Homeರಾಜಕೀಯಈ ಅಜಾತಶತ್ರು ತನ್ನ ಹಲ್ಲು, ಉಗುರುಗಳನ್ನು ಧಾರೆಯೆರೆದ ವ್ಯಾಘ್ರನಂತಲ್ಲಾ

ಈ ಅಜಾತಶತ್ರು ತನ್ನ ಹಲ್ಲು, ಉಗುರುಗಳನ್ನು ಧಾರೆಯೆರೆದ ವ್ಯಾಘ್ರನಂತಲ್ಲಾ

- Advertisement -
- Advertisement -

ಅಟಲ್ ಬಿಹಾರಿ ವಾಜಪೇಯಿಯವರು ನಿರ್ಗಮಿಸಿದ್ದಾರೆ. ಅವರು ಮಾತು ನಿಲ್ಲಿಸಿ ಒಂದು ದಶಕವಾಗುತ್ತಾ ಬಂದಿತ್ತು. ಯಾರನ್ನೂ ಗುರುತಿಸಲಾಗದೆ ಮಗುವಿನಂತೆ ನೋಡುತ್ತಿದ್ದರು. ಎಲ್ಲರೂ ಅವರ ಸ್ಥಿತಿ ಕಂಡು ಮರುಗುತ್ತಿದ್ದರು. ಹಾಲಿ ಬಿಜೆಪಿಯ ಹಲವು ಹಿರಿಯರು ವಾಜಪೇಯಿಯಂತಲ್ಲದಿದ್ದರೂ ಒಂಥರದಲ್ಲಿ ಮೌನಿಗಳಾಗಿದ್ದಾರಂತಲ್ಲಾ.
ವಾಜಪೇಯಿಯವರ ನಿಧನಕ್ಕೆ ತಮ್ಮ ಬತ್ತಳಿಕೆಯಲ್ಲಿನ ಎಲ್ಲಾ ಪದಪುಂಜಗಳಿಗೂ ಸಾಣೆಹಿಡಿದು ಝಳಪಿದ ಮಾಧ್ಯಮದ ಬೃಹಸ್ಪತಿಗಳು ಕಡೆಗೆ `ಅಜಾತಶತೃ’ `ಕವಿಹೃದಯಿ’ ಎಂದೆಲ್ಲಾ ಕರೆದು ಸುಸ್ತಾದವಂತಲ್ಲಾ.
ವಾಜಪೇಯಿ ಅಜಾತಶತ್ರು ನಿಜ. ಆದರೂ, ಅವರು ಶತ್ರುಸೈನ್ಯವನ್ನು ಹೊಂದಿದ್ದರು. ಆ ಸೈನ್ಯದ ಸೇನಾಪತಿ ಮಾತ್ರ ಅಡ್ವಾನಿ. ಸದರಿ ಅಡ್ವಾನಿಯವರು ತಮ್ಮ ಗುರುವರ್ಯನನ್ನು ಪ್ರಧಾನಿಯಾಗಿ ಮಾಡಲು ಶ್ರೀ ರಾಮಚಂದ್ರನನ್ನೇ ಬೀದಿಗೆ ತಂದರು. ಅದರಿಂದಾದ ಸಾವುನೋವುಗಳಿಗೆ ಅದ್ವಾನಿಯೇ ಕಾರಣ, ವಾಜಪೇಯಿ ಅಲ್ಲ ಎಂದು ಹೇಗೆ ಹೇಳುವುದು. ಥೂತ್ತೇರಿ..!

*********

ಅಡ್ವಾನಿ ಈ ಅಜಾತಶತ್ರುವನ್ನು ಪ್ರಧಾನಿಯಾಗಿ ಮಾಡಲು ಸೈನ್ಯ ಸಮೇತರಾಗಿ ಹೊರಟಿದ್ದು ಬಾಬರಿ ಮಸೀದಿ ದಿಕ್ಕಿಗೆ. ನೋಡುನೋಡುತ್ತಿದ್ದಂತೆಯೇ ಮಸೀದಿ ನೆಲಸಮವಾಯ್ತು. ಅದಕ್ಕೆ ಸ್ಫೂರ್ತಿ ಅಜಾತಶತೃ ಕವನ. ಏಕೆಂದರೆ ನಮ್ಮ ಅಜಾತಶತ್ರು ಕವಿ ಬೇರೆ ಆಗಿದ್ದರಿಂದ ಭಾಷಣದಲ್ಲಿನ ಅರ್ಧಭಾಗದಲ್ಲಿ ಕವಿಸಾಲುಗಳಿರುತ್ತಿದ್ದವು. ಬಾಬರಿ ಮಸೀದಿ ಉರುಳಿಸುವುದರಲ್ಲಿ ವಾಜಪೇಯಿ ಕಾವ್ಯ ಎಂತಹ ಸ್ಫೂರ್ತಿ ಕೊಟ್ಟಿತ್ತೆಂದರೆ, ಅವರ ಸಾಲುಗಳನ್ನೇ ತರ್ಜುಮೆ ಮಾಡಿಕೊಂಡ ಚೆಡ್ಡಿಗಳು,
ನೀವು ಬಂದರೆ ಜೊತೆಯಾಗಿ,
ನೀವು ಬಾರದಿರೆ ಬಿಟ್ಟು,
ತಡೆಯ ಬಂದರೆ ಹತ್ತಿಕ್ಕಿ,
ಮಂದಿರವಲ್ಲೇ ಕಟ್ಟುವೆವು
ಭಜನೆಗೆ ಅಲ್ಲೇ ಕೂರುವೆವು
ಕೀರ್ಥನೆ ಅಲ್ಲೇ ಹಾಡುವೆವು
ಪಾಕಶಾಲೆ ಕಡೆ ಓಡುವೆವು
ಎಂದು ಕರೆದುಕೊಂಡು ಅದನ್ನೆ ದೇಶಕ್ಕೆಲ್ಲಾ ಮೆಸೇಜು ಮಾಡಿದವಲ್ಲಾ ಥೂತ್ತೇರಿ…!

********

ನಮ್ಮ ಕವಿಹೃದಯದ ಅಜಾತಶತ್ರು ನೆಹರು ಕಾಲದವರು. ರಾಜೀವ್‍ಗಾಂಧಿ ಪ್ರಧಾನಿಯಾದಾಗಲೂ ವಿರೋಧ ಪಕ್ಷದ ನಾಯಕ. ಆಗ ಭಾರತವನ್ನು ತಿರುಗುತ್ತಾ, ನಮ್ಮ ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆಗಳು ತುಂಬಾ ಹೀನ ಸ್ಥಿತಿಯಲ್ಲಿವೆ, ಮಕ್ಕಳಿಗೆ ಅಕ್ಷರ ಬರೆದು ತೋರಲು ಬ್ಲಾಕ್ ಬೋರ್ಡುಗಳಿಲ್ಲ. ಇದು ರಾಜೀವ್‍ಗಾಂಧಿಯಂತಹ ನಾಯಕರಿಗೆ ಗೊತ್ತಾಗುವುದಿಲ್ಲ ಎಂದು ಹೇಳಿದ್ದರು. ನಂತರ ಸದರಿ ಕವಿಯೇ ಪ್ರಧಾನಿಯಾದರು. ಭಾರತದ ಎಲ್ಲಾ ಹಳ್ಳಿಗಳಲ್ಲಿ ಸುಸಜ್ಜಿತ ಪ್ರೈಮರಿ ಶಾಲೆ ರೂಪುಗೊಳ್ಳುತ್ತವೆಂದು ಕಾಯುತ್ತಿರಬೇಕಾದರೆ, ವಾಜಪೇಯಿ ಪ್ರೊಕ್ರಾನ್ ಸಿಡಿಸಿದರು. ಇದರಿಂದ ಶಾಕಾದ ಲಂಕೇಶ್ `ಮಗ ಎಲ್ಲಾ ಬಿಟ್ಟು ಭಂಗಿ ನೆಟ್ಟ’ ಎಂದು ಬರೆದರಂತಲ್ಲಾ, ಥೂತ್ತೇರಿ…!

********

ನಮ್ಮ ಅಜಾತಶತೃ ವಾಜಪೇಯಿಯವರನ್ನ ಕೆಲವು ಟೀಕಾಕಾರರು ಗೋಮುಖವ್ಯಾಘ್ರ ಎಂದು ಬಣ್ಣಿಸಿದ್ದರು. ಆದರೆ ಆ ವ್ಯಾಘ್ರನಿಗೆ ಹಲ್ಲು ಉಗುರುಗಳಿರಲಿಲ್ಲ. ಆದರೂ ಅವುಗಳನ್ನು ಬೇರೆಯವರಿಗೆ ಕರ್ಣನಂತೆ ಧಾರೆಯೆರೆದಿದ್ದರು. ಧಾರೆ ಎರೆಸಿಕೊಂಡ ಅಢ್ವಾನಿ ಅವತಾರ ಅಂತ್ಯಗೊಂಡ ನಂತರ ಪ್ರಖರ ಹಲ್ಲು ಉಗುರುಗಳೊಂದಿಗೆ ಕಂಗೊಳಿಸಿದ ಮೋದಿ ಎಂಬ ವ್ಯಾಘ್ರ ವಾಜಪೇಯಿ, ಅಡ್ವಾನಿಗಳ ಸೃಷ್ಟಿಯೇ ಹೊರತು, ಸ್ವಯಂ ಸೃಷ್ಟಿಯಾದುದಲ್ಲವಂತಲ್ಲಾ. ಈಚೆಗೆ ಪ್ರಾಣಿತಳಿ ಶಾಸ್ತ್ರಜ್ಞರು ಒಂದು ಪ್ರಯೋಗ ಮಾಡಿ, ಸಿಂಹ ಮತ್ತು ಹುಲಿಯನ್ನು ಕೂಡಿಸಿ ವಿಶೇಷ ತಳಿ ತೆಗೆದು ಅದಕ್ಕೆ ಲೈಗರ್ ಎಂದು ನಾಮಕರಣ ಮಾಡಿದ್ದಾರೆ. ಆ ಲೈಗರ್ ನೋಡಿದರೆ ಅದರೊಳಗೆ ಸಿಂಹ ಮತ್ತು ಹುಲಿ ಎರಡೂ ಅಡಗಿರುವುದು ಗೋಚರವಾಗುತ್ತದಂತೆ. ಭಾರತ ಕಂಡ ಅಪರೂಪದ ಪ್ರಧಾನಿ ಮೋದಿಯನ್ನು ನೋಡಿದರೆ ಗೋಮುಖವ್ಯಾಘ್ರನಾದ ವಾಜಪೇಯಿ, ವ್ಯಾಘ್ರಮುಖದ ಗೋವಾದ ಅಡ್ವಾನಿ, ಈ ಇಬ್ಬರ ಚಹರೆಗಳೂ ಗೋಚರಿಸುತ್ತಾ ದೇಶಕ್ಕೆ ಆತಂಕ ಉಂಟಾಗಿದೆಯಂತಲ್ಲಾ ಥೂತ್ತೇರಿ..!

********

ಭಾರತದ ಇಡೀ ಸಂಘಪರಿವಾರ ಮತ್ತದರ ನಿರ್ಮಾತೃಗಳೆಲ್ಲಾ ರಾಮಮಂದಿರದ ಬಗ್ಗೆ ಹೋರಾಡುತ್ತಿರುವುದರ ಹಿಂದೆ ಸಾವಿರಾರು ವರ್ಷಗಳ ಇತಿಹಾಸವಿದೆಯಂತಲ್ಲಾ.
ಆ ಇತಿಹಾಸ ಯಾವುದಪ್ಪಾ ಎಂದರೆ, ಭಾರತವನ್ನೇ ಬಾಳೆಯೆಲೆ ಮಾಡಿಕೊಂಡು ಉಂಡ ಜನ ನೆಲೆಸಿದ್ದುದು ದೇವಸ್ಥಾನದ ಒಳಗೆ. ಆ ದೇವಸ್ಥಾನದಲ್ಲಿ ಹಜಾರ, ಗರ್ಭಗುಡಿ, ಪೌಳಿ ಮತ್ತು ಪಾಕಶಾಲೆಗಳಿದ್ದವು. ಮನೋರಂಜನೆಗೆ ಭಜನೆ ಕೀರ್ತನೆ ಜೊತೆಗೆ ಭರತನಾಟ್ಯಗಳು ಜರುಗುತ್ತಿದ್ದವು. ಕೈ ಸಡಿಲಬಿಟ್ಟು ಭೋಜನ ಭಾರಿಸಿದವರು ಸುಧಾರಿಸಿಕೊಳ್ಳಲು ಒಳ ಜಗಲಿ ಇದ್ದವು. ಹೀಗೆ ಮಂದಿರದೊಳಗೇ ಬದುಕಿದ್ದ ಜನ ಬಿಜೆಪಿ ಪಾರ್ಟಿ ಮಾಡಿಕೊಂಡು ಬೀದಿಗೆ ಬಂದಾಗಲೂ ಅವುಗಳ ಬಾಯಿಂದ ಬರುತ್ತಿರುವ ಮಾತೂ ಕೂಡಾ ಮಂದಿರ ನಿರ್ಮಾಣವೇ ಹೊರತು ಭಾರತ ಇಂದು ಹೆದರಿಸುತ್ತಿರುವ ಸಮಸ್ಯೆಗಳಲ್ಲವಂತಲ್ಲಾ ಥೂತ್ತೇರಿ..!

********

ದಿಢೀರನೆ ಕೇರಳದ ಕಡೆ ಅಪ್ಪಳಿಸಿದ ಜಲಪ್ರಳಯವಾದಂತೆ ಹಾಡುಹಗಲು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಉದ್ಭವಿಸಿದ ಕುಮಾರಣ್ಣ, ಎಮ್ಮೆ ಕರುವಿನ ಮೇಲೆ ಶಾಲು ಹಾಕಿದಂತೆ ವಸ್ತ್ರ ಧರಿಸಿಕೊಂಡು ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ನುಗ್ಗಿ ಹೋಗುತ್ತಿದ್ದಾರಂತಲ್ಲಾ. ಹೊಸದಾಗಿ ಮುಖ್ಯಮಂತ್ರಿಯಾದವರು ಮೊದಲು ಮಾಡುವ ಕೆಲಸವೇನೆಂದರೆ, ಆಯಾ ಜಿಲ್ಲೆಯ ಆಡಳಿತವನ್ನು ಮೀಟಿಂಗ್ ಕರೆದು ಸಲಹೆಕೊಡುವುದು ಹಾಗೂ ತಾರತಮ್ಯದ ಕಾರಣಕ್ಕೆ ರೊಚ್ಚಿಗೆದ್ದ ಜನಗಳ ಬಳಿಗೋಗಿ ಸಾಂತ್ವನ ಹೇಳುವುದು, ಹಾಗೇ ಬಿತ್ತನೆಗೆ ಭೂಮಿ ರೆಡಿಮಾಡಿಕೊಂಡು ಮಳೆ ಬರದೆ ಕಂಗಾಲಾಗಿರುವ ರೈತನ ಬಳಿಗೋಗುವುದು.. ಇದೆಲ್ಲವನ್ನ ಬಿಟ್ಟು ಕುಮಾರಣ್ಣ ಮಂಡ್ಯದಲ್ಲಿ ನಾಲ್ಕು ಪೈರು ನಾಟಿ ಮಾಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಓಡಿಹೋದದ್ದು ನೋಡಿದ ಯಡ್ಡಿ ಪಟಾಲಂ ಕುಂಡಿ ಬಡಿದುಕೊಂಡು ನಕ್ಕವಂತಲ್ಲಾ, ಥೂತ್ತೇರಿ…!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...