Homeಮುಖಪುಟಕೇಂದ್ರಿಯ ವಿವಿ ಹಾಸ್ಟೆಲ್‌ಗೆ 'ಸ್ವಾತಂತ್ರ ಹೋರಾಟಗಾರ್ತಿ'ಯ ಹೆಸರು ಕೈಬಿಟ್ಟು 'ಆರೆಸ್ಸೆಸ್‌ ನಾಯಕಿ'ಯ ಹೆಸರು ನಾಮಕರಣ

ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

- Advertisement -
- Advertisement -

ಮಹಾರಾಷ್ಟ್ರದ ವಾರ್ಧಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಹೆಸರನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ‘ರಾಣಿ ಲಕ್ಷ್ಮೀಬಾಯಿ’ಯ ಹೆಸರನ್ನು ಬದಲಾಯಿಸಿ RSSನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಂಸ್ಥಾಪಕಿ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಕೇಸರಿಕರಣದ ಬಗ್ಗೆ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೇಂದ್ರೀಯ ವಿಶ್ವವಿದ್ಯಾನಿಲಯವು ರಾಣಿ ಲಕ್ಷ್ಮಿಬಾಯಿ ಹೆಸರಿನಿಂದ “ರಾಣಿ” ಅನ್ನು ಸದ್ದಿಲ್ಲದೆ ಕೈಬಿಟ್ಟು   “ಕೇಲ್ಕರ್” ಅನ್ನು ಸೇರಿಸಿದೆ. ಈ ವರ್ಷದ ಜನವರಿಯಲ್ಲಿ ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ (MGAHV) ಹೊಸದಾಗಿ ನಿರ್ಮಿಸಲಾದ ಬಾಲಕಿಯರ ಹಾಸ್ಟೆಲ್‌ಗೆ RSSನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂಸ್ಥಾಪಕಿ ಲಕ್ಷ್ಮೀಬಾಯಿ ಕೇಲ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಹೆಸರನ್ನು ಹಾಸ್ಟೆಲ್‌ಗೆ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಇಟ್ಟಿರುವುದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಕೇಂದ್ರೀಯ ವಿಶ್ವವಿದ್ಯಾಲಯದ ಈ ಕ್ರಮಗಳನ್ನು ವಂಚನೆ ಮತ್ತು ರಾಷ್ಟ್ರಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ ಮಹಾನ್ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹೇಳಿದ್ದರು.

ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ(ಯುಜಿಸಿ) ಅನುದಾನದಿಂದ ಹಾಸ್ಟೆಲ್‌ನ್ನು ನಿರ್ಮಿಸಲಾಗಿದೆ. 2017-18 ಮತ್ತು 2018-19ರ MGAHVಯ ವಾರ್ಷಿಕ ವರದಿಗಳು ರಾಣಿ ಲಕ್ಷ್ಮೀಬಾಯಿ ಬಾಲಕಿಯರ ಹಾಸ್ಟೆಲ್ ಅನ್ನು ಸ್ಥಾಪಿಸಲು ವಿಶ್ವವಿದ್ಯಾಲಯವು ಹಣವನ್ನು ಪಡೆದಿದೆ ಎಂದು ಉಲ್ಲೇಖಿಸಿದೆ.

ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಗಿರೀಶ್ವರ್ ಮಿಶ್ರಾ ಮಾತನಾಡಿ, ನಾನು ಉಪಕುಲಪತಿ ಆಗಿದ್ದ ಅವಧಿಯಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ರಾಣಿ ಲಕ್ಷ್ಮೀಬಾಯಿ ಹಾಸ್ಟೆಲ್‌ಗೆ ಅಡಿಪಾಯ ಹಾಕಿದ್ದರು. ಆದರೆ, ಅದರ ನಂತರ ಬೇರೆ ರೀತಿಯ ಬೆಳವಣಿಗೆ ನಡೆದಿದೆ. ವಿಶ್ವವಿದ್ಯಾನಿಲಯವು ಜನವರಿ 23, 2024ರಂದು ಹೊರಡಿಸಿದ ಆದೇಶದಲ್ಲಿ ‘ಲಕ್ಷ್ಮೀಬಾಯಿ ಕೇಲ್ಕರ್’ ಬಾಲಕಿಯರ ಹಾಸ್ಟೆಲ್ ಎಂದು ಹೆಸರಿಸಿದೆ. ಪ್ರೊ.ರಜನೀಶ್ ಕುಮಾರ್ ಶುಕ್ಲಾ ಅವರು ಉಪಕುಲಪತಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಶುಕ್ಲಾ ಆಗಸ್ಟ್ 2023ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಹಾಸ್ಟೆಲ್‌ನ ಆರಂಭಿಕ ಹಂತದಲ್ಲಿ ಇದರ ಹೆಸರನ್ನು ಕಾರ್ಯಕಾರಿ ಮಂಡಳಿ ನಿರ್ಧರಿಸಿತ್ತು. ಸಭಾಂಗಣಗಳು, ಹಾಸ್ಟೆಲ್‌ಗಳು ಮತ್ತು ಇತರ ವಿಶ್ವವಿದ್ಯಾನಿಲಯದ ಕಟ್ಟಡಗಳ ಹೆಸರನ್ನು ನಿರ್ಧರಿಸಲು ಕಾರ್ಯಕಾರಿ ಮಂಡಳಿಗೆ ಅಧಿಕಾರವಿದೆ ಎಂದು ಶುಕ್ಲಾ ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಈ ಕೃತ್ಯವು ವಂಚನೆಗೆ ಸಮಾನವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಂಚಿಸುವ ಮತ್ತು ಅವಮಾನಿಸುವ ಪ್ರಕರಣವಾಗಿದೆ. ಈ ಕುರಿತು ಕೋರ್ಟ್‌ ಮೊರೆ ಹೋಗಬೇಕಿದೆ. ವಿಶ್ವವಿದ್ಯಾನಿಲಯದೊಳಗಿನ ಯಾವುದೇ ಕಟ್ಟಡಕ್ಕೆ ಯಾವುದೇ ಆರೆಸ್ಸೆಸ್‌ ಅಥವಾ ಹಿಂದೂ ಮಹಾಸಭಾದ ನಾಯಕರ ಹೆಸರನ್ನು ಇಡಬಾರದು ಎಂದು ನಾಗಪುರದ ಧರಂಪೆತ್ ವಿಜ್ಞಾನ ಕಾಲೇಜಿನ ಅಧ್ಯಾಪಕ ವೈ.ಜೆ.ರಾಯಲು ಹೇಳಿದ್ದಾರೆ.

ಇದಲ್ಲದೆ ಕ್ಯಾಂಪಸ್‌ನಲ್ಲಿರುವ ಆಸ್ಪತ್ರೆಗೆ 1925ರಲ್ಲಿ ಆರೆಸ್ಸೆಸ್‌ ಆರಂಭಿಸಿದ ಬಲಿರಾಮ್ ಹೆಡ್ಗೆವಾರ್ ಅವರ ಹೆಸರನ್ನಿಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾನಿಲಯವು ತನ್ನ ಜಾತ್ಯತೀತ ಪರಂಪರೆಯಿಂದ ದೂರ ಸರಿಯುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವ್ಯಕ್ತವಾಗಿದೆ.

ಇದನ್ನು ಓದಿ:  ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...