ ಜೊತೆಗೆ, ಮಧ್ಯ, ಪೂರ್ವ ಮತ್ತು ಪಶ್ಚಿಮ ಬೆಕಾ ಮತ್ತು ದಕ್ಷಿಣದಲ್ಲಿ ಡಜನ್‌ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಲೆಬನಾನಿನ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಗಳು ನಾಗರಿಕರು ವಾಸಿಸುತ್ತಿದ್ದ ಕಟ್ಟಡಗಳನ್ನು ಗುರಿಯಾಗಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ಲೇಷಿಸಿವೆ.

ಅಸೋಸಿಯೇಟೆಡ್ ಪ್ರೆಸ್ ಪರಿಶೀಲಿಸಿದ ಸಿಡಾನ್‌ ದಾಳಿ ವೀಡಿಯೊದಲ್ಲಿ, ನಿವಾಸಿಗಳು ವಿಡಿಯೊ ಚಿತ್ರೀಕರಿಸುತ್ತಿದ್ದಂತೆ ಕಟ್ಟಡವು ಕುಸಿಯುವ ಮೊದಲು ಅಲುಗಾಡಿದೆ. ರಕ್ಷಣಾ ಪಡೆ ಕಟ್ಟಡದಲ್ಲಿ ಸಿಲುಕಿರುವವರನ್ನು ತಲುಪಲು ವಿಫಲರಾದ ಕಾರಣ, ಅವಶೇಷಗಳಡಿ ಸಿಲುಕಿರುವ ಕುಟುಂಬಗಳು ಪ್ರಾರ್ಥಿಸುತ್ತಿವೆ. ಆ ದೃಶ್ಯಗಳನ್ನು ದೂರದರ್ಶನವೊಂದು ಪೋಸ್ಟ್ ಮಾಡಿದೆ. ದಕ್ಷಿಣದಲ್ಲಿ ಎರಡು ದಿನಗಳಲ್ಲಿ ಕನಿಷ್ಠ 14 ವೈದ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ ನಾಟಕೀಯ ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ, ಹಿಜ್ಬೊಲ್ಲಾ ಕಳೆದ ವಾರದಲ್ಲಿ ತನ್ನ ದಾಳಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಪ್ರತಿದಿನ ಹಲವಾರು ಡಜನ್‌ಗಳಿಂದ ನೂರಾರು ದಾಳಿಗಳಿಗೆ ಹೆಚ್ಚಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ದಾಳಿಗಳು ಹಲವಾರು ಜನರನ್ನು ಗಾಯಗೊಳಿಸಿದವು ಮತ್ತು ಹಾನಿಯನ್ನುಂಟುಮಾಡಿದವು. ಆದರೆ, ಹೆಚ್ಚಿನ ರಾಕೆಟ್‌ಗಳು ಮತ್ತು ಡ್ರೋನ್‌ಗಳು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಡೆಹಿಡಿಯಲ್ಪಟ್ಟವು ಅಥವಾ ತೆರೆದ ಪ್ರದೇಶಗಳಲ್ಲಿ ಬಿದ್ದವು ಎಂದು ಹೇಳಿದೆ.

ಲೆಬನಾನ್‌: ಮನೆ ತೊರೆದ ಸಾವಿರಾರು ಜನ

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಲೆಬನಾನ್‌ನ ದೊಡ್ಡ ಭಾಗಗಳಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ 1,030 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲಿ 156 ಮಹಿಳೆಯರು ಮತ್ತು 87 ಮಕ್ಕಳು ಸೇರಿದ್ದಾರೆ. ದಾಳಿ ಭಯದಿಂದ ಲಕ್ಷಾಂತರ ಜನ ತಮ್ಮ ಮನೆ ತೊರೆದಿದ್ದಾರೆ. ಸುಮಾರು 250,000 ಜನರು ಪ್ರಭುತ್ವದ ಆಶ್ರಯದಲ್ಲಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚು ಜನರು ಸ್ನೇಹಿತರು ಅಥವಾ ಸಂಬಂಧಿಕರೊಂದಿಗೆ ಇದ್ದಾರೆ. ಕೆಲವರು ಬೀದಿಗಳಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನೇಪಾಳದಲ್ಲಿ ಭಾರಿ ಪ್ರವಾಹ-ಭೂಕುಸಿತ; ಸಾವಿನ ಸಂಖ್ಯೆ 200ಕ್ಕೆ ಏರಿಕೆ, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...