Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...