Homeಸಿನಿಮಾಕ್ರೀಡೆಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

ಬದಲಾಗಬೇಕಿರುವುದು ದ್ಯುತಿಯ ನಿರ್ಧಾರವಲ್ಲ, ಸಮಾಜದ ಮನಸ್ಥಿತಿ

- Advertisement -
- Advertisement -

ತನ್ನ ಓಟದ ವೈಖರಿ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿದ್ದ ಭಾರತದ ಹಾಲಿ ರಾಷ್ಟ್ರೀಯ ಚಾಂಪಿಯನ್ ದ್ಯುತಿ ಚಾಂದ್, ತನ್ನ ಗೆಳತಿಯೊಂದಿಗೆ ಸಂಬಂಧ ಹೊಂದಿರುವುದಾಗಿ ನೀಡಿರುವ ಬಹಿರಂಗ ಹೇಳಿಕೆಯು ಎಲ್ಲೆಡೆ ಚರ್ಚಾಸ್ಪದ ವಿಷಯವಾಗಿದೆ.

ಒಡಿಶಾ ಮೂಲದ ದ್ಯುತಿ, 100 ಮೀಟರ್ಸ್ ಓಟದಲ್ಲಿ ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದಾಖಲೆ ಮಾಡಿದ್ದಾರೆ.

ಓಟಗಾರ್ತಿಯಾಗಿ ಪರಿಚಿತರಾಗಿದ್ದ ಇವರು ತನ್ನ ಗೆಳತಿಯೊಂದಿಗೆ ಸಂಬಂಧ ಇದ್ದು, ಪರಸ್ಪರ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸಲಿಂಗಕಾಮವನ್ನು ಬಹಿರಂಗವಾಗಿ ಹೇಳಿಕೊಂಡ ಮೊದಲ ಅಥ್ಲಿಟ್ ಎಂಬ ಹೆಗ್ಗಳಿಕೆಯು ಇವರದಾಗಿದೆ.

ದ್ಯುತಿ ಅವರ ಸಲಿಂಗಕಾಮದ ವಿಷಯವನ್ನು ತಿರಸ್ಕರಿಸಿರುವ ಅವರ ಕುಟುಂಬದ ಸದಸ್ಯರು, ಅವಳಿಗೆ ಏನು ತಿಳಿಯುವುದಿಲ್ಲ. ಯಾರದೋ ಒತ್ತಾಯಕ್ಕೆ ಮಣಿದು ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಯಿಂದ ಬಹಿಷ್ಕಾರ ಹಾಕುವುದಾಗಿಯೂ ಒತ್ತಡ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ದ್ಯುತಿ `ಸಂಗಾತಿಯ ಆಯ್ಕೆ ವೈಯಕ್ತಿಕವಾದದ್ದು, ನಾನು ನನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಪರಸ್ಪರ ಒಪ್ಪಿಗೆಯಿಂದಲೇ ನಾವಿಬ್ಬರು ಪ್ರೀತಿಸುತ್ತಿದ್ದೇವೆ. ನಾನು ಮೊದಲಿನಿಂದಲೂ ಸಲಿಂಗಕಾಮವನ್ನು ಬೆಂಬಲಿಸಿದ್ದೆ. ಇನ್ನು ಮುಂದೆಯೂ ಬೆಂಬಲಿಸುತ್ತೇನೆ. ನನ್ನ ಕುಟುಂಬದವರ ಒತ್ತಡಕ್ಕೆ ನಾನು ಮಣಿಯುವುದಿಲ್ಲ’ ಎಂದಿದ್ದಾರೆ.

ಅಥ್ಲೆಟ್‍ನಲ್ಲಿ ಮಿಂಚುತ್ತಿರುವ ದ್ಯುತಿ, ತನ್ನ ವೈಯಕ್ತಿಕ ಜೀವನದಲ್ಲಿ ತಾನು ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ದಿಟ್ಟತೆಯಿಂದಿರುವುದು ಸಂತಸದ ವಿಷಯ.

ಇದನ್ನು ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ಸುಪ್ರೀಂಕೋರ್ಟ್ ಕಳೆದ ವರ್ಷವಷ್ಟೇ `ಸಲಿಂಗಕಾಮ ಅಪರಾಧವಲ್ಲ’ ಎಂಬ ಕಾನೂನು ಭಾರತದಲ್ಲಿ ಮಾಡಿದೆ. ಆಗಿದ್ದರೂ ಸಲಿಂಗಕಾಮದ ಪ್ರಕರಣಗಳು ಬೆಳಕಿಗೆ ಬಂದಾಗ ಆ ವ್ಯಕ್ತಿಯ ಕುಟುಂಬವಾಗಲಿ, ಇಡೀ ಸಮಾಜವಾಗಲಿ ಅವರ ನಿರ್ಧಾರವನ್ನು ಒಪ್ಪಿಕೊಳ್ಳದೇ ಇರುವುದು ಇಡೀ ಸಮಾಜದ ಮೌಢ್ಯ, ಅಮಾನವೀಯ ಮನಸ್ಥಿತಿಯನ್ನು ತೋರಿಸುತ್ತದೆ.

ತಾನು ಇಷ್ಟಪಟ್ಟವರು ಅದೇ ಲಿಂಗದವರು ಎಂಬ ಕಾರಣಕ್ಕೆ ಕುಟುಂಬ ಹಾಗೂ ಇಡೀ ಸಮಾಜ ಅವರನ್ನು ಅಪರಾಧಿಯಾಗಿ ನೋಡುವುದು ಯಾವ ರೀತಿ ಸರಿ? ಪರಸ್ಪರ ಪ್ರೀತಿ ಹಾಗೂ ಸಮ್ಮತಿಯನ್ನು ಕುಟುಂಬವಾಗಲೀ ಸಮಾಜವಾಗಲೀ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದರ ಹಿಂದಿನ ಕಾರಣ ಸಮಾಜದಲ್ಲಿ ಸಲಿಂಗಕಾಮದ ಕುರಿತು ಅರಿವಿನ ಕೊರತೆ ಇರುವುದು ಕಂಡುಬರುತ್ತದೆ.

ದ್ಯುತಿ ಪ್ರಕರಣ ಮೊದಲನೆಯದಲ್ಲ. ಇಂತಹ ನೂರಾರು ಪ್ರೇಮ ಘಟನೆಗಳು ನಡೆದಿದ್ದರು ಅವು ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದ ಬೆರಳೆಣಿಕೆ ಪ್ರಕರಣಗಳಲ್ಲಿ ಆ ವ್ಯಕ್ತಿಯ ಅಭಿಪ್ರಾಯಕ್ಕಿಂತ ಜನರ ಅಭಿಪ್ರಾಯಗಳಿಗೆ ಮನ್ನಣೆ ದೊರೆತು, ವ್ಯಕ್ತಿಯ ಭಾವನೆಗಳನ್ನು ಚಿವುಟಿ ಹಾಕಲಾಗುತ್ತದೆ.

ಹಾಗಾಗಿ ಸಲಿಂಗಕಾಮದಂತಹ ಸೂಕ್ಷ್ಮ ಹಾಗೂ ಮಾನವೀಯ ಕಾನೂನುಗಳನ್ನು ಜಾರಿ ಮಾಡುವುದರ ಜೊತೆಗೆ ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯೂ ನ್ಯಾಯಾಂಗದ್ದಾಗಿರಬೇಕು. ಇಲ್ಲವಾದಲ್ಲಿ ಇಂತಹ ಎಷ್ಟೋ ಕಾನೂನುಗಳು ಪೇಪರ್ಗಳ ಪುಟಗಳಲ್ಲಿ ಮಾತ್ರ ಉಳಿದು ಹೋಗುವಂತಹ ಪರಿಸ್ಥಿತಿ ಬರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರಗಳು ಸಮಾಜದಲ್ಲಿ ಸಲಿಂಗಕಾಮದ ಕುರಿತಾಗಿ ಅರಿವು ಮೂಡಿಸಲು ಮುಂದಾಗಬೇಕು.

ಇದನ್ನು ಓದಿ: ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...