Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...