Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...