Homeರಾಜಕೀಯಈ ಅಜಾತಶತ್ರು ತನ್ನ ಹಲ್ಲು, ಉಗುರುಗಳನ್ನು ಧಾರೆಯೆರೆದ ವ್ಯಾಘ್ರನಂತಲ್ಲಾ

ಈ ಅಜಾತಶತ್ರು ತನ್ನ ಹಲ್ಲು, ಉಗುರುಗಳನ್ನು ಧಾರೆಯೆರೆದ ವ್ಯಾಘ್ರನಂತಲ್ಲಾ

- Advertisement -
- Advertisement -

ಅಟಲ್ ಬಿಹಾರಿ ವಾಜಪೇಯಿಯವರು ನಿರ್ಗಮಿಸಿದ್ದಾರೆ. ಅವರು ಮಾತು ನಿಲ್ಲಿಸಿ ಒಂದು ದಶಕವಾಗುತ್ತಾ ಬಂದಿತ್ತು. ಯಾರನ್ನೂ ಗುರುತಿಸಲಾಗದೆ ಮಗುವಿನಂತೆ ನೋಡುತ್ತಿದ್ದರು. ಎಲ್ಲರೂ ಅವರ ಸ್ಥಿತಿ ಕಂಡು ಮರುಗುತ್ತಿದ್ದರು. ಹಾಲಿ ಬಿಜೆಪಿಯ ಹಲವು ಹಿರಿಯರು ವಾಜಪೇಯಿಯಂತಲ್ಲದಿದ್ದರೂ ಒಂಥರದಲ್ಲಿ ಮೌನಿಗಳಾಗಿದ್ದಾರಂತಲ್ಲಾ.
ವಾಜಪೇಯಿಯವರ ನಿಧನಕ್ಕೆ ತಮ್ಮ ಬತ್ತಳಿಕೆಯಲ್ಲಿನ ಎಲ್ಲಾ ಪದಪುಂಜಗಳಿಗೂ ಸಾಣೆಹಿಡಿದು ಝಳಪಿದ ಮಾಧ್ಯಮದ ಬೃಹಸ್ಪತಿಗಳು ಕಡೆಗೆ `ಅಜಾತಶತೃ’ `ಕವಿಹೃದಯಿ’ ಎಂದೆಲ್ಲಾ ಕರೆದು ಸುಸ್ತಾದವಂತಲ್ಲಾ.
ವಾಜಪೇಯಿ ಅಜಾತಶತ್ರು ನಿಜ. ಆದರೂ, ಅವರು ಶತ್ರುಸೈನ್ಯವನ್ನು ಹೊಂದಿದ್ದರು. ಆ ಸೈನ್ಯದ ಸೇನಾಪತಿ ಮಾತ್ರ ಅಡ್ವಾನಿ. ಸದರಿ ಅಡ್ವಾನಿಯವರು ತಮ್ಮ ಗುರುವರ್ಯನನ್ನು ಪ್ರಧಾನಿಯಾಗಿ ಮಾಡಲು ಶ್ರೀ ರಾಮಚಂದ್ರನನ್ನೇ ಬೀದಿಗೆ ತಂದರು. ಅದರಿಂದಾದ ಸಾವುನೋವುಗಳಿಗೆ ಅದ್ವಾನಿಯೇ ಕಾರಣ, ವಾಜಪೇಯಿ ಅಲ್ಲ ಎಂದು ಹೇಗೆ ಹೇಳುವುದು. ಥೂತ್ತೇರಿ..!

*********

ಅಡ್ವಾನಿ ಈ ಅಜಾತಶತ್ರುವನ್ನು ಪ್ರಧಾನಿಯಾಗಿ ಮಾಡಲು ಸೈನ್ಯ ಸಮೇತರಾಗಿ ಹೊರಟಿದ್ದು ಬಾಬರಿ ಮಸೀದಿ ದಿಕ್ಕಿಗೆ. ನೋಡುನೋಡುತ್ತಿದ್ದಂತೆಯೇ ಮಸೀದಿ ನೆಲಸಮವಾಯ್ತು. ಅದಕ್ಕೆ ಸ್ಫೂರ್ತಿ ಅಜಾತಶತೃ ಕವನ. ಏಕೆಂದರೆ ನಮ್ಮ ಅಜಾತಶತ್ರು ಕವಿ ಬೇರೆ ಆಗಿದ್ದರಿಂದ ಭಾಷಣದಲ್ಲಿನ ಅರ್ಧಭಾಗದಲ್ಲಿ ಕವಿಸಾಲುಗಳಿರುತ್ತಿದ್ದವು. ಬಾಬರಿ ಮಸೀದಿ ಉರುಳಿಸುವುದರಲ್ಲಿ ವಾಜಪೇಯಿ ಕಾವ್ಯ ಎಂತಹ ಸ್ಫೂರ್ತಿ ಕೊಟ್ಟಿತ್ತೆಂದರೆ, ಅವರ ಸಾಲುಗಳನ್ನೇ ತರ್ಜುಮೆ ಮಾಡಿಕೊಂಡ ಚೆಡ್ಡಿಗಳು,
ನೀವು ಬಂದರೆ ಜೊತೆಯಾಗಿ,
ನೀವು ಬಾರದಿರೆ ಬಿಟ್ಟು,
ತಡೆಯ ಬಂದರೆ ಹತ್ತಿಕ್ಕಿ,
ಮಂದಿರವಲ್ಲೇ ಕಟ್ಟುವೆವು
ಭಜನೆಗೆ ಅಲ್ಲೇ ಕೂರುವೆವು
ಕೀರ್ಥನೆ ಅಲ್ಲೇ ಹಾಡುವೆವು
ಪಾಕಶಾಲೆ ಕಡೆ ಓಡುವೆವು
ಎಂದು ಕರೆದುಕೊಂಡು ಅದನ್ನೆ ದೇಶಕ್ಕೆಲ್ಲಾ ಮೆಸೇಜು ಮಾಡಿದವಲ್ಲಾ ಥೂತ್ತೇರಿ…!

********

ನಮ್ಮ ಕವಿಹೃದಯದ ಅಜಾತಶತ್ರು ನೆಹರು ಕಾಲದವರು. ರಾಜೀವ್‍ಗಾಂಧಿ ಪ್ರಧಾನಿಯಾದಾಗಲೂ ವಿರೋಧ ಪಕ್ಷದ ನಾಯಕ. ಆಗ ಭಾರತವನ್ನು ತಿರುಗುತ್ತಾ, ನಮ್ಮ ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆಗಳು ತುಂಬಾ ಹೀನ ಸ್ಥಿತಿಯಲ್ಲಿವೆ, ಮಕ್ಕಳಿಗೆ ಅಕ್ಷರ ಬರೆದು ತೋರಲು ಬ್ಲಾಕ್ ಬೋರ್ಡುಗಳಿಲ್ಲ. ಇದು ರಾಜೀವ್‍ಗಾಂಧಿಯಂತಹ ನಾಯಕರಿಗೆ ಗೊತ್ತಾಗುವುದಿಲ್ಲ ಎಂದು ಹೇಳಿದ್ದರು. ನಂತರ ಸದರಿ ಕವಿಯೇ ಪ್ರಧಾನಿಯಾದರು. ಭಾರತದ ಎಲ್ಲಾ ಹಳ್ಳಿಗಳಲ್ಲಿ ಸುಸಜ್ಜಿತ ಪ್ರೈಮರಿ ಶಾಲೆ ರೂಪುಗೊಳ್ಳುತ್ತವೆಂದು ಕಾಯುತ್ತಿರಬೇಕಾದರೆ, ವಾಜಪೇಯಿ ಪ್ರೊಕ್ರಾನ್ ಸಿಡಿಸಿದರು. ಇದರಿಂದ ಶಾಕಾದ ಲಂಕೇಶ್ `ಮಗ ಎಲ್ಲಾ ಬಿಟ್ಟು ಭಂಗಿ ನೆಟ್ಟ’ ಎಂದು ಬರೆದರಂತಲ್ಲಾ, ಥೂತ್ತೇರಿ…!

********

ನಮ್ಮ ಅಜಾತಶತೃ ವಾಜಪೇಯಿಯವರನ್ನ ಕೆಲವು ಟೀಕಾಕಾರರು ಗೋಮುಖವ್ಯಾಘ್ರ ಎಂದು ಬಣ್ಣಿಸಿದ್ದರು. ಆದರೆ ಆ ವ್ಯಾಘ್ರನಿಗೆ ಹಲ್ಲು ಉಗುರುಗಳಿರಲಿಲ್ಲ. ಆದರೂ ಅವುಗಳನ್ನು ಬೇರೆಯವರಿಗೆ ಕರ್ಣನಂತೆ ಧಾರೆಯೆರೆದಿದ್ದರು. ಧಾರೆ ಎರೆಸಿಕೊಂಡ ಅಢ್ವಾನಿ ಅವತಾರ ಅಂತ್ಯಗೊಂಡ ನಂತರ ಪ್ರಖರ ಹಲ್ಲು ಉಗುರುಗಳೊಂದಿಗೆ ಕಂಗೊಳಿಸಿದ ಮೋದಿ ಎಂಬ ವ್ಯಾಘ್ರ ವಾಜಪೇಯಿ, ಅಡ್ವಾನಿಗಳ ಸೃಷ್ಟಿಯೇ ಹೊರತು, ಸ್ವಯಂ ಸೃಷ್ಟಿಯಾದುದಲ್ಲವಂತಲ್ಲಾ. ಈಚೆಗೆ ಪ್ರಾಣಿತಳಿ ಶಾಸ್ತ್ರಜ್ಞರು ಒಂದು ಪ್ರಯೋಗ ಮಾಡಿ, ಸಿಂಹ ಮತ್ತು ಹುಲಿಯನ್ನು ಕೂಡಿಸಿ ವಿಶೇಷ ತಳಿ ತೆಗೆದು ಅದಕ್ಕೆ ಲೈಗರ್ ಎಂದು ನಾಮಕರಣ ಮಾಡಿದ್ದಾರೆ. ಆ ಲೈಗರ್ ನೋಡಿದರೆ ಅದರೊಳಗೆ ಸಿಂಹ ಮತ್ತು ಹುಲಿ ಎರಡೂ ಅಡಗಿರುವುದು ಗೋಚರವಾಗುತ್ತದಂತೆ. ಭಾರತ ಕಂಡ ಅಪರೂಪದ ಪ್ರಧಾನಿ ಮೋದಿಯನ್ನು ನೋಡಿದರೆ ಗೋಮುಖವ್ಯಾಘ್ರನಾದ ವಾಜಪೇಯಿ, ವ್ಯಾಘ್ರಮುಖದ ಗೋವಾದ ಅಡ್ವಾನಿ, ಈ ಇಬ್ಬರ ಚಹರೆಗಳೂ ಗೋಚರಿಸುತ್ತಾ ದೇಶಕ್ಕೆ ಆತಂಕ ಉಂಟಾಗಿದೆಯಂತಲ್ಲಾ ಥೂತ್ತೇರಿ..!

********

ಭಾರತದ ಇಡೀ ಸಂಘಪರಿವಾರ ಮತ್ತದರ ನಿರ್ಮಾತೃಗಳೆಲ್ಲಾ ರಾಮಮಂದಿರದ ಬಗ್ಗೆ ಹೋರಾಡುತ್ತಿರುವುದರ ಹಿಂದೆ ಸಾವಿರಾರು ವರ್ಷಗಳ ಇತಿಹಾಸವಿದೆಯಂತಲ್ಲಾ.
ಆ ಇತಿಹಾಸ ಯಾವುದಪ್ಪಾ ಎಂದರೆ, ಭಾರತವನ್ನೇ ಬಾಳೆಯೆಲೆ ಮಾಡಿಕೊಂಡು ಉಂಡ ಜನ ನೆಲೆಸಿದ್ದುದು ದೇವಸ್ಥಾನದ ಒಳಗೆ. ಆ ದೇವಸ್ಥಾನದಲ್ಲಿ ಹಜಾರ, ಗರ್ಭಗುಡಿ, ಪೌಳಿ ಮತ್ತು ಪಾಕಶಾಲೆಗಳಿದ್ದವು. ಮನೋರಂಜನೆಗೆ ಭಜನೆ ಕೀರ್ತನೆ ಜೊತೆಗೆ ಭರತನಾಟ್ಯಗಳು ಜರುಗುತ್ತಿದ್ದವು. ಕೈ ಸಡಿಲಬಿಟ್ಟು ಭೋಜನ ಭಾರಿಸಿದವರು ಸುಧಾರಿಸಿಕೊಳ್ಳಲು ಒಳ ಜಗಲಿ ಇದ್ದವು. ಹೀಗೆ ಮಂದಿರದೊಳಗೇ ಬದುಕಿದ್ದ ಜನ ಬಿಜೆಪಿ ಪಾರ್ಟಿ ಮಾಡಿಕೊಂಡು ಬೀದಿಗೆ ಬಂದಾಗಲೂ ಅವುಗಳ ಬಾಯಿಂದ ಬರುತ್ತಿರುವ ಮಾತೂ ಕೂಡಾ ಮಂದಿರ ನಿರ್ಮಾಣವೇ ಹೊರತು ಭಾರತ ಇಂದು ಹೆದರಿಸುತ್ತಿರುವ ಸಮಸ್ಯೆಗಳಲ್ಲವಂತಲ್ಲಾ ಥೂತ್ತೇರಿ..!

********

ದಿಢೀರನೆ ಕೇರಳದ ಕಡೆ ಅಪ್ಪಳಿಸಿದ ಜಲಪ್ರಳಯವಾದಂತೆ ಹಾಡುಹಗಲು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಉದ್ಭವಿಸಿದ ಕುಮಾರಣ್ಣ, ಎಮ್ಮೆ ಕರುವಿನ ಮೇಲೆ ಶಾಲು ಹಾಕಿದಂತೆ ವಸ್ತ್ರ ಧರಿಸಿಕೊಂಡು ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ನುಗ್ಗಿ ಹೋಗುತ್ತಿದ್ದಾರಂತಲ್ಲಾ. ಹೊಸದಾಗಿ ಮುಖ್ಯಮಂತ್ರಿಯಾದವರು ಮೊದಲು ಮಾಡುವ ಕೆಲಸವೇನೆಂದರೆ, ಆಯಾ ಜಿಲ್ಲೆಯ ಆಡಳಿತವನ್ನು ಮೀಟಿಂಗ್ ಕರೆದು ಸಲಹೆಕೊಡುವುದು ಹಾಗೂ ತಾರತಮ್ಯದ ಕಾರಣಕ್ಕೆ ರೊಚ್ಚಿಗೆದ್ದ ಜನಗಳ ಬಳಿಗೋಗಿ ಸಾಂತ್ವನ ಹೇಳುವುದು, ಹಾಗೇ ಬಿತ್ತನೆಗೆ ಭೂಮಿ ರೆಡಿಮಾಡಿಕೊಂಡು ಮಳೆ ಬರದೆ ಕಂಗಾಲಾಗಿರುವ ರೈತನ ಬಳಿಗೋಗುವುದು.. ಇದೆಲ್ಲವನ್ನ ಬಿಟ್ಟು ಕುಮಾರಣ್ಣ ಮಂಡ್ಯದಲ್ಲಿ ನಾಲ್ಕು ಪೈರು ನಾಟಿ ಮಾಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಓಡಿಹೋದದ್ದು ನೋಡಿದ ಯಡ್ಡಿ ಪಟಾಲಂ ಕುಂಡಿ ಬಡಿದುಕೊಂಡು ನಕ್ಕವಂತಲ್ಲಾ, ಥೂತ್ತೇರಿ…!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...