Homeಕರ್ನಾಟಕ2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ

- Advertisement -
- Advertisement -

ವೇಗವಾಗಿ ಬೆಳೆಯುತ್ತಿರುವ ಜಾಗತಿಕ ನಗರವೆಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರಿನಲ್ಲಿ 2020 ರಿಂದ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ವರದಿ ಬಹಿರಂಗ ಪಡಿಸಿದೆ. ಈ ವರ್ಷ 2022ರ ಜನವರಿಯಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ 51 ಬಾಲ್ಯವಿವಾಹ ದೂರುಗಳು ಬಂದಿದ್ದು, ಅವುಗಳಲ್ಲಿ 42 ಮಾತ್ರ ತಡೆಯಲು ಸಾಧ್ಯವಾಯಿತು ಎಂದು ವರದಿ ಹೇಳಿದೆ.

ಈ ಅವಧಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ನಡೆಸುವ ಮದುವೆಯ ಯತ್ನಗಳಲ್ಲಿ ಕನಿಷ್ಠ 84% ರಷ್ಟು ಮದುವೆಗಳನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಪ್ರತಿ ತಿಂಗಳು ಒಂದಕ್ಕಿಂತ ಹೆಚ್ಚು ಬಾಲ್ಯ ವಿವಾಹಗಳು ಅಕ್ರಮವಾಗಿ ನಡೆಯುತ್ತಿವೆ ಎಂದು ಅಂಕಿಅಂಶಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಿಂದ ಆಗಸ್ಟ್ 2022 ರ ನಡುವೆ ಬೆಂಗಳೂರಿನಲ್ಲಿ ಒಟ್ಟು 47 ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳು ಹೇಳಿವೆ. 2.5 ವರ್ಷಗಳ ಈ ಅವಧಿಯಲ್ಲಿ ಒಟ್ಟು 279 ದೂರುಗಳು ಬಂದಿದ್ದು, 232 ಮದುವೆಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ ಎಂದು ವರದಿಯೊಂದು ತಿಳಿಸಿದೆ. ಕೊರೊನಾ ಸಾಂಕ್ರಾಮಿಕದ ವೇಳೆ ಉಂಟಾದ ಉದ್ಯೋಗ ನಷ್ಟ ಮತ್ತು ಆರ್ಥಿಕ ಅಸಮಾನತೆಗಳ ವಿಸ್ತರಣೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

“ಉದ್ಯೋಗ ನಷ್ಟ, ಆನ್‌ಲೈನ್ ತರಗತಿಗಳು ಮತ್ತು ಕೊರೊನಾದಿಂದ ಮಕ್ಕಳು ಒಬ್ಬರು ಅಥವಾ ಇಬ್ಬರ ಪೋಷಕರನ್ನು ಕಳೆದುಕೊಳ್ಳುವುದು ಬಾಲ್ಯ ವಿವಾಹದ ಉಲ್ಬಣಕ್ಕೆ ನೀಡಬಹುದಾದ ಕೆಲವು ಕಾರಣಗಳಾಗಿವೆ” ಎಂದು ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾದ ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಬೃಂದಾ ಅಡಿಗ ಹೇಳುತ್ತಾರೆ.

“ಶಾಲೆಗಳು ಆನ್‌ಲೈನ್ ತರಗತಿಗಳ ಮೋಡ್‌ಗೆ ಬದಲಾಯಿಸಿದವು, ಆದರೆ ಪೋಷಕರು ತಮ್ಮ ಕೆಲಸವನ್ನು ಕಳೆದುಕೊಂಡರು. ಅನೇಕರು ತಮ್ಮ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಮಗುವಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು, ಕುಟುಂಬವನ್ನು ಸಾಕಲು ಕೆಲಸವನ್ನು ಹುಡುಕುತ್ತಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ 15 ಕೋಟಿಗೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

“ಶಾಲೆಗಳು ಪ್ರಾರಂಭವಾದ ನಂತರ, ಆನ್‌ಲೈನ್ ತರಗತಿಗಳು ಮತ್ತು ಪರೀಕ್ಷೆಗಳನ್ನು ತಪ್ಪಿಸಿದವರು ಅಂತರವನ್ನು ಸರಿದೂಗಿಸಲು ಸಾಧ್ಯವಾಗಲಿಲ್ಲ. ಜೊತೆಗೆ ಅವರು ಗಳಿಗೆ ಪ್ರಾರಂಭಿಸಿರುವುದರಿಂದ, ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಕೆಲಸವನ್ನು ಮುಂದುವರಿಸಲು ನಿರ್ಧರಿಸಿದರು. ಈ ಸಮಯದಲ್ಲಿ ಹುಡುಗಿಯರ ಕೆಲಸದ ವಿಚಾರದಲ್ಲಿ ಪೋಷಕರು ಸುರಕ್ಷತೆಯ ಬಗ್ಗೆ ಚಿಂತಿಸುವಂತೆ ಮಾಡುತ್ತದೆ. ಹುಡುಗಿಯರು ಮನೆಯಲ್ಲಿಯೇ ಇರಲು ನಿರ್ಧರಿಸಿದರೆ, ಅದು ಅವರಿಗೆ ಮತ್ತೊಂದು ಹೊರೆಯಾಗಿತ್ತು. ಜೊತೆಗೆ ಹುಡುಗಿಯರನ್ನು ಪೋಷಕರು ಹೊಣೆಗಾರಿಕೆ ಎಂದು ಪರಿಗಣಿಸಿ, ಅವರಿಗೆ ಮದುವೆ ಮಾಡಲು ನಿರ್ಧರಿಸುತ್ತಾರೆ. ಮದುವೆ ಎಂಬುವುದು ಹೆಣ್ಣುಮಕ್ಕಳ ಸ್ಥಿರವಾದ ಭವಿಷ್ಯಕ್ಕೆ ಸಮನಾಗಿರುತ್ತದೆ ಎಂದು ಅವರು ಭಾವಿಸುತ್ತಾರೆ” ಎಂದು ಬೃಂದಾ ಅಭಿಪ್ರಾಯಪಡುತ್ತಾರೆ.

ಕೊರೊನಾ ಪರಿಣಾಮ

ಕೊರೊನಾ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ಮದುವೆಗಳಿಗೆ ಕಡಿಮೆ ಜನರು ಭಾಗವಹಿಸುವುದರಿಂದ ಮತ್ತು ಕಡಿಮೆ ವೆಚ್ಚದಲ್ಲಿ ಸರಳವಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಬೇಗನೆ ಮದುವೆ ಮಾಡುತ್ತಿದ್ದರು.

ಬಾಲ್ಯ ವಿವಾಹದ ಬಗ್ಗೆ ಮದುವೆಯಾಗುವ ಮಗುವಿನ ಸ್ನೇಹಿತರು, ನೆರೆಹೊರೆಯವರು, ಶಾಲಾ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅಧಿಕಾರಿಗಳಿಗೆ ಸುಳಿವು ನೀಡುತ್ತಾರೆ. ಆದರೆ, ಸಾಂಕ್ರಾಮಿಕ ಸಮಯದಲ್ಲಿ, ಶಾಲೆಗಳು ಮತ್ತು ಅಂಗನವಾಡಿಗಳು ಮುಚ್ಚಲ್ಪಟ್ಟಿದ್ದರಿಂದ ಮತ್ತು ಜನರು ಮನೆಯೊಳಗೆ ಇರಬೇಕಾಗಿದ್ದರಿಂದ ಮಾಹಿತಿ ಪಡೆಯುವಲ್ಲಿ ಕೊರತೆಯುಂಟಾಗಿತ್ತು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮದುವೆ ನಡೆಯುವುದರಿಂದ ಬಹುತೇಕ ಮದುವೆಗಳು ನೋಂದಣಿಯಾಗದೇ ಇರುವುದರಿಂದ ಇತರೆ ಧರ್ಮಗಳಿಗೆ ಹೋಲಿಸಿದರೆ ಹಿಂದೂ ಕುಟುಂಬಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿವೆ ಬೃಂದಾ ಅಭಿಪ್ರಾಯಪಡುತ್ತಾರೆ. ಸಮಾರಂಭವನ್ನು ನಡೆಸುವ ಪುರೋಹಿತರು ಸಹ ಬಾಲ್ಯವಿವಾಹ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ತಿಳಿಸುವುದಿಲ್ಲ ಅಥವಾ ಅವರು ಮದುವೆ ಮಾಡಿಸಲು ನಿರಾಕರಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

ಬಾಲ್ಯವಿವಾಹ ನಡೆದಿರುವ ಅಥವಾ ನಡೆಯಲಿರುವ ಬಗ್ಗೆ ಮಾಹಿತಿ ದೊರೆತಾಗ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಬೇಕು. ಆದರೆ, ಸುದೀರ್ಘ ನ್ಯಾಯಾಲಯದ ಕಾರ್ಯವಿಧಾನವನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಮತ್ತು ಮಕ್ಕಳ ರಕ್ಷಣಾಧಿಕಾರಿಗಳು ಈ ಕ್ರಮವನ್ನು ತಪ್ಪಿಸುತ್ತಿದ್ದಾರೆ ಎಂಬುವುದು ಬೃಂದಾ ಅವರ ಅಭಿಪ್ರಾಯವಾಗಿದೆ.

ಅಂಕಿಅಂಶಗಳ ಪ್ರಕಾರ, 2020 ರಿಂದ 2022ರ ಆಗಸ್ಟ್‌ ವರೆಗೆ ಕೇವಲ 44 ಎಫ್‌ಐಆರ್‌ಗಳನ್ನು ಮಾತ್ರ ದಾಖಲಿಸಲಾಗಿದೆ. “ಪ್ರಕರಣವನ್ನು ನ್ಯಾಯಾಲಯದ ಮುಂದೆ ತರಲು ಸುಮಾರು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪೊಲೀಸ್ ಮತ್ತು ಮಕ್ಕಳ ರಕ್ಷಣಾ ಘಟಕವು ಅದನ್ನು ಎದುರಿಸಲು ಬಯಸುವುದಿಲ್ಲವಾದ್ದರಿಂದ ಅದನ್ನು ತಪ್ಪಿಸಲು ಪ್ರಯತ್ನಿಸುತ್ತದೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ಸಾಮಾಜಿಕ ತನಿಖೆಗಳನ್ನು ಮಾಡುವ ತರಬೇತಿ ಪಡೆದಿಲ್ಲ ಅಥವಾ ಸಜ್ಜುಗೊಂಡಿರುವುದಿಲ್ಲ ಜೊತೆಗೆ, ಅದನ್ನು ಆದ್ಯತೆಯಾಗಿ ಪರಿಗಣಿಸಲಾಗುವುದಿಲ್ಲ” ಎಂದು ಬೃಂದಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬಾಲ್ಯ ವಿವಾಹ ತಡೆಗೆ ಸಹಾಯ ಮಾಡುವುದಿಲ್ಲ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕವು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯಿದೆ, 2016 ಅನ್ನು ಏಪ್ರಿಲ್ 2017 ರಲ್ಲಿ ತಂದಿತು ಮತ್ತು ಎಲ್ಲಾ ಅಪ್ರಾಪ್ತ ವಯಸ್ಸಿನ ವಿವಾಹಗಳನ್ನು ಅನೂರ್ಜಿತಗೊಳಿಸಿತು, ಅಂದರೆ ಅಂತಹ ವಿವಾಹಗಳು ಯಾವುದೇ ಪಕ್ಷಗಳಿಂದ ಯಾವುದೇ ಸಮಯದಲ್ಲಿ ರದ್ದುಗೊಳಿಸಲಾಗಿದೆ.

“ಸರ್ಕಾರವು ವಯೋಮಿತಿಯನ್ನು 21 ಕ್ಕೆ ಏರಿಸಿದರೂ ಹೆಣ್ಣು ಮಗುವಿನ ವಿವಾಹಕ್ಕೆ ಕಾರಣವಾಗುವ ಸಮಸ್ಯೆಗಳನ್ನು ಪರಿಹರಿಸಲು ಅವರು ಸಿದ್ಧರಿಲ್ಲದಿದ್ದರೆ, ಮದುವೆಗಳು ನಡೆಯುತ್ತಲೇ ಇರುತ್ತವೆ” ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತೆ, ಬೆಂಗಳೂರು ಮೂಲದ ಎನ್‌ಜಿಒ ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (CWC) ಕವಿತಾ ರತ್ನ ಹೇಳುತ್ತಾರೆ.

ವರದಿಯೊಂದರ ಪ್ರಕಾರ, “ಬಾಲ್ಯ ವಿವಾಹ ಮತ್ತು ಬಾಲ್ಯವಿವಾಹಕ್ಕೆ ಎರಡು ಪ್ರಮುಖ ಕಾರಣಗಳಿದ್ದು, ಹೆಣ್ಣುಮಕ್ಕಳಿಗೆ ಅಧ್ಯಯನ ಮಾಡಲು ಸೀಮಿತ ಅವಕಾಶಗಳು ಮತ್ತು ತನ್ನ ಆಯ್ಕೆಯ ಸಂಬಂಧಗಳನ್ನು ಬೆಳೆಸಿಕೊಳ್ಳುತ್ತಾರೆ ಎಂಬ ಹುಡುಗಿಯರ ಕುಟುಂಬಗಳಲ್ಲಿ ಭಯವಾಗಿದೆ. ಎರಡೂ ಕಾರಣಗಳು ಕೂಡಾ ಕುಟುಂಬ ಮತ್ತು ಸಮಾಜದಲ್ಲಿ ಹೆಣ್ಣುಮಕ್ಕಳ ಆಕಾಂಕ್ಷೆಗಳಿಗೆ ನೀಡಿದ ಕಡಿಮೆ ಮೌಲ್ಯವನ್ನು ಒತ್ತಿಹೇಳುತ್ತದೆ..

ಇದನ್ನೂ ಓದಿ: ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ರಚಿಸಲ್ಪಡುವ ಕಾನೂನು ಸಮುದಾಯದ ನಿಯಮಗಳಿಗೆ ವಿರುದ್ಧವಾಗಿ ಇದ್ದರೆ, ಬಾಲ್ಯವಿವಾಹವನ್ನು ಅದು ಕಡಿಮೆ ಮಾಡುವಲ್ಲಿ ಯಾವುದೆ ಪರಿಣಾಮ ಬೀರುವುದಿಲ್ಲ. ಜೊತೆಗೆ ವಾಸ್ತವವಾಗಿ ಸಾಮಾಜಿಕ ರೂಢಿಗಳನ್ನು ಉಳಿಸಿಕೊಳ್ಳಲು ಸಮುದಾಯಗಳು ಕಾನೂನನ್ನು ಬಳಸುವ ಮಾರ್ಗಗಳನ್ನು ಕಂಡುಕೊಂಡಾಗ ಮಾತ್ರ ಅದನ್ನು ಅನ್ವಯಿಸಲಾಗುತ್ತದೆ ಎಂದು ಅಧ್ಯಯನವು ಹೇಳಿದೆ.

ಬಡತನ, ಮದುವೆಯ ಕೇಂದ್ರೀಯತೆಯ ಸುತ್ತಲಿನ ರೂಢಿಗಳು, ಪಿತೃಪ್ರಭುತ್ವ ಮತ್ತು ಹುಡುಗಿಯರ ಲೈಂಗಿಕತೆಯ ಮೇಲಿನ ನಿಯಂತ್ರಣ ಬಾಲ್ಯ ವಿವಾಹದ ಮೂಲ ಕಾರಣಗಳಾಗವೆ. ಹೀಗಾಗಿ ಮದುವೆಯ ವಯಸ್ಸನ್ನು ಬದಲಾಯಿಸುವ ಕಾನೂನು ಈ ಎಲ್ಲಾ ಕಾರಣಗಳನ್ನು ಪರಿಹರಿಸುವುದಿಲ್ಲ ಎಂದು ಅಧ್ಯಯನ ಹೇಳುತ್ತದೆ.

ಕೃಪೆ: ಸಚಿ, ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...