Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...