Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...