Homeಮುಖಪುಟಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ.

- Advertisement -
- Advertisement -

ಭಾರತದ ಖ್ಯಾತ ಓಟಗಾರ್ತಿ ಹಿಮಾ ದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (DSP) ನೇಮಕ ಮಾಡಿದೆ. ಪ್ರಸ್ತುತ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಬಯಸುತ್ತಿರುವ ಹಿಮಾ ದಾಸ್ ಅದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ತನ್ನನ್ನು DSP ಆಗಿ ನೇಮಿಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೋನೊವಾಲ್ ಅವರಿಗೆ ಹಿಮಾ ಧನ್ಯವಾದ ಅರ್ಪಿಸಿದ್ದು, ಇದು ತನ್ನನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಹಿಮಾ ದಾಸ್ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲು ನಿರ್ಧರಿಸಿದೆ ಎಂದು ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ವರ್ಷವೇ ಘೋಷಿಸಿದ್ದರು. 2020-21ರ ಹಣಕಾಸು ವರ್ಷದ ರಾಜ್ಯ ಬಜೆಟ್ ಅನ್ನು ಶುಕ್ರವಾರ ಮಂಡಿಸುವಾಗ ಈ ಘೋಷಣೆ ಮಾಡಿದ್ದರು. ಇಂದು ಅಧಿಕೃತವಾಗಿ ನೇಮಿಸಲಾಗಿದೆ.

ಧಿಂಗ್ ಎಕ್ಸ್‌ಪ್ರೆಸ್ ಎಂದು ಖ್ಯಾತಿಯ ಅಸ್ಸಾಂನ 21 ವರ್ಷದ ಹಿಮಾ ದಾಸ್ ಪ್ರಸ್ತುತ ಎನ್‌ಐಎಸ್-ಪಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಗುರಿಯಲ್ಲಿ ತಲ್ಲೀನಳಾಗಿದ್ದಾಳೆ.

ಹಿಮಾ ದಾಸ್ ಹಿನ್ನೆಲೆ

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಅಥ್ಲೆಟಿಕ್ಸ್‌ನಲ್ಲಿ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಕೊರೊನಾಕ್ಕೂ ಮೊದಲು ಯೂರೋಪ್ ನಲ್ಲಿ ಹಿಮಾ ದಾಸ್ ರವರ ಸಾಧನೆಯ ವಿವರ ಹೀಗಿದೆ.

ಜುಲೈ 02 ರಂದು ಪೋಲಾಂಡ್ ನಲ್ಲಿ ನಡೆದ ಪ್ರೊಜ್ನಾನ್ ಗ್ರ್ಯಾನ್ ಫ್ರಿ ರೇಸ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಗೆಲುವು

ಜುಲೈ 07 ರಂದು ಪೋಲಾಂಡ್ ನಲ್ಲಿ ನಡೆದ ಕುಂಟೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಸಾಧನೆ

ಜುಲೈ 13 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ಕ್ಲಾಡೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಪದಕ

ಜುಲೈ 17 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ತಬೂರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಗೆಲುವು

ಜುಲೈ 20 ರಂದು ಪ್ರಾಗ್ ನಲ್ಲಿ ನಡೆದ ನೊವಾ ಮೆಸ್ಟೊ ಅಥ್ಲೆಟಿಕ್ ಕೂಟದಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಆಗಸ್ಟ್ 19 ರಂದು ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ ಮಿಟಿಂಗ್ ರೇಟರ್ ಸ್ಪರ್ಧೆಯ 300 ಮೀಟರ್ ಓಟದ ವಿಭಾಗದಲ್ಲಿ ಅವರು ಚಿನ್ನ ಗೆದ್ದಿದ್ದಾರೆ.


ಇದನ್ನೂ ಓದಿ: ಭತ್ತದ ಗದ್ದೆಯಿಂದ ವಿಶ್ವ ಅಥ್ಲೆಟಿಕ್ಸ್‌ವರೆಗೆ ಓಡಿದ ಚಿನ್ನದ ಹುಡುಗಿ ಹಿಮಾ ದಾಸ್ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...