Homeಮುಖಪುಟಕೇಂದ್ರಿಯ ವಿವಿ ಹಾಸ್ಟೆಲ್‌ಗೆ 'ಸ್ವಾತಂತ್ರ ಹೋರಾಟಗಾರ್ತಿ'ಯ ಹೆಸರು ಕೈಬಿಟ್ಟು 'ಆರೆಸ್ಸೆಸ್‌ ನಾಯಕಿ'ಯ ಹೆಸರು ನಾಮಕರಣ

ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

- Advertisement -
- Advertisement -

ಮಹಾರಾಷ್ಟ್ರದ ವಾರ್ಧಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಹೆಸರನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ‘ರಾಣಿ ಲಕ್ಷ್ಮೀಬಾಯಿ’ಯ ಹೆಸರನ್ನು ಬದಲಾಯಿಸಿ RSSನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಂಸ್ಥಾಪಕಿ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಕೇಸರಿಕರಣದ ಬಗ್ಗೆ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೇಂದ್ರೀಯ ವಿಶ್ವವಿದ್ಯಾನಿಲಯವು ರಾಣಿ ಲಕ್ಷ್ಮಿಬಾಯಿ ಹೆಸರಿನಿಂದ “ರಾಣಿ” ಅನ್ನು ಸದ್ದಿಲ್ಲದೆ ಕೈಬಿಟ್ಟು   “ಕೇಲ್ಕರ್” ಅನ್ನು ಸೇರಿಸಿದೆ. ಈ ವರ್ಷದ ಜನವರಿಯಲ್ಲಿ ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ (MGAHV) ಹೊಸದಾಗಿ ನಿರ್ಮಿಸಲಾದ ಬಾಲಕಿಯರ ಹಾಸ್ಟೆಲ್‌ಗೆ RSSನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂಸ್ಥಾಪಕಿ ಲಕ್ಷ್ಮೀಬಾಯಿ ಕೇಲ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಹೆಸರನ್ನು ಹಾಸ್ಟೆಲ್‌ಗೆ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಇಟ್ಟಿರುವುದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಕೇಂದ್ರೀಯ ವಿಶ್ವವಿದ್ಯಾಲಯದ ಈ ಕ್ರಮಗಳನ್ನು ವಂಚನೆ ಮತ್ತು ರಾಷ್ಟ್ರಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ ಮಹಾನ್ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹೇಳಿದ್ದರು.

ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ(ಯುಜಿಸಿ) ಅನುದಾನದಿಂದ ಹಾಸ್ಟೆಲ್‌ನ್ನು ನಿರ್ಮಿಸಲಾಗಿದೆ. 2017-18 ಮತ್ತು 2018-19ರ MGAHVಯ ವಾರ್ಷಿಕ ವರದಿಗಳು ರಾಣಿ ಲಕ್ಷ್ಮೀಬಾಯಿ ಬಾಲಕಿಯರ ಹಾಸ್ಟೆಲ್ ಅನ್ನು ಸ್ಥಾಪಿಸಲು ವಿಶ್ವವಿದ್ಯಾಲಯವು ಹಣವನ್ನು ಪಡೆದಿದೆ ಎಂದು ಉಲ್ಲೇಖಿಸಿದೆ.

ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಗಿರೀಶ್ವರ್ ಮಿಶ್ರಾ ಮಾತನಾಡಿ, ನಾನು ಉಪಕುಲಪತಿ ಆಗಿದ್ದ ಅವಧಿಯಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ರಾಣಿ ಲಕ್ಷ್ಮೀಬಾಯಿ ಹಾಸ್ಟೆಲ್‌ಗೆ ಅಡಿಪಾಯ ಹಾಕಿದ್ದರು. ಆದರೆ, ಅದರ ನಂತರ ಬೇರೆ ರೀತಿಯ ಬೆಳವಣಿಗೆ ನಡೆದಿದೆ. ವಿಶ್ವವಿದ್ಯಾನಿಲಯವು ಜನವರಿ 23, 2024ರಂದು ಹೊರಡಿಸಿದ ಆದೇಶದಲ್ಲಿ ‘ಲಕ್ಷ್ಮೀಬಾಯಿ ಕೇಲ್ಕರ್’ ಬಾಲಕಿಯರ ಹಾಸ್ಟೆಲ್ ಎಂದು ಹೆಸರಿಸಿದೆ. ಪ್ರೊ.ರಜನೀಶ್ ಕುಮಾರ್ ಶುಕ್ಲಾ ಅವರು ಉಪಕುಲಪತಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಶುಕ್ಲಾ ಆಗಸ್ಟ್ 2023ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಹಾಸ್ಟೆಲ್‌ನ ಆರಂಭಿಕ ಹಂತದಲ್ಲಿ ಇದರ ಹೆಸರನ್ನು ಕಾರ್ಯಕಾರಿ ಮಂಡಳಿ ನಿರ್ಧರಿಸಿತ್ತು. ಸಭಾಂಗಣಗಳು, ಹಾಸ್ಟೆಲ್‌ಗಳು ಮತ್ತು ಇತರ ವಿಶ್ವವಿದ್ಯಾನಿಲಯದ ಕಟ್ಟಡಗಳ ಹೆಸರನ್ನು ನಿರ್ಧರಿಸಲು ಕಾರ್ಯಕಾರಿ ಮಂಡಳಿಗೆ ಅಧಿಕಾರವಿದೆ ಎಂದು ಶುಕ್ಲಾ ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಈ ಕೃತ್ಯವು ವಂಚನೆಗೆ ಸಮಾನವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಂಚಿಸುವ ಮತ್ತು ಅವಮಾನಿಸುವ ಪ್ರಕರಣವಾಗಿದೆ. ಈ ಕುರಿತು ಕೋರ್ಟ್‌ ಮೊರೆ ಹೋಗಬೇಕಿದೆ. ವಿಶ್ವವಿದ್ಯಾನಿಲಯದೊಳಗಿನ ಯಾವುದೇ ಕಟ್ಟಡಕ್ಕೆ ಯಾವುದೇ ಆರೆಸ್ಸೆಸ್‌ ಅಥವಾ ಹಿಂದೂ ಮಹಾಸಭಾದ ನಾಯಕರ ಹೆಸರನ್ನು ಇಡಬಾರದು ಎಂದು ನಾಗಪುರದ ಧರಂಪೆತ್ ವಿಜ್ಞಾನ ಕಾಲೇಜಿನ ಅಧ್ಯಾಪಕ ವೈ.ಜೆ.ರಾಯಲು ಹೇಳಿದ್ದಾರೆ.

ಇದಲ್ಲದೆ ಕ್ಯಾಂಪಸ್‌ನಲ್ಲಿರುವ ಆಸ್ಪತ್ರೆಗೆ 1925ರಲ್ಲಿ ಆರೆಸ್ಸೆಸ್‌ ಆರಂಭಿಸಿದ ಬಲಿರಾಮ್ ಹೆಡ್ಗೆವಾರ್ ಅವರ ಹೆಸರನ್ನಿಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾನಿಲಯವು ತನ್ನ ಜಾತ್ಯತೀತ ಪರಂಪರೆಯಿಂದ ದೂರ ಸರಿಯುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವ್ಯಕ್ತವಾಗಿದೆ.

ಇದನ್ನು ಓದಿ:  ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...