Homeಮುಖಪುಟಕೇಂದ್ರಿಯ ವಿವಿ ಹಾಸ್ಟೆಲ್‌ಗೆ 'ಸ್ವಾತಂತ್ರ ಹೋರಾಟಗಾರ್ತಿ'ಯ ಹೆಸರು ಕೈಬಿಟ್ಟು 'ಆರೆಸ್ಸೆಸ್‌ ನಾಯಕಿ'ಯ ಹೆಸರು ನಾಮಕರಣ

ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

- Advertisement -
- Advertisement -

ಮಹಾರಾಷ್ಟ್ರದ ವಾರ್ಧಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಹೆಸರನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ‘ರಾಣಿ ಲಕ್ಷ್ಮೀಬಾಯಿ’ಯ ಹೆಸರನ್ನು ಬದಲಾಯಿಸಿ RSSನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಂಸ್ಥಾಪಕಿ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಕೇಸರಿಕರಣದ ಬಗ್ಗೆ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೇಂದ್ರೀಯ ವಿಶ್ವವಿದ್ಯಾನಿಲಯವು ರಾಣಿ ಲಕ್ಷ್ಮಿಬಾಯಿ ಹೆಸರಿನಿಂದ “ರಾಣಿ” ಅನ್ನು ಸದ್ದಿಲ್ಲದೆ ಕೈಬಿಟ್ಟು   “ಕೇಲ್ಕರ್” ಅನ್ನು ಸೇರಿಸಿದೆ. ಈ ವರ್ಷದ ಜನವರಿಯಲ್ಲಿ ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ (MGAHV) ಹೊಸದಾಗಿ ನಿರ್ಮಿಸಲಾದ ಬಾಲಕಿಯರ ಹಾಸ್ಟೆಲ್‌ಗೆ RSSನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂಸ್ಥಾಪಕಿ ಲಕ್ಷ್ಮೀಬಾಯಿ ಕೇಲ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಹೆಸರನ್ನು ಹಾಸ್ಟೆಲ್‌ಗೆ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಇಟ್ಟಿರುವುದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಕೇಂದ್ರೀಯ ವಿಶ್ವವಿದ್ಯಾಲಯದ ಈ ಕ್ರಮಗಳನ್ನು ವಂಚನೆ ಮತ್ತು ರಾಷ್ಟ್ರಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ ಮಹಾನ್ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹೇಳಿದ್ದರು.

ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ(ಯುಜಿಸಿ) ಅನುದಾನದಿಂದ ಹಾಸ್ಟೆಲ್‌ನ್ನು ನಿರ್ಮಿಸಲಾಗಿದೆ. 2017-18 ಮತ್ತು 2018-19ರ MGAHVಯ ವಾರ್ಷಿಕ ವರದಿಗಳು ರಾಣಿ ಲಕ್ಷ್ಮೀಬಾಯಿ ಬಾಲಕಿಯರ ಹಾಸ್ಟೆಲ್ ಅನ್ನು ಸ್ಥಾಪಿಸಲು ವಿಶ್ವವಿದ್ಯಾಲಯವು ಹಣವನ್ನು ಪಡೆದಿದೆ ಎಂದು ಉಲ್ಲೇಖಿಸಿದೆ.

ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಗಿರೀಶ್ವರ್ ಮಿಶ್ರಾ ಮಾತನಾಡಿ, ನಾನು ಉಪಕುಲಪತಿ ಆಗಿದ್ದ ಅವಧಿಯಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ರಾಣಿ ಲಕ್ಷ್ಮೀಬಾಯಿ ಹಾಸ್ಟೆಲ್‌ಗೆ ಅಡಿಪಾಯ ಹಾಕಿದ್ದರು. ಆದರೆ, ಅದರ ನಂತರ ಬೇರೆ ರೀತಿಯ ಬೆಳವಣಿಗೆ ನಡೆದಿದೆ. ವಿಶ್ವವಿದ್ಯಾನಿಲಯವು ಜನವರಿ 23, 2024ರಂದು ಹೊರಡಿಸಿದ ಆದೇಶದಲ್ಲಿ ‘ಲಕ್ಷ್ಮೀಬಾಯಿ ಕೇಲ್ಕರ್’ ಬಾಲಕಿಯರ ಹಾಸ್ಟೆಲ್ ಎಂದು ಹೆಸರಿಸಿದೆ. ಪ್ರೊ.ರಜನೀಶ್ ಕುಮಾರ್ ಶುಕ್ಲಾ ಅವರು ಉಪಕುಲಪತಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಶುಕ್ಲಾ ಆಗಸ್ಟ್ 2023ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಹಾಸ್ಟೆಲ್‌ನ ಆರಂಭಿಕ ಹಂತದಲ್ಲಿ ಇದರ ಹೆಸರನ್ನು ಕಾರ್ಯಕಾರಿ ಮಂಡಳಿ ನಿರ್ಧರಿಸಿತ್ತು. ಸಭಾಂಗಣಗಳು, ಹಾಸ್ಟೆಲ್‌ಗಳು ಮತ್ತು ಇತರ ವಿಶ್ವವಿದ್ಯಾನಿಲಯದ ಕಟ್ಟಡಗಳ ಹೆಸರನ್ನು ನಿರ್ಧರಿಸಲು ಕಾರ್ಯಕಾರಿ ಮಂಡಳಿಗೆ ಅಧಿಕಾರವಿದೆ ಎಂದು ಶುಕ್ಲಾ ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಈ ಕೃತ್ಯವು ವಂಚನೆಗೆ ಸಮಾನವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಂಚಿಸುವ ಮತ್ತು ಅವಮಾನಿಸುವ ಪ್ರಕರಣವಾಗಿದೆ. ಈ ಕುರಿತು ಕೋರ್ಟ್‌ ಮೊರೆ ಹೋಗಬೇಕಿದೆ. ವಿಶ್ವವಿದ್ಯಾನಿಲಯದೊಳಗಿನ ಯಾವುದೇ ಕಟ್ಟಡಕ್ಕೆ ಯಾವುದೇ ಆರೆಸ್ಸೆಸ್‌ ಅಥವಾ ಹಿಂದೂ ಮಹಾಸಭಾದ ನಾಯಕರ ಹೆಸರನ್ನು ಇಡಬಾರದು ಎಂದು ನಾಗಪುರದ ಧರಂಪೆತ್ ವಿಜ್ಞಾನ ಕಾಲೇಜಿನ ಅಧ್ಯಾಪಕ ವೈ.ಜೆ.ರಾಯಲು ಹೇಳಿದ್ದಾರೆ.

ಇದಲ್ಲದೆ ಕ್ಯಾಂಪಸ್‌ನಲ್ಲಿರುವ ಆಸ್ಪತ್ರೆಗೆ 1925ರಲ್ಲಿ ಆರೆಸ್ಸೆಸ್‌ ಆರಂಭಿಸಿದ ಬಲಿರಾಮ್ ಹೆಡ್ಗೆವಾರ್ ಅವರ ಹೆಸರನ್ನಿಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾನಿಲಯವು ತನ್ನ ಜಾತ್ಯತೀತ ಪರಂಪರೆಯಿಂದ ದೂರ ಸರಿಯುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವ್ಯಕ್ತವಾಗಿದೆ.

ಇದನ್ನು ಓದಿ:  ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...