Homeಮುಖಪುಟಕೇಂದ್ರಿಯ ವಿವಿ ಹಾಸ್ಟೆಲ್‌ಗೆ 'ಸ್ವಾತಂತ್ರ ಹೋರಾಟಗಾರ್ತಿ'ಯ ಹೆಸರು ಕೈಬಿಟ್ಟು 'ಆರೆಸ್ಸೆಸ್‌ ನಾಯಕಿ'ಯ ಹೆಸರು ನಾಮಕರಣ

ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

- Advertisement -
- Advertisement -

ಮಹಾರಾಷ್ಟ್ರದ ವಾರ್ಧಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಹೆಸರನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ‘ರಾಣಿ ಲಕ್ಷ್ಮೀಬಾಯಿ’ಯ ಹೆಸರನ್ನು ಬದಲಾಯಿಸಿ RSSನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಂಸ್ಥಾಪಕಿ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಕೇಸರಿಕರಣದ ಬಗ್ಗೆ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೇಂದ್ರೀಯ ವಿಶ್ವವಿದ್ಯಾನಿಲಯವು ರಾಣಿ ಲಕ್ಷ್ಮಿಬಾಯಿ ಹೆಸರಿನಿಂದ “ರಾಣಿ” ಅನ್ನು ಸದ್ದಿಲ್ಲದೆ ಕೈಬಿಟ್ಟು   “ಕೇಲ್ಕರ್” ಅನ್ನು ಸೇರಿಸಿದೆ. ಈ ವರ್ಷದ ಜನವರಿಯಲ್ಲಿ ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ (MGAHV) ಹೊಸದಾಗಿ ನಿರ್ಮಿಸಲಾದ ಬಾಲಕಿಯರ ಹಾಸ್ಟೆಲ್‌ಗೆ RSSನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂಸ್ಥಾಪಕಿ ಲಕ್ಷ್ಮೀಬಾಯಿ ಕೇಲ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಹೆಸರನ್ನು ಹಾಸ್ಟೆಲ್‌ಗೆ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಇಟ್ಟಿರುವುದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಕೇಂದ್ರೀಯ ವಿಶ್ವವಿದ್ಯಾಲಯದ ಈ ಕ್ರಮಗಳನ್ನು ವಂಚನೆ ಮತ್ತು ರಾಷ್ಟ್ರಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ ಮಹಾನ್ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹೇಳಿದ್ದರು.

ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ(ಯುಜಿಸಿ) ಅನುದಾನದಿಂದ ಹಾಸ್ಟೆಲ್‌ನ್ನು ನಿರ್ಮಿಸಲಾಗಿದೆ. 2017-18 ಮತ್ತು 2018-19ರ MGAHVಯ ವಾರ್ಷಿಕ ವರದಿಗಳು ರಾಣಿ ಲಕ್ಷ್ಮೀಬಾಯಿ ಬಾಲಕಿಯರ ಹಾಸ್ಟೆಲ್ ಅನ್ನು ಸ್ಥಾಪಿಸಲು ವಿಶ್ವವಿದ್ಯಾಲಯವು ಹಣವನ್ನು ಪಡೆದಿದೆ ಎಂದು ಉಲ್ಲೇಖಿಸಿದೆ.

ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಗಿರೀಶ್ವರ್ ಮಿಶ್ರಾ ಮಾತನಾಡಿ, ನಾನು ಉಪಕುಲಪತಿ ಆಗಿದ್ದ ಅವಧಿಯಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ರಾಣಿ ಲಕ್ಷ್ಮೀಬಾಯಿ ಹಾಸ್ಟೆಲ್‌ಗೆ ಅಡಿಪಾಯ ಹಾಕಿದ್ದರು. ಆದರೆ, ಅದರ ನಂತರ ಬೇರೆ ರೀತಿಯ ಬೆಳವಣಿಗೆ ನಡೆದಿದೆ. ವಿಶ್ವವಿದ್ಯಾನಿಲಯವು ಜನವರಿ 23, 2024ರಂದು ಹೊರಡಿಸಿದ ಆದೇಶದಲ್ಲಿ ‘ಲಕ್ಷ್ಮೀಬಾಯಿ ಕೇಲ್ಕರ್’ ಬಾಲಕಿಯರ ಹಾಸ್ಟೆಲ್ ಎಂದು ಹೆಸರಿಸಿದೆ. ಪ್ರೊ.ರಜನೀಶ್ ಕುಮಾರ್ ಶುಕ್ಲಾ ಅವರು ಉಪಕುಲಪತಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಶುಕ್ಲಾ ಆಗಸ್ಟ್ 2023ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಹಾಸ್ಟೆಲ್‌ನ ಆರಂಭಿಕ ಹಂತದಲ್ಲಿ ಇದರ ಹೆಸರನ್ನು ಕಾರ್ಯಕಾರಿ ಮಂಡಳಿ ನಿರ್ಧರಿಸಿತ್ತು. ಸಭಾಂಗಣಗಳು, ಹಾಸ್ಟೆಲ್‌ಗಳು ಮತ್ತು ಇತರ ವಿಶ್ವವಿದ್ಯಾನಿಲಯದ ಕಟ್ಟಡಗಳ ಹೆಸರನ್ನು ನಿರ್ಧರಿಸಲು ಕಾರ್ಯಕಾರಿ ಮಂಡಳಿಗೆ ಅಧಿಕಾರವಿದೆ ಎಂದು ಶುಕ್ಲಾ ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಈ ಕೃತ್ಯವು ವಂಚನೆಗೆ ಸಮಾನವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಂಚಿಸುವ ಮತ್ತು ಅವಮಾನಿಸುವ ಪ್ರಕರಣವಾಗಿದೆ. ಈ ಕುರಿತು ಕೋರ್ಟ್‌ ಮೊರೆ ಹೋಗಬೇಕಿದೆ. ವಿಶ್ವವಿದ್ಯಾನಿಲಯದೊಳಗಿನ ಯಾವುದೇ ಕಟ್ಟಡಕ್ಕೆ ಯಾವುದೇ ಆರೆಸ್ಸೆಸ್‌ ಅಥವಾ ಹಿಂದೂ ಮಹಾಸಭಾದ ನಾಯಕರ ಹೆಸರನ್ನು ಇಡಬಾರದು ಎಂದು ನಾಗಪುರದ ಧರಂಪೆತ್ ವಿಜ್ಞಾನ ಕಾಲೇಜಿನ ಅಧ್ಯಾಪಕ ವೈ.ಜೆ.ರಾಯಲು ಹೇಳಿದ್ದಾರೆ.

ಇದಲ್ಲದೆ ಕ್ಯಾಂಪಸ್‌ನಲ್ಲಿರುವ ಆಸ್ಪತ್ರೆಗೆ 1925ರಲ್ಲಿ ಆರೆಸ್ಸೆಸ್‌ ಆರಂಭಿಸಿದ ಬಲಿರಾಮ್ ಹೆಡ್ಗೆವಾರ್ ಅವರ ಹೆಸರನ್ನಿಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾನಿಲಯವು ತನ್ನ ಜಾತ್ಯತೀತ ಪರಂಪರೆಯಿಂದ ದೂರ ಸರಿಯುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವ್ಯಕ್ತವಾಗಿದೆ.

ಇದನ್ನು ಓದಿ:  ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...