Homeಅಂತರಾಷ್ಟ್ರೀಯಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

- Advertisement -
- Advertisement -

ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಮಧ್ಯ ಬೈರುತ್‌ ನಗರದಲ್ಲಿ ಮೊದಲ ಇಸ್ರೇಲಿ ವೈಮಾನಿಕ ದಾಳಿ ಸೋಮವಾರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡವನ್ನು ನೆಲಸಮಗೊಳಿಸಿದೆ. ಪರಿಣಾಮ, ಕನಿಷ್ಠ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇಸ್ರೇಲ್ ಲೆಬನಾನ್‌ನಾದ್ಯಂತ ಹಲವು ಪ್ರದೇಶಗಳ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಜನರನ್ನು ಕೊಂದು, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಹಿಜ್ಬುಲ್ಲಾ ತನ್ನ ಕಮಾಂಡ್ ರಚನೆಯಲ್ಲಿ ಭಾರೀ ಹೊಡೆತಗಳನ್ನು ಅನುಭವಿಸಿದೆ.

ಘಟನಾ ಸ್ಥಳದಲ್ಲಿದ್ದ ಅಸೋಸಿಯೇಟೆಡ್ ಪ್ರೆಸ್ ಪತ್ರಕರ್ತರ ಪ್ರಕಾರ, “ವೈಮಾನಿಕ ದಾಳಿಯು ಬಹುಮಹಡಿ ವಸತಿ ಕಟ್ಟಡಕ್ಕೆ ಅಪ್ಪಳಿಸಿತು” ಎಂದು ಹೇಳಿದ್ದಾರೆ.

ಪ್ರಮುಖವಾಗಿ ಸುನ್ನಿ ಜಿಲ್ಲೆಯ ಕಟ್ಟಡದ ಬಳಿ ಆಂಬ್ಯುಲೆನ್ಸ್‌ಗಳು ಮತ್ತು ಜನಸಂದಣಿಯು ಜಮಾಯಿಸಿರುವುದನ್ನು ವೀಡಿಯೊಗಳಲ್ಲಿ ಕಾಣಬಹುದು. ಆರಂಭದಲ್ಲಿ ವೈಮಾನಿಕ ದಾಳಿಯು ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿತು. 16 ಮಂದಿ ಗಾಯಗೊಂಡರು ಎಂದು ಲೆಬನಾನಿನ ಸಿವಿಲ್ ಡಿಫೆನ್ಸ್‌ನ ಅಧಿಕಾರಿಯೊಬ್ಬರು ಹೇಳಿದರು.

ಹತ್ಯೆಗೀಡಾದ ವ್ಯಕ್ತಿ ಅಲ್-ಜಮಾ ಅಲ್-ಇಸ್ಲಾಮಿಯಾ ಅಥವಾ ಇಸ್ಲಾಮಿಕ್ ಗ್ರೂಪ್, ಸುನ್ನಿ ರಾಜಕೀಯ ಮತ್ತು ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಜೊತೆ ಮೈತ್ರಿ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದರು. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಪ್ರಸ್ತುತ ಸಂಘರ್ಷದಲ್ಲಿ ಈ ಗುಂಪು ಯಾವುದೇ ಅರ್ಥಪೂರ್ಣ ಪಾತ್ರವನ್ನು ವಹಿಸಿದೆ ಎಂದು ತಿಳಿದಿಲ್ಲ.

ಲೆಬನಾನ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಎಡಪಂಥೀಯ ಬಣವು ತನ್ನ ಮೂವರು ಸದಸ್ಯರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಶನ್ ಆಫ್ ಪ್ಯಾಲೆಸ್ಟೈನ್ ಸೋಮವಾರದ ಮುಂಜಾನೆ ಹೇಳಿಕೆಯಲ್ಲಿ, ಲೆಬನಾನ್‌ನಲ್ಲಿನ ತನ್ನ ಮಿಲಿಟರಿ ಮತ್ತು ಭದ್ರತಾ ಕಮಾಂಡರ್‌ಗಳು ಮೂರನೇ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಕಳೆದ ವಾರದಲ್ಲಿ, ಇಸ್ರೇಲ್ ಆಗಾಗ್ಗೆ ಬೈರುತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡಿದೆ. ಅಲ್ಲಿಹಿಜ್ಬುಲ್ಲಾ ಪ್ರಬಲ ಉಪಸ್ಥಿತಿಯನ್ನು ಹೊಂದಿದೆ. ಶುಕ್ರವಾರದ ಪ್ರಮುಖ ದಾಳಿ ಸೇರಿದಂತೆ ಸಂಘಟನೆ ನಾಯಕ ನಸ್ರಲ್ಲಾನನ್ನು ಕೊಂದಿತು. ಆದರೆ, ನಗರ ಕೇಂದ್ರದ ಸಮೀಪವಿರುವ ಸ್ಥಳಗಳ ಮೇಲೆ ಈವರೆಗೆ ದಾಳಿ ಮಾಡಿರಲಿಲ್ಲ.

ದಾಳಿ ಬಗ್ಗೆ ಇಸ್ರೇಲಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ, ಉಗ್ರಗಾಮಿ ಗುಂಪಿನ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್ ಅವರು ಶನಿವಾರ ಕೊಲ್ಲಲ್ಪಟ್ಟರು ಎಂದು ಹಿಜ್ಬುಲ್ಲಾ ದೃಢಪಡಿಸಿದೆ. ಒಂದು ವಾರದಲ್ಲಿ ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಏಳನೇ ಹಿರಿಯ ಹಿಜ್ಬುಲ್ಲಾ ನಾಯಕನಾಗಿದ್ದಾರೆ. ಅವರು ದಶಕಗಳಿಂದ ಸಾವು ಅಥವಾ ಬಂಧನವನ್ನು ತಪ್ಪಿಸಿಕೊಂಡಿದ್ದ ಸ್ಥಾಪಕ ಸದಸ್ಯರಾಗಿದ್ದರು.

ನಸ್ರಲ್ಲಾನನ್ನು ಕೊಂದ ದಾಳಿಯಲ್ಲಿ ಇನ್ನೊಬ್ಬ ಹಿರಿಯ ಕಮಾಂಡರ್ ಅಲಿ ಕರಾಕಿ ಸಾವನ್ನಪ್ಪಿದ್ದಾನೆ ಎಂದು ಹಿಜ್ಬುಲ್ಲಾ ದೃಢಪಡಿಸಿದರು. ನಸ್ರಲ್ಲಾ ಅವರ ಭದ್ರತಾ ವಿವರಗಳ ಉಸ್ತುವಾರಿ ಸೇರಿದಂತೆ ಕನಿಷ್ಠ 20 ಇತರ ಹಿಜ್ಬುಲ್ಲಾ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿದೆ.

ಭಾನುವಾರದ ವಾಯುದಾಳಿಯಲ್ಲಿ ದೇಶದಾದ್ಯಂತ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ಹೇಳಿದೆ. ಬೈರುತ್‌ನ ದಕ್ಷಿಣಕ್ಕೆ 45 ಕಿಲೋಮೀಟರ್ (28 ಮೈಲುಗಳು) ದಕ್ಷಿಣದ ಸಿಡಾನ್ ನಗರದ ಬಳಿ ಎರಡು ದಾಳಿಗಳಲ್ಲಿ ಕನಿಷ್ಠ 32 ಜನರನ್ನು ಕೊಲ್ಲಲಾಗಿದೆ. ಪ್ರತ್ಯೇಕವಾಗಿ, ಬಾಲ್ಬೆಕ್ ಹರ್ಮೆಲ್ನ ಉತ್ತರ ಪ್ರಾಂತ್ಯದಲ್ಲಿ ಇಸ್ರೇಲಿ ದಾಳಿಗಳು 21 ಜನರನ್ನು ಕೊಂದಿದ್ದು, ಕನಿಷ್ಠ 47 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೈರುತ್‌ನಲ್ಲಿ ದಾಳಿ ಜೊತೆಗೆ, ಮಧ್ಯ, ಪೂರ್ವ ಮತ್ತು ಪಶ್ಚಿಮ ಬೆಕಾ ಮತ್ತು ದಕ್ಷಿಣದಲ್ಲಿ ಡಜನ್‌ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಲೆಬನಾನಿನ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಗಳು ನಾಗರಿಕರು ವಾಸಿಸುತ್ತಿದ್ದ ಕಟ್ಟಡಗಳನ್ನು ಗುರಿಯಾಗಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ಲೇಷಿಸಿವೆ.

ಅಸೋಸಿಯೇಟೆಡ್ ಪ್ರೆಸ್ ಪರಿಶೀಲಿಸಿದ ಸಿಡಾನ್‌ ದಾಳಿ ವೀಡಿಯೊದಲ್ಲಿ, ನಿವಾಸಿಗಳು ವಿಡಿಯೊ ಚಿತ್ರೀಕರಿಸುತ್ತಿದ್ದಂತೆ ಕಟ್ಟಡವು ಕುಸಿಯುವ ಮೊದಲು ಅಲುಗಾಡಿದೆ. ರಕ್ಷಣಾ ಪಡೆ ಕಟ್ಟಡದಲ್ಲಿ ಸಿಲುಕಿರುವವರನ್ನು ತಲುಪಲು ವಿಫಲರಾದ ಕಾರಣ, ಅವಶೇಷಗಳಡಿ ಸಿಲುಕಿರುವ ಕುಟುಂಬಗಳು ಪ್ರಾರ್ಥಿಸುತ್ತಿವೆ. ಆ ದೃಶ್ಯಗಳನ್ನು ದೂರದರ್ಶನವೊಂದು ಪೋಸ್ಟ್ ಮಾಡಿದೆ. ದಕ್ಷಿಣದಲ್ಲಿ ಎರಡು ದಿನಗಳಲ್ಲಿ ಕನಿಷ್ಠ 14 ವೈದ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ ನಾಟಕೀಯ ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ, ಹಿಜ್ಬೊಲ್ಲಾ ಕಳೆದ ವಾರದಲ್ಲಿ ತನ್ನ ದಾಳಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಪ್ರತಿದಿನ ಹಲವಾರು ಡಜನ್‌ಗಳಿಂದ ನೂರಾರು ದಾಳಿಗಳಿಗೆ ಹೆಚ್ಚಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ದಾಳಿಗಳು ಹಲವಾರು ಜನರನ್ನು ಗಾಯಗೊಳಿಸಿದವು ಮತ್ತು ಹಾನಿಯನ್ನುಂಟುಮಾಡಿದವು. ಆದರೆ, ಹೆಚ್ಚಿನ ರಾಕೆಟ್‌ಗಳು ಮತ್ತು ಡ್ರೋನ್‌ಗಳು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಡೆಹಿಡಿಯಲ್ಪಟ್ಟವು ಅಥವಾ ತೆರೆದ ಪ್ರದೇಶಗಳಲ್ಲಿ ಬಿದ್ದವು ಎಂದು ಹೇಳಿದೆ.

ಲೆಬನಾನ್‌: ಮನೆ ತೊರೆದ ಸಾವಿರಾರು ಜನ

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಲೆಬನಾನ್‌ನ ದೊಡ್ಡ ಭಾಗಗಳಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ 1,030 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲಿ 156 ಮಹಿಳೆಯರು ಮತ್ತು 87 ಮಕ್ಕಳು ಸೇರಿದ್ದಾರೆ. ದಾಳಿ ಭಯದಿಂದ ಲಕ್ಷಾಂತರ ಜನ ತಮ್ಮ ಮನೆ ತೊರೆದಿದ್ದಾರೆ. ಸುಮಾರು 250,000 ಜನರು ಪ್ರಭುತ್ವದ ಆಶ್ರಯದಲ್ಲಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚು ಜನರು ಸ್ನೇಹಿತರು ಅಥವಾ ಸಂಬಂಧಿಕರೊಂದಿಗೆ ಇದ್ದಾರೆ. ಕೆಲವರು ಬೀದಿಗಳಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನೇಪಾಳದಲ್ಲಿ ಭಾರಿ ಪ್ರವಾಹ-ಭೂಕುಸಿತ; ಸಾವಿನ ಸಂಖ್ಯೆ 200ಕ್ಕೆ ಏರಿಕೆ, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...