Homeಕರ್ನಾಟಕ2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ

- Advertisement -
- Advertisement -

ವೇಗವಾಗಿ ಬೆಳೆಯುತ್ತಿರುವ ಜಾಗತಿಕ ನಗರವೆಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರಿನಲ್ಲಿ 2020 ರಿಂದ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ವರದಿ ಬಹಿರಂಗ ಪಡಿಸಿದೆ. ಈ ವರ್ಷ 2022ರ ಜನವರಿಯಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ 51 ಬಾಲ್ಯವಿವಾಹ ದೂರುಗಳು ಬಂದಿದ್ದು, ಅವುಗಳಲ್ಲಿ 42 ಮಾತ್ರ ತಡೆಯಲು ಸಾಧ್ಯವಾಯಿತು ಎಂದು ವರದಿ ಹೇಳಿದೆ.

ಈ ಅವಧಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ನಡೆಸುವ ಮದುವೆಯ ಯತ್ನಗಳಲ್ಲಿ ಕನಿಷ್ಠ 84% ರಷ್ಟು ಮದುವೆಗಳನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಪ್ರತಿ ತಿಂಗಳು ಒಂದಕ್ಕಿಂತ ಹೆಚ್ಚು ಬಾಲ್ಯ ವಿವಾಹಗಳು ಅಕ್ರಮವಾಗಿ ನಡೆಯುತ್ತಿವೆ ಎಂದು ಅಂಕಿಅಂಶಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಿಂದ ಆಗಸ್ಟ್ 2022 ರ ನಡುವೆ ಬೆಂಗಳೂರಿನಲ್ಲಿ ಒಟ್ಟು 47 ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳು ಹೇಳಿವೆ. 2.5 ವರ್ಷಗಳ ಈ ಅವಧಿಯಲ್ಲಿ ಒಟ್ಟು 279 ದೂರುಗಳು ಬಂದಿದ್ದು, 232 ಮದುವೆಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ ಎಂದು ವರದಿಯೊಂದು ತಿಳಿಸಿದೆ. ಕೊರೊನಾ ಸಾಂಕ್ರಾಮಿಕದ ವೇಳೆ ಉಂಟಾದ ಉದ್ಯೋಗ ನಷ್ಟ ಮತ್ತು ಆರ್ಥಿಕ ಅಸಮಾನತೆಗಳ ವಿಸ್ತರಣೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

“ಉದ್ಯೋಗ ನಷ್ಟ, ಆನ್‌ಲೈನ್ ತರಗತಿಗಳು ಮತ್ತು ಕೊರೊನಾದಿಂದ ಮಕ್ಕಳು ಒಬ್ಬರು ಅಥವಾ ಇಬ್ಬರ ಪೋಷಕರನ್ನು ಕಳೆದುಕೊಳ್ಳುವುದು ಬಾಲ್ಯ ವಿವಾಹದ ಉಲ್ಬಣಕ್ಕೆ ನೀಡಬಹುದಾದ ಕೆಲವು ಕಾರಣಗಳಾಗಿವೆ” ಎಂದು ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾದ ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಬೃಂದಾ ಅಡಿಗ ಹೇಳುತ್ತಾರೆ.

“ಶಾಲೆಗಳು ಆನ್‌ಲೈನ್ ತರಗತಿಗಳ ಮೋಡ್‌ಗೆ ಬದಲಾಯಿಸಿದವು, ಆದರೆ ಪೋಷಕರು ತಮ್ಮ ಕೆಲಸವನ್ನು ಕಳೆದುಕೊಂಡರು. ಅನೇಕರು ತಮ್ಮ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಮಗುವಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು, ಕುಟುಂಬವನ್ನು ಸಾಕಲು ಕೆಲಸವನ್ನು ಹುಡುಕುತ್ತಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ 15 ಕೋಟಿಗೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

“ಶಾಲೆಗಳು ಪ್ರಾರಂಭವಾದ ನಂತರ, ಆನ್‌ಲೈನ್ ತರಗತಿಗಳು ಮತ್ತು ಪರೀಕ್ಷೆಗಳನ್ನು ತಪ್ಪಿಸಿದವರು ಅಂತರವನ್ನು ಸರಿದೂಗಿಸಲು ಸಾಧ್ಯವಾಗಲಿಲ್ಲ. ಜೊತೆಗೆ ಅವರು ಗಳಿಗೆ ಪ್ರಾರಂಭಿಸಿರುವುದರಿಂದ, ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಕೆಲಸವನ್ನು ಮುಂದುವರಿಸಲು ನಿರ್ಧರಿಸಿದರು. ಈ ಸಮಯದಲ್ಲಿ ಹುಡುಗಿಯರ ಕೆಲಸದ ವಿಚಾರದಲ್ಲಿ ಪೋಷಕರು ಸುರಕ್ಷತೆಯ ಬಗ್ಗೆ ಚಿಂತಿಸುವಂತೆ ಮಾಡುತ್ತದೆ. ಹುಡುಗಿಯರು ಮನೆಯಲ್ಲಿಯೇ ಇರಲು ನಿರ್ಧರಿಸಿದರೆ, ಅದು ಅವರಿಗೆ ಮತ್ತೊಂದು ಹೊರೆಯಾಗಿತ್ತು. ಜೊತೆಗೆ ಹುಡುಗಿಯರನ್ನು ಪೋಷಕರು ಹೊಣೆಗಾರಿಕೆ ಎಂದು ಪರಿಗಣಿಸಿ, ಅವರಿಗೆ ಮದುವೆ ಮಾಡಲು ನಿರ್ಧರಿಸುತ್ತಾರೆ. ಮದುವೆ ಎಂಬುವುದು ಹೆಣ್ಣುಮಕ್ಕಳ ಸ್ಥಿರವಾದ ಭವಿಷ್ಯಕ್ಕೆ ಸಮನಾಗಿರುತ್ತದೆ ಎಂದು ಅವರು ಭಾವಿಸುತ್ತಾರೆ” ಎಂದು ಬೃಂದಾ ಅಭಿಪ್ರಾಯಪಡುತ್ತಾರೆ.

ಕೊರೊನಾ ಪರಿಣಾಮ

ಕೊರೊನಾ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ಮದುವೆಗಳಿಗೆ ಕಡಿಮೆ ಜನರು ಭಾಗವಹಿಸುವುದರಿಂದ ಮತ್ತು ಕಡಿಮೆ ವೆಚ್ಚದಲ್ಲಿ ಸರಳವಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಬೇಗನೆ ಮದುವೆ ಮಾಡುತ್ತಿದ್ದರು.

ಬಾಲ್ಯ ವಿವಾಹದ ಬಗ್ಗೆ ಮದುವೆಯಾಗುವ ಮಗುವಿನ ಸ್ನೇಹಿತರು, ನೆರೆಹೊರೆಯವರು, ಶಾಲಾ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅಧಿಕಾರಿಗಳಿಗೆ ಸುಳಿವು ನೀಡುತ್ತಾರೆ. ಆದರೆ, ಸಾಂಕ್ರಾಮಿಕ ಸಮಯದಲ್ಲಿ, ಶಾಲೆಗಳು ಮತ್ತು ಅಂಗನವಾಡಿಗಳು ಮುಚ್ಚಲ್ಪಟ್ಟಿದ್ದರಿಂದ ಮತ್ತು ಜನರು ಮನೆಯೊಳಗೆ ಇರಬೇಕಾಗಿದ್ದರಿಂದ ಮಾಹಿತಿ ಪಡೆಯುವಲ್ಲಿ ಕೊರತೆಯುಂಟಾಗಿತ್ತು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮದುವೆ ನಡೆಯುವುದರಿಂದ ಬಹುತೇಕ ಮದುವೆಗಳು ನೋಂದಣಿಯಾಗದೇ ಇರುವುದರಿಂದ ಇತರೆ ಧರ್ಮಗಳಿಗೆ ಹೋಲಿಸಿದರೆ ಹಿಂದೂ ಕುಟುಂಬಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿವೆ ಬೃಂದಾ ಅಭಿಪ್ರಾಯಪಡುತ್ತಾರೆ. ಸಮಾರಂಭವನ್ನು ನಡೆಸುವ ಪುರೋಹಿತರು ಸಹ ಬಾಲ್ಯವಿವಾಹ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ತಿಳಿಸುವುದಿಲ್ಲ ಅಥವಾ ಅವರು ಮದುವೆ ಮಾಡಿಸಲು ನಿರಾಕರಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

ಬಾಲ್ಯವಿವಾಹ ನಡೆದಿರುವ ಅಥವಾ ನಡೆಯಲಿರುವ ಬಗ್ಗೆ ಮಾಹಿತಿ ದೊರೆತಾಗ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಬೇಕು. ಆದರೆ, ಸುದೀರ್ಘ ನ್ಯಾಯಾಲಯದ ಕಾರ್ಯವಿಧಾನವನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಮತ್ತು ಮಕ್ಕಳ ರಕ್ಷಣಾಧಿಕಾರಿಗಳು ಈ ಕ್ರಮವನ್ನು ತಪ್ಪಿಸುತ್ತಿದ್ದಾರೆ ಎಂಬುವುದು ಬೃಂದಾ ಅವರ ಅಭಿಪ್ರಾಯವಾಗಿದೆ.

ಅಂಕಿಅಂಶಗಳ ಪ್ರಕಾರ, 2020 ರಿಂದ 2022ರ ಆಗಸ್ಟ್‌ ವರೆಗೆ ಕೇವಲ 44 ಎಫ್‌ಐಆರ್‌ಗಳನ್ನು ಮಾತ್ರ ದಾಖಲಿಸಲಾಗಿದೆ. “ಪ್ರಕರಣವನ್ನು ನ್ಯಾಯಾಲಯದ ಮುಂದೆ ತರಲು ಸುಮಾರು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪೊಲೀಸ್ ಮತ್ತು ಮಕ್ಕಳ ರಕ್ಷಣಾ ಘಟಕವು ಅದನ್ನು ಎದುರಿಸಲು ಬಯಸುವುದಿಲ್ಲವಾದ್ದರಿಂದ ಅದನ್ನು ತಪ್ಪಿಸಲು ಪ್ರಯತ್ನಿಸುತ್ತದೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ಸಾಮಾಜಿಕ ತನಿಖೆಗಳನ್ನು ಮಾಡುವ ತರಬೇತಿ ಪಡೆದಿಲ್ಲ ಅಥವಾ ಸಜ್ಜುಗೊಂಡಿರುವುದಿಲ್ಲ ಜೊತೆಗೆ, ಅದನ್ನು ಆದ್ಯತೆಯಾಗಿ ಪರಿಗಣಿಸಲಾಗುವುದಿಲ್ಲ” ಎಂದು ಬೃಂದಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬಾಲ್ಯ ವಿವಾಹ ತಡೆಗೆ ಸಹಾಯ ಮಾಡುವುದಿಲ್ಲ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕವು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯಿದೆ, 2016 ಅನ್ನು ಏಪ್ರಿಲ್ 2017 ರಲ್ಲಿ ತಂದಿತು ಮತ್ತು ಎಲ್ಲಾ ಅಪ್ರಾಪ್ತ ವಯಸ್ಸಿನ ವಿವಾಹಗಳನ್ನು ಅನೂರ್ಜಿತಗೊಳಿಸಿತು, ಅಂದರೆ ಅಂತಹ ವಿವಾಹಗಳು ಯಾವುದೇ ಪಕ್ಷಗಳಿಂದ ಯಾವುದೇ ಸಮಯದಲ್ಲಿ ರದ್ದುಗೊಳಿಸಲಾಗಿದೆ.

“ಸರ್ಕಾರವು ವಯೋಮಿತಿಯನ್ನು 21 ಕ್ಕೆ ಏರಿಸಿದರೂ ಹೆಣ್ಣು ಮಗುವಿನ ವಿವಾಹಕ್ಕೆ ಕಾರಣವಾಗುವ ಸಮಸ್ಯೆಗಳನ್ನು ಪರಿಹರಿಸಲು ಅವರು ಸಿದ್ಧರಿಲ್ಲದಿದ್ದರೆ, ಮದುವೆಗಳು ನಡೆಯುತ್ತಲೇ ಇರುತ್ತವೆ” ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತೆ, ಬೆಂಗಳೂರು ಮೂಲದ ಎನ್‌ಜಿಒ ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (CWC) ಕವಿತಾ ರತ್ನ ಹೇಳುತ್ತಾರೆ.

ವರದಿಯೊಂದರ ಪ್ರಕಾರ, “ಬಾಲ್ಯ ವಿವಾಹ ಮತ್ತು ಬಾಲ್ಯವಿವಾಹಕ್ಕೆ ಎರಡು ಪ್ರಮುಖ ಕಾರಣಗಳಿದ್ದು, ಹೆಣ್ಣುಮಕ್ಕಳಿಗೆ ಅಧ್ಯಯನ ಮಾಡಲು ಸೀಮಿತ ಅವಕಾಶಗಳು ಮತ್ತು ತನ್ನ ಆಯ್ಕೆಯ ಸಂಬಂಧಗಳನ್ನು ಬೆಳೆಸಿಕೊಳ್ಳುತ್ತಾರೆ ಎಂಬ ಹುಡುಗಿಯರ ಕುಟುಂಬಗಳಲ್ಲಿ ಭಯವಾಗಿದೆ. ಎರಡೂ ಕಾರಣಗಳು ಕೂಡಾ ಕುಟುಂಬ ಮತ್ತು ಸಮಾಜದಲ್ಲಿ ಹೆಣ್ಣುಮಕ್ಕಳ ಆಕಾಂಕ್ಷೆಗಳಿಗೆ ನೀಡಿದ ಕಡಿಮೆ ಮೌಲ್ಯವನ್ನು ಒತ್ತಿಹೇಳುತ್ತದೆ..

ಇದನ್ನೂ ಓದಿ: ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ರಚಿಸಲ್ಪಡುವ ಕಾನೂನು ಸಮುದಾಯದ ನಿಯಮಗಳಿಗೆ ವಿರುದ್ಧವಾಗಿ ಇದ್ದರೆ, ಬಾಲ್ಯವಿವಾಹವನ್ನು ಅದು ಕಡಿಮೆ ಮಾಡುವಲ್ಲಿ ಯಾವುದೆ ಪರಿಣಾಮ ಬೀರುವುದಿಲ್ಲ. ಜೊತೆಗೆ ವಾಸ್ತವವಾಗಿ ಸಾಮಾಜಿಕ ರೂಢಿಗಳನ್ನು ಉಳಿಸಿಕೊಳ್ಳಲು ಸಮುದಾಯಗಳು ಕಾನೂನನ್ನು ಬಳಸುವ ಮಾರ್ಗಗಳನ್ನು ಕಂಡುಕೊಂಡಾಗ ಮಾತ್ರ ಅದನ್ನು ಅನ್ವಯಿಸಲಾಗುತ್ತದೆ ಎಂದು ಅಧ್ಯಯನವು ಹೇಳಿದೆ.

ಬಡತನ, ಮದುವೆಯ ಕೇಂದ್ರೀಯತೆಯ ಸುತ್ತಲಿನ ರೂಢಿಗಳು, ಪಿತೃಪ್ರಭುತ್ವ ಮತ್ತು ಹುಡುಗಿಯರ ಲೈಂಗಿಕತೆಯ ಮೇಲಿನ ನಿಯಂತ್ರಣ ಬಾಲ್ಯ ವಿವಾಹದ ಮೂಲ ಕಾರಣಗಳಾಗವೆ. ಹೀಗಾಗಿ ಮದುವೆಯ ವಯಸ್ಸನ್ನು ಬದಲಾಯಿಸುವ ಕಾನೂನು ಈ ಎಲ್ಲಾ ಕಾರಣಗಳನ್ನು ಪರಿಹರಿಸುವುದಿಲ್ಲ ಎಂದು ಅಧ್ಯಯನ ಹೇಳುತ್ತದೆ.

ಕೃಪೆ: ಸಚಿ, ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...