Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...