Homeರಾಜಕೀಯಈ ಅಜಾತಶತ್ರು ತನ್ನ ಹಲ್ಲು, ಉಗುರುಗಳನ್ನು ಧಾರೆಯೆರೆದ ವ್ಯಾಘ್ರನಂತಲ್ಲಾ

ಈ ಅಜಾತಶತ್ರು ತನ್ನ ಹಲ್ಲು, ಉಗುರುಗಳನ್ನು ಧಾರೆಯೆರೆದ ವ್ಯಾಘ್ರನಂತಲ್ಲಾ

- Advertisement -
- Advertisement -

ಅಟಲ್ ಬಿಹಾರಿ ವಾಜಪೇಯಿಯವರು ನಿರ್ಗಮಿಸಿದ್ದಾರೆ. ಅವರು ಮಾತು ನಿಲ್ಲಿಸಿ ಒಂದು ದಶಕವಾಗುತ್ತಾ ಬಂದಿತ್ತು. ಯಾರನ್ನೂ ಗುರುತಿಸಲಾಗದೆ ಮಗುವಿನಂತೆ ನೋಡುತ್ತಿದ್ದರು. ಎಲ್ಲರೂ ಅವರ ಸ್ಥಿತಿ ಕಂಡು ಮರುಗುತ್ತಿದ್ದರು. ಹಾಲಿ ಬಿಜೆಪಿಯ ಹಲವು ಹಿರಿಯರು ವಾಜಪೇಯಿಯಂತಲ್ಲದಿದ್ದರೂ ಒಂಥರದಲ್ಲಿ ಮೌನಿಗಳಾಗಿದ್ದಾರಂತಲ್ಲಾ.
ವಾಜಪೇಯಿಯವರ ನಿಧನಕ್ಕೆ ತಮ್ಮ ಬತ್ತಳಿಕೆಯಲ್ಲಿನ ಎಲ್ಲಾ ಪದಪುಂಜಗಳಿಗೂ ಸಾಣೆಹಿಡಿದು ಝಳಪಿದ ಮಾಧ್ಯಮದ ಬೃಹಸ್ಪತಿಗಳು ಕಡೆಗೆ `ಅಜಾತಶತೃ’ `ಕವಿಹೃದಯಿ’ ಎಂದೆಲ್ಲಾ ಕರೆದು ಸುಸ್ತಾದವಂತಲ್ಲಾ.
ವಾಜಪೇಯಿ ಅಜಾತಶತ್ರು ನಿಜ. ಆದರೂ, ಅವರು ಶತ್ರುಸೈನ್ಯವನ್ನು ಹೊಂದಿದ್ದರು. ಆ ಸೈನ್ಯದ ಸೇನಾಪತಿ ಮಾತ್ರ ಅಡ್ವಾನಿ. ಸದರಿ ಅಡ್ವಾನಿಯವರು ತಮ್ಮ ಗುರುವರ್ಯನನ್ನು ಪ್ರಧಾನಿಯಾಗಿ ಮಾಡಲು ಶ್ರೀ ರಾಮಚಂದ್ರನನ್ನೇ ಬೀದಿಗೆ ತಂದರು. ಅದರಿಂದಾದ ಸಾವುನೋವುಗಳಿಗೆ ಅದ್ವಾನಿಯೇ ಕಾರಣ, ವಾಜಪೇಯಿ ಅಲ್ಲ ಎಂದು ಹೇಗೆ ಹೇಳುವುದು. ಥೂತ್ತೇರಿ..!

*********

ಅಡ್ವಾನಿ ಈ ಅಜಾತಶತ್ರುವನ್ನು ಪ್ರಧಾನಿಯಾಗಿ ಮಾಡಲು ಸೈನ್ಯ ಸಮೇತರಾಗಿ ಹೊರಟಿದ್ದು ಬಾಬರಿ ಮಸೀದಿ ದಿಕ್ಕಿಗೆ. ನೋಡುನೋಡುತ್ತಿದ್ದಂತೆಯೇ ಮಸೀದಿ ನೆಲಸಮವಾಯ್ತು. ಅದಕ್ಕೆ ಸ್ಫೂರ್ತಿ ಅಜಾತಶತೃ ಕವನ. ಏಕೆಂದರೆ ನಮ್ಮ ಅಜಾತಶತ್ರು ಕವಿ ಬೇರೆ ಆಗಿದ್ದರಿಂದ ಭಾಷಣದಲ್ಲಿನ ಅರ್ಧಭಾಗದಲ್ಲಿ ಕವಿಸಾಲುಗಳಿರುತ್ತಿದ್ದವು. ಬಾಬರಿ ಮಸೀದಿ ಉರುಳಿಸುವುದರಲ್ಲಿ ವಾಜಪೇಯಿ ಕಾವ್ಯ ಎಂತಹ ಸ್ಫೂರ್ತಿ ಕೊಟ್ಟಿತ್ತೆಂದರೆ, ಅವರ ಸಾಲುಗಳನ್ನೇ ತರ್ಜುಮೆ ಮಾಡಿಕೊಂಡ ಚೆಡ್ಡಿಗಳು,
ನೀವು ಬಂದರೆ ಜೊತೆಯಾಗಿ,
ನೀವು ಬಾರದಿರೆ ಬಿಟ್ಟು,
ತಡೆಯ ಬಂದರೆ ಹತ್ತಿಕ್ಕಿ,
ಮಂದಿರವಲ್ಲೇ ಕಟ್ಟುವೆವು
ಭಜನೆಗೆ ಅಲ್ಲೇ ಕೂರುವೆವು
ಕೀರ್ಥನೆ ಅಲ್ಲೇ ಹಾಡುವೆವು
ಪಾಕಶಾಲೆ ಕಡೆ ಓಡುವೆವು
ಎಂದು ಕರೆದುಕೊಂಡು ಅದನ್ನೆ ದೇಶಕ್ಕೆಲ್ಲಾ ಮೆಸೇಜು ಮಾಡಿದವಲ್ಲಾ ಥೂತ್ತೇರಿ…!

********

ನಮ್ಮ ಕವಿಹೃದಯದ ಅಜಾತಶತ್ರು ನೆಹರು ಕಾಲದವರು. ರಾಜೀವ್‍ಗಾಂಧಿ ಪ್ರಧಾನಿಯಾದಾಗಲೂ ವಿರೋಧ ಪಕ್ಷದ ನಾಯಕ. ಆಗ ಭಾರತವನ್ನು ತಿರುಗುತ್ತಾ, ನಮ್ಮ ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆಗಳು ತುಂಬಾ ಹೀನ ಸ್ಥಿತಿಯಲ್ಲಿವೆ, ಮಕ್ಕಳಿಗೆ ಅಕ್ಷರ ಬರೆದು ತೋರಲು ಬ್ಲಾಕ್ ಬೋರ್ಡುಗಳಿಲ್ಲ. ಇದು ರಾಜೀವ್‍ಗಾಂಧಿಯಂತಹ ನಾಯಕರಿಗೆ ಗೊತ್ತಾಗುವುದಿಲ್ಲ ಎಂದು ಹೇಳಿದ್ದರು. ನಂತರ ಸದರಿ ಕವಿಯೇ ಪ್ರಧಾನಿಯಾದರು. ಭಾರತದ ಎಲ್ಲಾ ಹಳ್ಳಿಗಳಲ್ಲಿ ಸುಸಜ್ಜಿತ ಪ್ರೈಮರಿ ಶಾಲೆ ರೂಪುಗೊಳ್ಳುತ್ತವೆಂದು ಕಾಯುತ್ತಿರಬೇಕಾದರೆ, ವಾಜಪೇಯಿ ಪ್ರೊಕ್ರಾನ್ ಸಿಡಿಸಿದರು. ಇದರಿಂದ ಶಾಕಾದ ಲಂಕೇಶ್ `ಮಗ ಎಲ್ಲಾ ಬಿಟ್ಟು ಭಂಗಿ ನೆಟ್ಟ’ ಎಂದು ಬರೆದರಂತಲ್ಲಾ, ಥೂತ್ತೇರಿ…!

********

ನಮ್ಮ ಅಜಾತಶತೃ ವಾಜಪೇಯಿಯವರನ್ನ ಕೆಲವು ಟೀಕಾಕಾರರು ಗೋಮುಖವ್ಯಾಘ್ರ ಎಂದು ಬಣ್ಣಿಸಿದ್ದರು. ಆದರೆ ಆ ವ್ಯಾಘ್ರನಿಗೆ ಹಲ್ಲು ಉಗುರುಗಳಿರಲಿಲ್ಲ. ಆದರೂ ಅವುಗಳನ್ನು ಬೇರೆಯವರಿಗೆ ಕರ್ಣನಂತೆ ಧಾರೆಯೆರೆದಿದ್ದರು. ಧಾರೆ ಎರೆಸಿಕೊಂಡ ಅಢ್ವಾನಿ ಅವತಾರ ಅಂತ್ಯಗೊಂಡ ನಂತರ ಪ್ರಖರ ಹಲ್ಲು ಉಗುರುಗಳೊಂದಿಗೆ ಕಂಗೊಳಿಸಿದ ಮೋದಿ ಎಂಬ ವ್ಯಾಘ್ರ ವಾಜಪೇಯಿ, ಅಡ್ವಾನಿಗಳ ಸೃಷ್ಟಿಯೇ ಹೊರತು, ಸ್ವಯಂ ಸೃಷ್ಟಿಯಾದುದಲ್ಲವಂತಲ್ಲಾ. ಈಚೆಗೆ ಪ್ರಾಣಿತಳಿ ಶಾಸ್ತ್ರಜ್ಞರು ಒಂದು ಪ್ರಯೋಗ ಮಾಡಿ, ಸಿಂಹ ಮತ್ತು ಹುಲಿಯನ್ನು ಕೂಡಿಸಿ ವಿಶೇಷ ತಳಿ ತೆಗೆದು ಅದಕ್ಕೆ ಲೈಗರ್ ಎಂದು ನಾಮಕರಣ ಮಾಡಿದ್ದಾರೆ. ಆ ಲೈಗರ್ ನೋಡಿದರೆ ಅದರೊಳಗೆ ಸಿಂಹ ಮತ್ತು ಹುಲಿ ಎರಡೂ ಅಡಗಿರುವುದು ಗೋಚರವಾಗುತ್ತದಂತೆ. ಭಾರತ ಕಂಡ ಅಪರೂಪದ ಪ್ರಧಾನಿ ಮೋದಿಯನ್ನು ನೋಡಿದರೆ ಗೋಮುಖವ್ಯಾಘ್ರನಾದ ವಾಜಪೇಯಿ, ವ್ಯಾಘ್ರಮುಖದ ಗೋವಾದ ಅಡ್ವಾನಿ, ಈ ಇಬ್ಬರ ಚಹರೆಗಳೂ ಗೋಚರಿಸುತ್ತಾ ದೇಶಕ್ಕೆ ಆತಂಕ ಉಂಟಾಗಿದೆಯಂತಲ್ಲಾ ಥೂತ್ತೇರಿ..!

********

ಭಾರತದ ಇಡೀ ಸಂಘಪರಿವಾರ ಮತ್ತದರ ನಿರ್ಮಾತೃಗಳೆಲ್ಲಾ ರಾಮಮಂದಿರದ ಬಗ್ಗೆ ಹೋರಾಡುತ್ತಿರುವುದರ ಹಿಂದೆ ಸಾವಿರಾರು ವರ್ಷಗಳ ಇತಿಹಾಸವಿದೆಯಂತಲ್ಲಾ.
ಆ ಇತಿಹಾಸ ಯಾವುದಪ್ಪಾ ಎಂದರೆ, ಭಾರತವನ್ನೇ ಬಾಳೆಯೆಲೆ ಮಾಡಿಕೊಂಡು ಉಂಡ ಜನ ನೆಲೆಸಿದ್ದುದು ದೇವಸ್ಥಾನದ ಒಳಗೆ. ಆ ದೇವಸ್ಥಾನದಲ್ಲಿ ಹಜಾರ, ಗರ್ಭಗುಡಿ, ಪೌಳಿ ಮತ್ತು ಪಾಕಶಾಲೆಗಳಿದ್ದವು. ಮನೋರಂಜನೆಗೆ ಭಜನೆ ಕೀರ್ತನೆ ಜೊತೆಗೆ ಭರತನಾಟ್ಯಗಳು ಜರುಗುತ್ತಿದ್ದವು. ಕೈ ಸಡಿಲಬಿಟ್ಟು ಭೋಜನ ಭಾರಿಸಿದವರು ಸುಧಾರಿಸಿಕೊಳ್ಳಲು ಒಳ ಜಗಲಿ ಇದ್ದವು. ಹೀಗೆ ಮಂದಿರದೊಳಗೇ ಬದುಕಿದ್ದ ಜನ ಬಿಜೆಪಿ ಪಾರ್ಟಿ ಮಾಡಿಕೊಂಡು ಬೀದಿಗೆ ಬಂದಾಗಲೂ ಅವುಗಳ ಬಾಯಿಂದ ಬರುತ್ತಿರುವ ಮಾತೂ ಕೂಡಾ ಮಂದಿರ ನಿರ್ಮಾಣವೇ ಹೊರತು ಭಾರತ ಇಂದು ಹೆದರಿಸುತ್ತಿರುವ ಸಮಸ್ಯೆಗಳಲ್ಲವಂತಲ್ಲಾ ಥೂತ್ತೇರಿ..!

********

ದಿಢೀರನೆ ಕೇರಳದ ಕಡೆ ಅಪ್ಪಳಿಸಿದ ಜಲಪ್ರಳಯವಾದಂತೆ ಹಾಡುಹಗಲು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಉದ್ಭವಿಸಿದ ಕುಮಾರಣ್ಣ, ಎಮ್ಮೆ ಕರುವಿನ ಮೇಲೆ ಶಾಲು ಹಾಕಿದಂತೆ ವಸ್ತ್ರ ಧರಿಸಿಕೊಂಡು ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ನುಗ್ಗಿ ಹೋಗುತ್ತಿದ್ದಾರಂತಲ್ಲಾ. ಹೊಸದಾಗಿ ಮುಖ್ಯಮಂತ್ರಿಯಾದವರು ಮೊದಲು ಮಾಡುವ ಕೆಲಸವೇನೆಂದರೆ, ಆಯಾ ಜಿಲ್ಲೆಯ ಆಡಳಿತವನ್ನು ಮೀಟಿಂಗ್ ಕರೆದು ಸಲಹೆಕೊಡುವುದು ಹಾಗೂ ತಾರತಮ್ಯದ ಕಾರಣಕ್ಕೆ ರೊಚ್ಚಿಗೆದ್ದ ಜನಗಳ ಬಳಿಗೋಗಿ ಸಾಂತ್ವನ ಹೇಳುವುದು, ಹಾಗೇ ಬಿತ್ತನೆಗೆ ಭೂಮಿ ರೆಡಿಮಾಡಿಕೊಂಡು ಮಳೆ ಬರದೆ ಕಂಗಾಲಾಗಿರುವ ರೈತನ ಬಳಿಗೋಗುವುದು.. ಇದೆಲ್ಲವನ್ನ ಬಿಟ್ಟು ಕುಮಾರಣ್ಣ ಮಂಡ್ಯದಲ್ಲಿ ನಾಲ್ಕು ಪೈರು ನಾಟಿ ಮಾಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಓಡಿಹೋದದ್ದು ನೋಡಿದ ಯಡ್ಡಿ ಪಟಾಲಂ ಕುಂಡಿ ಬಡಿದುಕೊಂಡು ನಕ್ಕವಂತಲ್ಲಾ, ಥೂತ್ತೇರಿ…!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...