Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...