Homeಕರ್ನಾಟಕ2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ

- Advertisement -
- Advertisement -

ವೇಗವಾಗಿ ಬೆಳೆಯುತ್ತಿರುವ ಜಾಗತಿಕ ನಗರವೆಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರಿನಲ್ಲಿ 2020 ರಿಂದ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ವರದಿ ಬಹಿರಂಗ ಪಡಿಸಿದೆ. ಈ ವರ್ಷ 2022ರ ಜನವರಿಯಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ 51 ಬಾಲ್ಯವಿವಾಹ ದೂರುಗಳು ಬಂದಿದ್ದು, ಅವುಗಳಲ್ಲಿ 42 ಮಾತ್ರ ತಡೆಯಲು ಸಾಧ್ಯವಾಯಿತು ಎಂದು ವರದಿ ಹೇಳಿದೆ.

ಈ ಅವಧಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ನಡೆಸುವ ಮದುವೆಯ ಯತ್ನಗಳಲ್ಲಿ ಕನಿಷ್ಠ 84% ರಷ್ಟು ಮದುವೆಗಳನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಪ್ರತಿ ತಿಂಗಳು ಒಂದಕ್ಕಿಂತ ಹೆಚ್ಚು ಬಾಲ್ಯ ವಿವಾಹಗಳು ಅಕ್ರಮವಾಗಿ ನಡೆಯುತ್ತಿವೆ ಎಂದು ಅಂಕಿಅಂಶಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಿಂದ ಆಗಸ್ಟ್ 2022 ರ ನಡುವೆ ಬೆಂಗಳೂರಿನಲ್ಲಿ ಒಟ್ಟು 47 ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳು ಹೇಳಿವೆ. 2.5 ವರ್ಷಗಳ ಈ ಅವಧಿಯಲ್ಲಿ ಒಟ್ಟು 279 ದೂರುಗಳು ಬಂದಿದ್ದು, 232 ಮದುವೆಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ ಎಂದು ವರದಿಯೊಂದು ತಿಳಿಸಿದೆ. ಕೊರೊನಾ ಸಾಂಕ್ರಾಮಿಕದ ವೇಳೆ ಉಂಟಾದ ಉದ್ಯೋಗ ನಷ್ಟ ಮತ್ತು ಆರ್ಥಿಕ ಅಸಮಾನತೆಗಳ ವಿಸ್ತರಣೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

“ಉದ್ಯೋಗ ನಷ್ಟ, ಆನ್‌ಲೈನ್ ತರಗತಿಗಳು ಮತ್ತು ಕೊರೊನಾದಿಂದ ಮಕ್ಕಳು ಒಬ್ಬರು ಅಥವಾ ಇಬ್ಬರ ಪೋಷಕರನ್ನು ಕಳೆದುಕೊಳ್ಳುವುದು ಬಾಲ್ಯ ವಿವಾಹದ ಉಲ್ಬಣಕ್ಕೆ ನೀಡಬಹುದಾದ ಕೆಲವು ಕಾರಣಗಳಾಗಿವೆ” ಎಂದು ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾದ ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಬೃಂದಾ ಅಡಿಗ ಹೇಳುತ್ತಾರೆ.

“ಶಾಲೆಗಳು ಆನ್‌ಲೈನ್ ತರಗತಿಗಳ ಮೋಡ್‌ಗೆ ಬದಲಾಯಿಸಿದವು, ಆದರೆ ಪೋಷಕರು ತಮ್ಮ ಕೆಲಸವನ್ನು ಕಳೆದುಕೊಂಡರು. ಅನೇಕರು ತಮ್ಮ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಮಗುವಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು, ಕುಟುಂಬವನ್ನು ಸಾಕಲು ಕೆಲಸವನ್ನು ಹುಡುಕುತ್ತಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ 15 ಕೋಟಿಗೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

“ಶಾಲೆಗಳು ಪ್ರಾರಂಭವಾದ ನಂತರ, ಆನ್‌ಲೈನ್ ತರಗತಿಗಳು ಮತ್ತು ಪರೀಕ್ಷೆಗಳನ್ನು ತಪ್ಪಿಸಿದವರು ಅಂತರವನ್ನು ಸರಿದೂಗಿಸಲು ಸಾಧ್ಯವಾಗಲಿಲ್ಲ. ಜೊತೆಗೆ ಅವರು ಗಳಿಗೆ ಪ್ರಾರಂಭಿಸಿರುವುದರಿಂದ, ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಕೆಲಸವನ್ನು ಮುಂದುವರಿಸಲು ನಿರ್ಧರಿಸಿದರು. ಈ ಸಮಯದಲ್ಲಿ ಹುಡುಗಿಯರ ಕೆಲಸದ ವಿಚಾರದಲ್ಲಿ ಪೋಷಕರು ಸುರಕ್ಷತೆಯ ಬಗ್ಗೆ ಚಿಂತಿಸುವಂತೆ ಮಾಡುತ್ತದೆ. ಹುಡುಗಿಯರು ಮನೆಯಲ್ಲಿಯೇ ಇರಲು ನಿರ್ಧರಿಸಿದರೆ, ಅದು ಅವರಿಗೆ ಮತ್ತೊಂದು ಹೊರೆಯಾಗಿತ್ತು. ಜೊತೆಗೆ ಹುಡುಗಿಯರನ್ನು ಪೋಷಕರು ಹೊಣೆಗಾರಿಕೆ ಎಂದು ಪರಿಗಣಿಸಿ, ಅವರಿಗೆ ಮದುವೆ ಮಾಡಲು ನಿರ್ಧರಿಸುತ್ತಾರೆ. ಮದುವೆ ಎಂಬುವುದು ಹೆಣ್ಣುಮಕ್ಕಳ ಸ್ಥಿರವಾದ ಭವಿಷ್ಯಕ್ಕೆ ಸಮನಾಗಿರುತ್ತದೆ ಎಂದು ಅವರು ಭಾವಿಸುತ್ತಾರೆ” ಎಂದು ಬೃಂದಾ ಅಭಿಪ್ರಾಯಪಡುತ್ತಾರೆ.

ಕೊರೊನಾ ಪರಿಣಾಮ

ಕೊರೊನಾ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ಮದುವೆಗಳಿಗೆ ಕಡಿಮೆ ಜನರು ಭಾಗವಹಿಸುವುದರಿಂದ ಮತ್ತು ಕಡಿಮೆ ವೆಚ್ಚದಲ್ಲಿ ಸರಳವಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಬೇಗನೆ ಮದುವೆ ಮಾಡುತ್ತಿದ್ದರು.

ಬಾಲ್ಯ ವಿವಾಹದ ಬಗ್ಗೆ ಮದುವೆಯಾಗುವ ಮಗುವಿನ ಸ್ನೇಹಿತರು, ನೆರೆಹೊರೆಯವರು, ಶಾಲಾ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅಧಿಕಾರಿಗಳಿಗೆ ಸುಳಿವು ನೀಡುತ್ತಾರೆ. ಆದರೆ, ಸಾಂಕ್ರಾಮಿಕ ಸಮಯದಲ್ಲಿ, ಶಾಲೆಗಳು ಮತ್ತು ಅಂಗನವಾಡಿಗಳು ಮುಚ್ಚಲ್ಪಟ್ಟಿದ್ದರಿಂದ ಮತ್ತು ಜನರು ಮನೆಯೊಳಗೆ ಇರಬೇಕಾಗಿದ್ದರಿಂದ ಮಾಹಿತಿ ಪಡೆಯುವಲ್ಲಿ ಕೊರತೆಯುಂಟಾಗಿತ್ತು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮದುವೆ ನಡೆಯುವುದರಿಂದ ಬಹುತೇಕ ಮದುವೆಗಳು ನೋಂದಣಿಯಾಗದೇ ಇರುವುದರಿಂದ ಇತರೆ ಧರ್ಮಗಳಿಗೆ ಹೋಲಿಸಿದರೆ ಹಿಂದೂ ಕುಟುಂಬಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿವೆ ಬೃಂದಾ ಅಭಿಪ್ರಾಯಪಡುತ್ತಾರೆ. ಸಮಾರಂಭವನ್ನು ನಡೆಸುವ ಪುರೋಹಿತರು ಸಹ ಬಾಲ್ಯವಿವಾಹ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ತಿಳಿಸುವುದಿಲ್ಲ ಅಥವಾ ಅವರು ಮದುವೆ ಮಾಡಿಸಲು ನಿರಾಕರಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

ಬಾಲ್ಯವಿವಾಹ ನಡೆದಿರುವ ಅಥವಾ ನಡೆಯಲಿರುವ ಬಗ್ಗೆ ಮಾಹಿತಿ ದೊರೆತಾಗ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಬೇಕು. ಆದರೆ, ಸುದೀರ್ಘ ನ್ಯಾಯಾಲಯದ ಕಾರ್ಯವಿಧಾನವನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಮತ್ತು ಮಕ್ಕಳ ರಕ್ಷಣಾಧಿಕಾರಿಗಳು ಈ ಕ್ರಮವನ್ನು ತಪ್ಪಿಸುತ್ತಿದ್ದಾರೆ ಎಂಬುವುದು ಬೃಂದಾ ಅವರ ಅಭಿಪ್ರಾಯವಾಗಿದೆ.

ಅಂಕಿಅಂಶಗಳ ಪ್ರಕಾರ, 2020 ರಿಂದ 2022ರ ಆಗಸ್ಟ್‌ ವರೆಗೆ ಕೇವಲ 44 ಎಫ್‌ಐಆರ್‌ಗಳನ್ನು ಮಾತ್ರ ದಾಖಲಿಸಲಾಗಿದೆ. “ಪ್ರಕರಣವನ್ನು ನ್ಯಾಯಾಲಯದ ಮುಂದೆ ತರಲು ಸುಮಾರು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪೊಲೀಸ್ ಮತ್ತು ಮಕ್ಕಳ ರಕ್ಷಣಾ ಘಟಕವು ಅದನ್ನು ಎದುರಿಸಲು ಬಯಸುವುದಿಲ್ಲವಾದ್ದರಿಂದ ಅದನ್ನು ತಪ್ಪಿಸಲು ಪ್ರಯತ್ನಿಸುತ್ತದೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ಸಾಮಾಜಿಕ ತನಿಖೆಗಳನ್ನು ಮಾಡುವ ತರಬೇತಿ ಪಡೆದಿಲ್ಲ ಅಥವಾ ಸಜ್ಜುಗೊಂಡಿರುವುದಿಲ್ಲ ಜೊತೆಗೆ, ಅದನ್ನು ಆದ್ಯತೆಯಾಗಿ ಪರಿಗಣಿಸಲಾಗುವುದಿಲ್ಲ” ಎಂದು ಬೃಂದಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬಾಲ್ಯ ವಿವಾಹ ತಡೆಗೆ ಸಹಾಯ ಮಾಡುವುದಿಲ್ಲ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕವು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯಿದೆ, 2016 ಅನ್ನು ಏಪ್ರಿಲ್ 2017 ರಲ್ಲಿ ತಂದಿತು ಮತ್ತು ಎಲ್ಲಾ ಅಪ್ರಾಪ್ತ ವಯಸ್ಸಿನ ವಿವಾಹಗಳನ್ನು ಅನೂರ್ಜಿತಗೊಳಿಸಿತು, ಅಂದರೆ ಅಂತಹ ವಿವಾಹಗಳು ಯಾವುದೇ ಪಕ್ಷಗಳಿಂದ ಯಾವುದೇ ಸಮಯದಲ್ಲಿ ರದ್ದುಗೊಳಿಸಲಾಗಿದೆ.

“ಸರ್ಕಾರವು ವಯೋಮಿತಿಯನ್ನು 21 ಕ್ಕೆ ಏರಿಸಿದರೂ ಹೆಣ್ಣು ಮಗುವಿನ ವಿವಾಹಕ್ಕೆ ಕಾರಣವಾಗುವ ಸಮಸ್ಯೆಗಳನ್ನು ಪರಿಹರಿಸಲು ಅವರು ಸಿದ್ಧರಿಲ್ಲದಿದ್ದರೆ, ಮದುವೆಗಳು ನಡೆಯುತ್ತಲೇ ಇರುತ್ತವೆ” ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತೆ, ಬೆಂಗಳೂರು ಮೂಲದ ಎನ್‌ಜಿಒ ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (CWC) ಕವಿತಾ ರತ್ನ ಹೇಳುತ್ತಾರೆ.

ವರದಿಯೊಂದರ ಪ್ರಕಾರ, “ಬಾಲ್ಯ ವಿವಾಹ ಮತ್ತು ಬಾಲ್ಯವಿವಾಹಕ್ಕೆ ಎರಡು ಪ್ರಮುಖ ಕಾರಣಗಳಿದ್ದು, ಹೆಣ್ಣುಮಕ್ಕಳಿಗೆ ಅಧ್ಯಯನ ಮಾಡಲು ಸೀಮಿತ ಅವಕಾಶಗಳು ಮತ್ತು ತನ್ನ ಆಯ್ಕೆಯ ಸಂಬಂಧಗಳನ್ನು ಬೆಳೆಸಿಕೊಳ್ಳುತ್ತಾರೆ ಎಂಬ ಹುಡುಗಿಯರ ಕುಟುಂಬಗಳಲ್ಲಿ ಭಯವಾಗಿದೆ. ಎರಡೂ ಕಾರಣಗಳು ಕೂಡಾ ಕುಟುಂಬ ಮತ್ತು ಸಮಾಜದಲ್ಲಿ ಹೆಣ್ಣುಮಕ್ಕಳ ಆಕಾಂಕ್ಷೆಗಳಿಗೆ ನೀಡಿದ ಕಡಿಮೆ ಮೌಲ್ಯವನ್ನು ಒತ್ತಿಹೇಳುತ್ತದೆ..

ಇದನ್ನೂ ಓದಿ: ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ರಚಿಸಲ್ಪಡುವ ಕಾನೂನು ಸಮುದಾಯದ ನಿಯಮಗಳಿಗೆ ವಿರುದ್ಧವಾಗಿ ಇದ್ದರೆ, ಬಾಲ್ಯವಿವಾಹವನ್ನು ಅದು ಕಡಿಮೆ ಮಾಡುವಲ್ಲಿ ಯಾವುದೆ ಪರಿಣಾಮ ಬೀರುವುದಿಲ್ಲ. ಜೊತೆಗೆ ವಾಸ್ತವವಾಗಿ ಸಾಮಾಜಿಕ ರೂಢಿಗಳನ್ನು ಉಳಿಸಿಕೊಳ್ಳಲು ಸಮುದಾಯಗಳು ಕಾನೂನನ್ನು ಬಳಸುವ ಮಾರ್ಗಗಳನ್ನು ಕಂಡುಕೊಂಡಾಗ ಮಾತ್ರ ಅದನ್ನು ಅನ್ವಯಿಸಲಾಗುತ್ತದೆ ಎಂದು ಅಧ್ಯಯನವು ಹೇಳಿದೆ.

ಬಡತನ, ಮದುವೆಯ ಕೇಂದ್ರೀಯತೆಯ ಸುತ್ತಲಿನ ರೂಢಿಗಳು, ಪಿತೃಪ್ರಭುತ್ವ ಮತ್ತು ಹುಡುಗಿಯರ ಲೈಂಗಿಕತೆಯ ಮೇಲಿನ ನಿಯಂತ್ರಣ ಬಾಲ್ಯ ವಿವಾಹದ ಮೂಲ ಕಾರಣಗಳಾಗವೆ. ಹೀಗಾಗಿ ಮದುವೆಯ ವಯಸ್ಸನ್ನು ಬದಲಾಯಿಸುವ ಕಾನೂನು ಈ ಎಲ್ಲಾ ಕಾರಣಗಳನ್ನು ಪರಿಹರಿಸುವುದಿಲ್ಲ ಎಂದು ಅಧ್ಯಯನ ಹೇಳುತ್ತದೆ.

ಕೃಪೆ: ಸಚಿ, ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...