Homeಅಂತರಾಷ್ಟ್ರೀಯಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ದಾಳಿಗೆ ಕನಿಷ್ಠ ನಾಲ್ವರು ಬಲಿ; ನಗರ ಮಿತಿಯೊಳಗೆ ಮೊದಲ ವೈಮಾನಿಕ ಕಾರ್ಯಾಚರಣೆ

- Advertisement -
- Advertisement -

ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಮಧ್ಯ ಬೈರುತ್‌ ನಗರದಲ್ಲಿ ಮೊದಲ ಇಸ್ರೇಲಿ ವೈಮಾನಿಕ ದಾಳಿ ಸೋಮವಾರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡವನ್ನು ನೆಲಸಮಗೊಳಿಸಿದೆ. ಪರಿಣಾಮ, ಕನಿಷ್ಠ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇಸ್ರೇಲ್ ಲೆಬನಾನ್‌ನಾದ್ಯಂತ ಹಲವು ಪ್ರದೇಶಗಳ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಜನರನ್ನು ಕೊಂದು, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಹಿಜ್ಬುಲ್ಲಾ ತನ್ನ ಕಮಾಂಡ್ ರಚನೆಯಲ್ಲಿ ಭಾರೀ ಹೊಡೆತಗಳನ್ನು ಅನುಭವಿಸಿದೆ.

ಘಟನಾ ಸ್ಥಳದಲ್ಲಿದ್ದ ಅಸೋಸಿಯೇಟೆಡ್ ಪ್ರೆಸ್ ಪತ್ರಕರ್ತರ ಪ್ರಕಾರ, “ವೈಮಾನಿಕ ದಾಳಿಯು ಬಹುಮಹಡಿ ವಸತಿ ಕಟ್ಟಡಕ್ಕೆ ಅಪ್ಪಳಿಸಿತು” ಎಂದು ಹೇಳಿದ್ದಾರೆ.

ಪ್ರಮುಖವಾಗಿ ಸುನ್ನಿ ಜಿಲ್ಲೆಯ ಕಟ್ಟಡದ ಬಳಿ ಆಂಬ್ಯುಲೆನ್ಸ್‌ಗಳು ಮತ್ತು ಜನಸಂದಣಿಯು ಜಮಾಯಿಸಿರುವುದನ್ನು ವೀಡಿಯೊಗಳಲ್ಲಿ ಕಾಣಬಹುದು. ಆರಂಭದಲ್ಲಿ ವೈಮಾನಿಕ ದಾಳಿಯು ಕನಿಷ್ಠ ಒಬ್ಬ ವ್ಯಕ್ತಿಯನ್ನು ಕೊಂದಿತು. 16 ಮಂದಿ ಗಾಯಗೊಂಡರು ಎಂದು ಲೆಬನಾನಿನ ಸಿವಿಲ್ ಡಿಫೆನ್ಸ್‌ನ ಅಧಿಕಾರಿಯೊಬ್ಬರು ಹೇಳಿದರು.

ಹತ್ಯೆಗೀಡಾದ ವ್ಯಕ್ತಿ ಅಲ್-ಜಮಾ ಅಲ್-ಇಸ್ಲಾಮಿಯಾ ಅಥವಾ ಇಸ್ಲಾಮಿಕ್ ಗ್ರೂಪ್, ಸುನ್ನಿ ರಾಜಕೀಯ ಮತ್ತು ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಜೊತೆ ಮೈತ್ರಿ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದರು. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಪ್ರಸ್ತುತ ಸಂಘರ್ಷದಲ್ಲಿ ಈ ಗುಂಪು ಯಾವುದೇ ಅರ್ಥಪೂರ್ಣ ಪಾತ್ರವನ್ನು ವಹಿಸಿದೆ ಎಂದು ತಿಳಿದಿಲ್ಲ.

ಲೆಬನಾನ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಎಡಪಂಥೀಯ ಬಣವು ತನ್ನ ಮೂವರು ಸದಸ್ಯರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಶನ್ ಆಫ್ ಪ್ಯಾಲೆಸ್ಟೈನ್ ಸೋಮವಾರದ ಮುಂಜಾನೆ ಹೇಳಿಕೆಯಲ್ಲಿ, ಲೆಬನಾನ್‌ನಲ್ಲಿನ ತನ್ನ ಮಿಲಿಟರಿ ಮತ್ತು ಭದ್ರತಾ ಕಮಾಂಡರ್‌ಗಳು ಮೂರನೇ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಕಳೆದ ವಾರದಲ್ಲಿ, ಇಸ್ರೇಲ್ ಆಗಾಗ್ಗೆ ಬೈರುತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡಿದೆ. ಅಲ್ಲಿಹಿಜ್ಬುಲ್ಲಾ ಪ್ರಬಲ ಉಪಸ್ಥಿತಿಯನ್ನು ಹೊಂದಿದೆ. ಶುಕ್ರವಾರದ ಪ್ರಮುಖ ದಾಳಿ ಸೇರಿದಂತೆ ಸಂಘಟನೆ ನಾಯಕ ನಸ್ರಲ್ಲಾನನ್ನು ಕೊಂದಿತು. ಆದರೆ, ನಗರ ಕೇಂದ್ರದ ಸಮೀಪವಿರುವ ಸ್ಥಳಗಳ ಮೇಲೆ ಈವರೆಗೆ ದಾಳಿ ಮಾಡಿರಲಿಲ್ಲ.

ದಾಳಿ ಬಗ್ಗೆ ಇಸ್ರೇಲಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ, ಉಗ್ರಗಾಮಿ ಗುಂಪಿನ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್ ಅವರು ಶನಿವಾರ ಕೊಲ್ಲಲ್ಪಟ್ಟರು ಎಂದು ಹಿಜ್ಬುಲ್ಲಾ ದೃಢಪಡಿಸಿದೆ. ಒಂದು ವಾರದಲ್ಲಿ ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಏಳನೇ ಹಿರಿಯ ಹಿಜ್ಬುಲ್ಲಾ ನಾಯಕನಾಗಿದ್ದಾರೆ. ಅವರು ದಶಕಗಳಿಂದ ಸಾವು ಅಥವಾ ಬಂಧನವನ್ನು ತಪ್ಪಿಸಿಕೊಂಡಿದ್ದ ಸ್ಥಾಪಕ ಸದಸ್ಯರಾಗಿದ್ದರು.

ನಸ್ರಲ್ಲಾನನ್ನು ಕೊಂದ ದಾಳಿಯಲ್ಲಿ ಇನ್ನೊಬ್ಬ ಹಿರಿಯ ಕಮಾಂಡರ್ ಅಲಿ ಕರಾಕಿ ಸಾವನ್ನಪ್ಪಿದ್ದಾನೆ ಎಂದು ಹಿಜ್ಬುಲ್ಲಾ ದೃಢಪಡಿಸಿದರು. ನಸ್ರಲ್ಲಾ ಅವರ ಭದ್ರತಾ ವಿವರಗಳ ಉಸ್ತುವಾರಿ ಸೇರಿದಂತೆ ಕನಿಷ್ಠ 20 ಇತರ ಹಿಜ್ಬುಲ್ಲಾ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿದೆ.

ಭಾನುವಾರದ ವಾಯುದಾಳಿಯಲ್ಲಿ ದೇಶದಾದ್ಯಂತ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ಹೇಳಿದೆ. ಬೈರುತ್‌ನ ದಕ್ಷಿಣಕ್ಕೆ 45 ಕಿಲೋಮೀಟರ್ (28 ಮೈಲುಗಳು) ದಕ್ಷಿಣದ ಸಿಡಾನ್ ನಗರದ ಬಳಿ ಎರಡು ದಾಳಿಗಳಲ್ಲಿ ಕನಿಷ್ಠ 32 ಜನರನ್ನು ಕೊಲ್ಲಲಾಗಿದೆ. ಪ್ರತ್ಯೇಕವಾಗಿ, ಬಾಲ್ಬೆಕ್ ಹರ್ಮೆಲ್ನ ಉತ್ತರ ಪ್ರಾಂತ್ಯದಲ್ಲಿ ಇಸ್ರೇಲಿ ದಾಳಿಗಳು 21 ಜನರನ್ನು ಕೊಂದಿದ್ದು, ಕನಿಷ್ಠ 47 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೈರುತ್‌ನಲ್ಲಿ ದಾಳಿ ಜೊತೆಗೆ, ಮಧ್ಯ, ಪೂರ್ವ ಮತ್ತು ಪಶ್ಚಿಮ ಬೆಕಾ ಮತ್ತು ದಕ್ಷಿಣದಲ್ಲಿ ಡಜನ್‌ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಲೆಬನಾನಿನ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಗಳು ನಾಗರಿಕರು ವಾಸಿಸುತ್ತಿದ್ದ ಕಟ್ಟಡಗಳನ್ನು ಗುರಿಯಾಗಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ಲೇಷಿಸಿವೆ.

ಅಸೋಸಿಯೇಟೆಡ್ ಪ್ರೆಸ್ ಪರಿಶೀಲಿಸಿದ ಸಿಡಾನ್‌ ದಾಳಿ ವೀಡಿಯೊದಲ್ಲಿ, ನಿವಾಸಿಗಳು ವಿಡಿಯೊ ಚಿತ್ರೀಕರಿಸುತ್ತಿದ್ದಂತೆ ಕಟ್ಟಡವು ಕುಸಿಯುವ ಮೊದಲು ಅಲುಗಾಡಿದೆ. ರಕ್ಷಣಾ ಪಡೆ ಕಟ್ಟಡದಲ್ಲಿ ಸಿಲುಕಿರುವವರನ್ನು ತಲುಪಲು ವಿಫಲರಾದ ಕಾರಣ, ಅವಶೇಷಗಳಡಿ ಸಿಲುಕಿರುವ ಕುಟುಂಬಗಳು ಪ್ರಾರ್ಥಿಸುತ್ತಿವೆ. ಆ ದೃಶ್ಯಗಳನ್ನು ದೂರದರ್ಶನವೊಂದು ಪೋಸ್ಟ್ ಮಾಡಿದೆ. ದಕ್ಷಿಣದಲ್ಲಿ ಎರಡು ದಿನಗಳಲ್ಲಿ ಕನಿಷ್ಠ 14 ವೈದ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ ನಾಟಕೀಯ ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ, ಹಿಜ್ಬೊಲ್ಲಾ ಕಳೆದ ವಾರದಲ್ಲಿ ತನ್ನ ದಾಳಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಪ್ರತಿದಿನ ಹಲವಾರು ಡಜನ್‌ಗಳಿಂದ ನೂರಾರು ದಾಳಿಗಳಿಗೆ ಹೆಚ್ಚಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ದಾಳಿಗಳು ಹಲವಾರು ಜನರನ್ನು ಗಾಯಗೊಳಿಸಿದವು ಮತ್ತು ಹಾನಿಯನ್ನುಂಟುಮಾಡಿದವು. ಆದರೆ, ಹೆಚ್ಚಿನ ರಾಕೆಟ್‌ಗಳು ಮತ್ತು ಡ್ರೋನ್‌ಗಳು ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಡೆಹಿಡಿಯಲ್ಪಟ್ಟವು ಅಥವಾ ತೆರೆದ ಪ್ರದೇಶಗಳಲ್ಲಿ ಬಿದ್ದವು ಎಂದು ಹೇಳಿದೆ.

ಲೆಬನಾನ್‌: ಮನೆ ತೊರೆದ ಸಾವಿರಾರು ಜನ

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಲೆಬನಾನ್‌ನ ದೊಡ್ಡ ಭಾಗಗಳಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ 1,030 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲಿ 156 ಮಹಿಳೆಯರು ಮತ್ತು 87 ಮಕ್ಕಳು ಸೇರಿದ್ದಾರೆ. ದಾಳಿ ಭಯದಿಂದ ಲಕ್ಷಾಂತರ ಜನ ತಮ್ಮ ಮನೆ ತೊರೆದಿದ್ದಾರೆ. ಸುಮಾರು 250,000 ಜನರು ಪ್ರಭುತ್ವದ ಆಶ್ರಯದಲ್ಲಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚು ಜನರು ಸ್ನೇಹಿತರು ಅಥವಾ ಸಂಬಂಧಿಕರೊಂದಿಗೆ ಇದ್ದಾರೆ. ಕೆಲವರು ಬೀದಿಗಳಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನೇಪಾಳದಲ್ಲಿ ಭಾರಿ ಪ್ರವಾಹ-ಭೂಕುಸಿತ; ಸಾವಿನ ಸಂಖ್ಯೆ 200ಕ್ಕೆ ಏರಿಕೆ, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...