Homeಮುಖಪುಟಕೇಂದ್ರಿಯ ವಿವಿ ಹಾಸ್ಟೆಲ್‌ಗೆ 'ಸ್ವಾತಂತ್ರ ಹೋರಾಟಗಾರ್ತಿ'ಯ ಹೆಸರು ಕೈಬಿಟ್ಟು 'ಆರೆಸ್ಸೆಸ್‌ ನಾಯಕಿ'ಯ ಹೆಸರು ನಾಮಕರಣ

ಕೇಂದ್ರಿಯ ವಿವಿ ಹಾಸ್ಟೆಲ್‌ಗೆ ‘ಸ್ವಾತಂತ್ರ ಹೋರಾಟಗಾರ್ತಿ’ಯ ಹೆಸರು ಕೈಬಿಟ್ಟು ‘ಆರೆಸ್ಸೆಸ್‌ ನಾಯಕಿ’ಯ ಹೆಸರು ನಾಮಕರಣ

- Advertisement -
- Advertisement -

ಮಹಾರಾಷ್ಟ್ರದ ವಾರ್ಧಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಹೆಸರನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ‘ರಾಣಿ ಲಕ್ಷ್ಮೀಬಾಯಿ’ಯ ಹೆಸರನ್ನು ಬದಲಾಯಿಸಿ RSSನ ಮಹಿಳಾ ಅಂಗಸಂಸ್ಥೆಯಾದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಂಸ್ಥಾಪಕಿ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಶಿಕ್ಷಣ ಸಂಸ್ಥೆಯ ಕೇಸರಿಕರಣದ ಬಗ್ಗೆ ಇದೀಗ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೇಂದ್ರೀಯ ವಿಶ್ವವಿದ್ಯಾನಿಲಯವು ರಾಣಿ ಲಕ್ಷ್ಮಿಬಾಯಿ ಹೆಸರಿನಿಂದ “ರಾಣಿ” ಅನ್ನು ಸದ್ದಿಲ್ಲದೆ ಕೈಬಿಟ್ಟು   “ಕೇಲ್ಕರ್” ಅನ್ನು ಸೇರಿಸಿದೆ. ಈ ವರ್ಷದ ಜನವರಿಯಲ್ಲಿ ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ (MGAHV) ಹೊಸದಾಗಿ ನಿರ್ಮಿಸಲಾದ ಬಾಲಕಿಯರ ಹಾಸ್ಟೆಲ್‌ಗೆ RSSನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂಸ್ಥಾಪಕಿ ಲಕ್ಷ್ಮೀಬಾಯಿ ಕೇಲ್ಕರ್ ಅವರ ಹೆಸರನ್ನು ಇಡಲು ನಿರ್ಧರಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಹೆಸರನ್ನು ಹಾಸ್ಟೆಲ್‌ಗೆ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ‘ಲಕ್ಷ್ಮೀಬಾಯಿ ಕೇಲ್ಕರ್’ ಅವರ ಹೆಸರನ್ನು ಇಟ್ಟಿರುವುದಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಕೇಂದ್ರೀಯ ವಿಶ್ವವಿದ್ಯಾಲಯದ ಈ ಕ್ರಮಗಳನ್ನು ವಂಚನೆ ಮತ್ತು ರಾಷ್ಟ್ರಕ್ಕಾಗಿ ತನ್ನ ಪ್ರಾಣವನ್ನು ಅರ್ಪಿಸಿದ ಮಹಾನ್ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹೇಳಿದ್ದರು.

ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ(ಯುಜಿಸಿ) ಅನುದಾನದಿಂದ ಹಾಸ್ಟೆಲ್‌ನ್ನು ನಿರ್ಮಿಸಲಾಗಿದೆ. 2017-18 ಮತ್ತು 2018-19ರ MGAHVಯ ವಾರ್ಷಿಕ ವರದಿಗಳು ರಾಣಿ ಲಕ್ಷ್ಮೀಬಾಯಿ ಬಾಲಕಿಯರ ಹಾಸ್ಟೆಲ್ ಅನ್ನು ಸ್ಥಾಪಿಸಲು ವಿಶ್ವವಿದ್ಯಾಲಯವು ಹಣವನ್ನು ಪಡೆದಿದೆ ಎಂದು ಉಲ್ಲೇಖಿಸಿದೆ.

ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಗಿರೀಶ್ವರ್ ಮಿಶ್ರಾ ಮಾತನಾಡಿ, ನಾನು ಉಪಕುಲಪತಿ ಆಗಿದ್ದ ಅವಧಿಯಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರು ರಾಣಿ ಲಕ್ಷ್ಮೀಬಾಯಿ ಹಾಸ್ಟೆಲ್‌ಗೆ ಅಡಿಪಾಯ ಹಾಕಿದ್ದರು. ಆದರೆ, ಅದರ ನಂತರ ಬೇರೆ ರೀತಿಯ ಬೆಳವಣಿಗೆ ನಡೆದಿದೆ. ವಿಶ್ವವಿದ್ಯಾನಿಲಯವು ಜನವರಿ 23, 2024ರಂದು ಹೊರಡಿಸಿದ ಆದೇಶದಲ್ಲಿ ‘ಲಕ್ಷ್ಮೀಬಾಯಿ ಕೇಲ್ಕರ್’ ಬಾಲಕಿಯರ ಹಾಸ್ಟೆಲ್ ಎಂದು ಹೆಸರಿಸಿದೆ. ಪ್ರೊ.ರಜನೀಶ್ ಕುಮಾರ್ ಶುಕ್ಲಾ ಅವರು ಉಪಕುಲಪತಿಯಾಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಶುಕ್ಲಾ ಆಗಸ್ಟ್ 2023ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಹಾಸ್ಟೆಲ್‌ನ ಆರಂಭಿಕ ಹಂತದಲ್ಲಿ ಇದರ ಹೆಸರನ್ನು ಕಾರ್ಯಕಾರಿ ಮಂಡಳಿ ನಿರ್ಧರಿಸಿತ್ತು. ಸಭಾಂಗಣಗಳು, ಹಾಸ್ಟೆಲ್‌ಗಳು ಮತ್ತು ಇತರ ವಿಶ್ವವಿದ್ಯಾನಿಲಯದ ಕಟ್ಟಡಗಳ ಹೆಸರನ್ನು ನಿರ್ಧರಿಸಲು ಕಾರ್ಯಕಾರಿ ಮಂಡಳಿಗೆ ಅಧಿಕಾರವಿದೆ ಎಂದು ಶುಕ್ಲಾ ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಈ ಕೃತ್ಯವು ವಂಚನೆಗೆ ಸಮಾನವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಂಚಿಸುವ ಮತ್ತು ಅವಮಾನಿಸುವ ಪ್ರಕರಣವಾಗಿದೆ. ಈ ಕುರಿತು ಕೋರ್ಟ್‌ ಮೊರೆ ಹೋಗಬೇಕಿದೆ. ವಿಶ್ವವಿದ್ಯಾನಿಲಯದೊಳಗಿನ ಯಾವುದೇ ಕಟ್ಟಡಕ್ಕೆ ಯಾವುದೇ ಆರೆಸ್ಸೆಸ್‌ ಅಥವಾ ಹಿಂದೂ ಮಹಾಸಭಾದ ನಾಯಕರ ಹೆಸರನ್ನು ಇಡಬಾರದು ಎಂದು ನಾಗಪುರದ ಧರಂಪೆತ್ ವಿಜ್ಞಾನ ಕಾಲೇಜಿನ ಅಧ್ಯಾಪಕ ವೈ.ಜೆ.ರಾಯಲು ಹೇಳಿದ್ದಾರೆ.

ಇದಲ್ಲದೆ ಕ್ಯಾಂಪಸ್‌ನಲ್ಲಿರುವ ಆಸ್ಪತ್ರೆಗೆ 1925ರಲ್ಲಿ ಆರೆಸ್ಸೆಸ್‌ ಆರಂಭಿಸಿದ ಬಲಿರಾಮ್ ಹೆಡ್ಗೆವಾರ್ ಅವರ ಹೆಸರನ್ನಿಡಲು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾನಿಲಯವು ತನ್ನ ಜಾತ್ಯತೀತ ಪರಂಪರೆಯಿಂದ ದೂರ ಸರಿಯುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವ್ಯಕ್ತವಾಗಿದೆ.

ಇದನ್ನು ಓದಿ:  ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...