Homeಮುಖಪುಟಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ.

- Advertisement -
- Advertisement -

ಭಾರತದ ಖ್ಯಾತ ಓಟಗಾರ್ತಿ ಹಿಮಾ ದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (DSP) ನೇಮಕ ಮಾಡಿದೆ. ಪ್ರಸ್ತುತ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಬಯಸುತ್ತಿರುವ ಹಿಮಾ ದಾಸ್ ಅದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ತನ್ನನ್ನು DSP ಆಗಿ ನೇಮಿಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೋನೊವಾಲ್ ಅವರಿಗೆ ಹಿಮಾ ಧನ್ಯವಾದ ಅರ್ಪಿಸಿದ್ದು, ಇದು ತನ್ನನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಹಿಮಾ ದಾಸ್ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲು ನಿರ್ಧರಿಸಿದೆ ಎಂದು ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ವರ್ಷವೇ ಘೋಷಿಸಿದ್ದರು. 2020-21ರ ಹಣಕಾಸು ವರ್ಷದ ರಾಜ್ಯ ಬಜೆಟ್ ಅನ್ನು ಶುಕ್ರವಾರ ಮಂಡಿಸುವಾಗ ಈ ಘೋಷಣೆ ಮಾಡಿದ್ದರು. ಇಂದು ಅಧಿಕೃತವಾಗಿ ನೇಮಿಸಲಾಗಿದೆ.

ಧಿಂಗ್ ಎಕ್ಸ್‌ಪ್ರೆಸ್ ಎಂದು ಖ್ಯಾತಿಯ ಅಸ್ಸಾಂನ 21 ವರ್ಷದ ಹಿಮಾ ದಾಸ್ ಪ್ರಸ್ತುತ ಎನ್‌ಐಎಸ್-ಪಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಗುರಿಯಲ್ಲಿ ತಲ್ಲೀನಳಾಗಿದ್ದಾಳೆ.

ಹಿಮಾ ದಾಸ್ ಹಿನ್ನೆಲೆ

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಅಥ್ಲೆಟಿಕ್ಸ್‌ನಲ್ಲಿ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಕೊರೊನಾಕ್ಕೂ ಮೊದಲು ಯೂರೋಪ್ ನಲ್ಲಿ ಹಿಮಾ ದಾಸ್ ರವರ ಸಾಧನೆಯ ವಿವರ ಹೀಗಿದೆ.

ಜುಲೈ 02 ರಂದು ಪೋಲಾಂಡ್ ನಲ್ಲಿ ನಡೆದ ಪ್ರೊಜ್ನಾನ್ ಗ್ರ್ಯಾನ್ ಫ್ರಿ ರೇಸ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಗೆಲುವು

ಜುಲೈ 07 ರಂದು ಪೋಲಾಂಡ್ ನಲ್ಲಿ ನಡೆದ ಕುಂಟೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಸಾಧನೆ

ಜುಲೈ 13 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ಕ್ಲಾಡೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಪದಕ

ಜುಲೈ 17 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ತಬೂರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಗೆಲುವು

ಜುಲೈ 20 ರಂದು ಪ್ರಾಗ್ ನಲ್ಲಿ ನಡೆದ ನೊವಾ ಮೆಸ್ಟೊ ಅಥ್ಲೆಟಿಕ್ ಕೂಟದಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಆಗಸ್ಟ್ 19 ರಂದು ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ ಮಿಟಿಂಗ್ ರೇಟರ್ ಸ್ಪರ್ಧೆಯ 300 ಮೀಟರ್ ಓಟದ ವಿಭಾಗದಲ್ಲಿ ಅವರು ಚಿನ್ನ ಗೆದ್ದಿದ್ದಾರೆ.


ಇದನ್ನೂ ಓದಿ: ಭತ್ತದ ಗದ್ದೆಯಿಂದ ವಿಶ್ವ ಅಥ್ಲೆಟಿಕ್ಸ್‌ವರೆಗೆ ಓಡಿದ ಚಿನ್ನದ ಹುಡುಗಿ ಹಿಮಾ ದಾಸ್ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...