Homeಮುಖಪುಟಕೇಂದ್ರಿಯ ವಿವಿ ಹಾಸ್ಟೆಲ್‌ಗೆ 'ಸ್ವಾತಂತ್ರ ಹೋರಾಟಗಾರ್ತಿ'ಯ ಹೆಸರು ಕೈಬಿಟ್ಟು 'ಆರೆಸ್ಸೆಸ್‌ ನಾಯಕಿ'ಯ ಹೆಸರು ನಾಮಕರಣ

ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

- Advertisement -
- Advertisement -

ಮಹಾರಾಷ್ಟ್ರದ ವಾರ್ಧಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಹೆಸರನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ‘ರಾಣಿ ಲಕ್ಷ್ಮೀಬಾಯಿ’ಯ ಹೆಸರನ್ನು ಬದಲಾಯಿಸಿ RSSನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಂಸ್ಥಾಪಕಿ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಕೇಸರಿಕರಣದ ಬಗ್ಗೆ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೇಂದ್ರೀಯ ವಿಶ್ವವಿದ್ಯಾನಿಲಯವು ರಾಣಿ ಲಕ್ಷ್ಮಿಬಾಯಿ ಹೆಸರಿನಿಂದ “ರಾಣಿ” ಅನ್ನು ಸದ್ದಿಲ್ಲದೆ ಕೈಬಿಟ್ಟು   “ಕೇಲ್ಕರ್” ಅನ್ನು ಸೇರಿಸಿದೆ. ಈ ವರ್ಷದ ಜನವರಿಯಲ್ಲಿ ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ (MGAHV) ಹೊಸದಾಗಿ ನಿರ್ಮಿಸಲಾದ ಬಾಲಕಿಯರ ಹಾಸ್ಟೆಲ್‌ಗೆ RSSನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂಸ್ಥಾಪಕಿ ಲಕ್ಷ್ಮೀಬಾಯಿ ಕೇಲ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಹೆಸರನ್ನು ಹಾಸ್ಟೆಲ್‌ಗೆ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಇಟ್ಟಿರುವುದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಕೇಂದ್ರೀಯ ವಿಶ್ವವಿದ್ಯಾಲಯದ ಈ ಕ್ರಮಗಳನ್ನು ವಂಚನೆ ಮತ್ತು ರಾಷ್ಟ್ರಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ ಮಹಾನ್ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹೇಳಿದ್ದರು.

ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ(ಯುಜಿಸಿ) ಅನುದಾನದಿಂದ ಹಾಸ್ಟೆಲ್‌ನ್ನು ನಿರ್ಮಿಸಲಾಗಿದೆ. 2017-18 ಮತ್ತು 2018-19ರ MGAHVಯ ವಾರ್ಷಿಕ ವರದಿಗಳು ರಾಣಿ ಲಕ್ಷ್ಮೀಬಾಯಿ ಬಾಲಕಿಯರ ಹಾಸ್ಟೆಲ್ ಅನ್ನು ಸ್ಥಾಪಿಸಲು ವಿಶ್ವವಿದ್ಯಾಲಯವು ಹಣವನ್ನು ಪಡೆದಿದೆ ಎಂದು ಉಲ್ಲೇಖಿಸಿದೆ.

ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಗಿರೀಶ್ವರ್ ಮಿಶ್ರಾ ಮಾತನಾಡಿ, ನಾನು ಉಪಕುಲಪತಿ ಆಗಿದ್ದ ಅವಧಿಯಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ರಾಣಿ ಲಕ್ಷ್ಮೀಬಾಯಿ ಹಾಸ್ಟೆಲ್‌ಗೆ ಅಡಿಪಾಯ ಹಾಕಿದ್ದರು. ಆದರೆ, ಅದರ ನಂತರ ಬೇರೆ ರೀತಿಯ ಬೆಳವಣಿಗೆ ನಡೆದಿದೆ. ವಿಶ್ವವಿದ್ಯಾನಿಲಯವು ಜನವರಿ 23, 2024ರಂದು ಹೊರಡಿಸಿದ ಆದೇಶದಲ್ಲಿ ‘ಲಕ್ಷ್ಮೀಬಾಯಿ ಕೇಲ್ಕರ್’ ಬಾಲಕಿಯರ ಹಾಸ್ಟೆಲ್ ಎಂದು ಹೆಸರಿಸಿದೆ. ಪ್ರೊ.ರಜನೀಶ್ ಕುಮಾರ್ ಶುಕ್ಲಾ ಅವರು ಉಪಕುಲಪತಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಶುಕ್ಲಾ ಆಗಸ್ಟ್ 2023ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಹಾಸ್ಟೆಲ್‌ನ ಆರಂಭಿಕ ಹಂತದಲ್ಲಿ ಇದರ ಹೆಸರನ್ನು ಕಾರ್ಯಕಾರಿ ಮಂಡಳಿ ನಿರ್ಧರಿಸಿತ್ತು. ಸಭಾಂಗಣಗಳು, ಹಾಸ್ಟೆಲ್‌ಗಳು ಮತ್ತು ಇತರ ವಿಶ್ವವಿದ್ಯಾನಿಲಯದ ಕಟ್ಟಡಗಳ ಹೆಸರನ್ನು ನಿರ್ಧರಿಸಲು ಕಾರ್ಯಕಾರಿ ಮಂಡಳಿಗೆ ಅಧಿಕಾರವಿದೆ ಎಂದು ಶುಕ್ಲಾ ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಈ ಕೃತ್ಯವು ವಂಚನೆಗೆ ಸಮಾನವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಂಚಿಸುವ ಮತ್ತು ಅವಮಾನಿಸುವ ಪ್ರಕರಣವಾಗಿದೆ. ಈ ಕುರಿತು ಕೋರ್ಟ್‌ ಮೊರೆ ಹೋಗಬೇಕಿದೆ. ವಿಶ್ವವಿದ್ಯಾನಿಲಯದೊಳಗಿನ ಯಾವುದೇ ಕಟ್ಟಡಕ್ಕೆ ಯಾವುದೇ ಆರೆಸ್ಸೆಸ್‌ ಅಥವಾ ಹಿಂದೂ ಮಹಾಸಭಾದ ನಾಯಕರ ಹೆಸರನ್ನು ಇಡಬಾರದು ಎಂದು ನಾಗಪುರದ ಧರಂಪೆತ್ ವಿಜ್ಞಾನ ಕಾಲೇಜಿನ ಅಧ್ಯಾಪಕ ವೈ.ಜೆ.ರಾಯಲು ಹೇಳಿದ್ದಾರೆ.

ಇದಲ್ಲದೆ ಕ್ಯಾಂಪಸ್‌ನಲ್ಲಿರುವ ಆಸ್ಪತ್ರೆಗೆ 1925ರಲ್ಲಿ ಆರೆಸ್ಸೆಸ್‌ ಆರಂಭಿಸಿದ ಬಲಿರಾಮ್ ಹೆಡ್ಗೆವಾರ್ ಅವರ ಹೆಸರನ್ನಿಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾನಿಲಯವು ತನ್ನ ಜಾತ್ಯತೀತ ಪರಂಪರೆಯಿಂದ ದೂರ ಸರಿಯುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವ್ಯಕ್ತವಾಗಿದೆ.

ಇದನ್ನು ಓದಿ:  ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...