Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...